Advertisement
ಸುದ್ದಿಗಳು

ಪುತ್ತೂರು ಶಾಸಕರೊಂದಿಗೆ ಫೋಟೊ ವೈರಲ್‌ | ಮಹಿಳೆಯಿಂದ ಪೊಲೀಸ್‌ ದೂರು |‌ ಶಾಸಕರ ಸಂಪರ್ಕವೇ ಇರಲಿಲ್ಲ | ದುರುದ್ದೇಶಪೂರ್ವಕವಾಗಿ ಫೋಟೊ ಎಡಿಟ್- ಸ್ಪಷ್ಟನೆ |

Share

ಪುತ್ತೂರು ಬಿಜೆಪಿ ಶಾಸಕ ಸಂಜೀವ ಮಠಂದೂರು ಅವರ ಜೊತೆಗೆ ಮಹಿಳೆಯೊಬ್ಬರ ಫೋಟೋ ವೈರಲ್‌ ಆಗುತ್ತಿದ್ದಂತೆಯೇ ಮಹಿಳೆ ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ. ಶಾಸಕರಿಗೂ ನನಗೂ ಸಂಪರ್ಕವೇ ಇಲ್ಲ, ಉದ್ದೇಶಪೂರ್ವಕವಾಗಿ ಈ ರೀತಿ ಮಾಡಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಚುನಾವಣೆಯ ಸಮಯದಲ್ಲಿ ಪುತ್ತೂರು ಶಾಸಕರ ಈ ಪೋಟೋ ವೈರಲ್‌ ಆಗಿರುವುದು ಬಿಜೆಪಿಗೂ ಮುಜುಗರವಾಗಿದೆ.ಉದ್ದೇಶಪೂರ್ವಕವಾಗಿ ವಿಡಿಯೋ ಮತ್ತು ಫೋಟೊಗಳನ್ನು ಹರಿಯಬಿಡಲಾಗಿದೆ ಎಂದು ಬಿಜೆಪಿ ವಲಯದಲ್ಲಿ ಚರ್ಚೆಯೂ ಆಗುತ್ತಿದೆ. ಈ ನಡುವೆ   ಪುತ್ತೂರು ಶಾಸಕರು ಕೂಡಾ ದೂರು ನೀಡಿದ್ದಾರೆ.

ಫೋಟೋವನ್ನು ಯಾರೋ ಎಡಿಟ್ ಮಾಡಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆಂದು ಮಹಿಳೆ ದೂರಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೂ ಸ್ಪಷ್ಟನೆ ನೀಡಿದ್ದಾರೆ.  ಶಾಸಕರನ್ನು ಭೇಟಿ ಮಾಡುವ ಪ್ರಸಂಗ ಈ ಹಿಂದೆ ಬಂದಿರಲೇ ಇಲ್ಲ. ನನ್ನ ಫೋಟೋಗಳನ್ನು  ಎಡಿಟ್ ಮಾಡಿ ವೈರಲ್ ಮಾಡುತ್ತಿದ್ದಾರೆ. ಅದಕ್ಕೆ ನಾನು ಹೆದರುವ ಪ್ರಶ್ನೆಯೇ ಇಲ್ಲ. ಯಾಕಂದರೆ ನಾನು ಯಾವುದೇ ತಪ್ಪು ಮಾಡಿಲ್ಲ. ನನ್ನ ಫೋಟೋಗಳನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ಈ ರೀತಿ ಎಡಿಟ್ ಮಾಡಿ ಓರ್ವ ಮಹಿಳೆ ವಿರುದ್ಧ ಇಷ್ಟೊಂದು ದೊಡ್ಡ ಮಟ್ಟದ ಆರೋಪ ಮಾಡುವುದು ಸರಿ ಅಲ್ಲ ಎಂದು ಅವರು ಹೇಳಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

4 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

4 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

21 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

24 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

1 day ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

1 day ago