ಪುತ್ತೂರು ಬಿಜೆಪಿ ಶಾಸಕ ಸಂಜೀವ ಮಠಂದೂರು ಅವರ ಜೊತೆಗೆ ಮಹಿಳೆಯೊಬ್ಬರ ಫೋಟೋ ವೈರಲ್ ಆಗುತ್ತಿದ್ದಂತೆಯೇ ಮಹಿಳೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಶಾಸಕರಿಗೂ ನನಗೂ ಸಂಪರ್ಕವೇ ಇಲ್ಲ, ಉದ್ದೇಶಪೂರ್ವಕವಾಗಿ ಈ ರೀತಿ ಮಾಡಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಚುನಾವಣೆಯ ಸಮಯದಲ್ಲಿ ಪುತ್ತೂರು ಶಾಸಕರ ಈ ಪೋಟೋ ವೈರಲ್ ಆಗಿರುವುದು ಬಿಜೆಪಿಗೂ ಮುಜುಗರವಾಗಿದೆ.ಉದ್ದೇಶಪೂರ್ವಕವಾಗಿ ವಿಡಿಯೋ ಮತ್ತು ಫೋಟೊಗಳನ್ನು ಹರಿಯಬಿಡಲಾಗಿದೆ ಎಂದು ಬಿಜೆಪಿ ವಲಯದಲ್ಲಿ ಚರ್ಚೆಯೂ ಆಗುತ್ತಿದೆ. ಈ ನಡುವೆ ಪುತ್ತೂರು ಶಾಸಕರು ಕೂಡಾ ದೂರು ನೀಡಿದ್ದಾರೆ.
ಫೋಟೋವನ್ನು ಯಾರೋ ಎಡಿಟ್ ಮಾಡಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆಂದು ಮಹಿಳೆ ದೂರಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೂ ಸ್ಪಷ್ಟನೆ ನೀಡಿದ್ದಾರೆ. ಶಾಸಕರನ್ನು ಭೇಟಿ ಮಾಡುವ ಪ್ರಸಂಗ ಈ ಹಿಂದೆ ಬಂದಿರಲೇ ಇಲ್ಲ. ನನ್ನ ಫೋಟೋಗಳನ್ನು ಎಡಿಟ್ ಮಾಡಿ ವೈರಲ್ ಮಾಡುತ್ತಿದ್ದಾರೆ. ಅದಕ್ಕೆ ನಾನು ಹೆದರುವ ಪ್ರಶ್ನೆಯೇ ಇಲ್ಲ. ಯಾಕಂದರೆ ನಾನು ಯಾವುದೇ ತಪ್ಪು ಮಾಡಿಲ್ಲ. ನನ್ನ ಫೋಟೋಗಳನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ಈ ರೀತಿ ಎಡಿಟ್ ಮಾಡಿ ಓರ್ವ ಮಹಿಳೆ ವಿರುದ್ಧ ಇಷ್ಟೊಂದು ದೊಡ್ಡ ಮಟ್ಟದ ಆರೋಪ ಮಾಡುವುದು ಸರಿ ಅಲ್ಲ ಎಂದು ಅವರು ಹೇಳಿದ್ದಾರೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…