ಪುತ್ತೂರು ಬಿಜೆಪಿ ಶಾಸಕ ಸಂಜೀವ ಮಠಂದೂರು ಅವರ ಜೊತೆಗೆ ಮಹಿಳೆಯೊಬ್ಬರ ಫೋಟೋ ವೈರಲ್ ಆಗುತ್ತಿದ್ದಂತೆಯೇ ಮಹಿಳೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಶಾಸಕರಿಗೂ ನನಗೂ ಸಂಪರ್ಕವೇ ಇಲ್ಲ, ಉದ್ದೇಶಪೂರ್ವಕವಾಗಿ ಈ ರೀತಿ ಮಾಡಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಚುನಾವಣೆಯ ಸಮಯದಲ್ಲಿ ಪುತ್ತೂರು ಶಾಸಕರ ಈ ಪೋಟೋ ವೈರಲ್ ಆಗಿರುವುದು ಬಿಜೆಪಿಗೂ ಮುಜುಗರವಾಗಿದೆ.ಉದ್ದೇಶಪೂರ್ವಕವಾಗಿ ವಿಡಿಯೋ ಮತ್ತು ಫೋಟೊಗಳನ್ನು ಹರಿಯಬಿಡಲಾಗಿದೆ ಎಂದು ಬಿಜೆಪಿ ವಲಯದಲ್ಲಿ ಚರ್ಚೆಯೂ ಆಗುತ್ತಿದೆ. ಈ ನಡುವೆ ಪುತ್ತೂರು ಶಾಸಕರು ಕೂಡಾ ದೂರು ನೀಡಿದ್ದಾರೆ.
ಫೋಟೋವನ್ನು ಯಾರೋ ಎಡಿಟ್ ಮಾಡಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆಂದು ಮಹಿಳೆ ದೂರಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೂ ಸ್ಪಷ್ಟನೆ ನೀಡಿದ್ದಾರೆ. ಶಾಸಕರನ್ನು ಭೇಟಿ ಮಾಡುವ ಪ್ರಸಂಗ ಈ ಹಿಂದೆ ಬಂದಿರಲೇ ಇಲ್ಲ. ನನ್ನ ಫೋಟೋಗಳನ್ನು ಎಡಿಟ್ ಮಾಡಿ ವೈರಲ್ ಮಾಡುತ್ತಿದ್ದಾರೆ. ಅದಕ್ಕೆ ನಾನು ಹೆದರುವ ಪ್ರಶ್ನೆಯೇ ಇಲ್ಲ. ಯಾಕಂದರೆ ನಾನು ಯಾವುದೇ ತಪ್ಪು ಮಾಡಿಲ್ಲ. ನನ್ನ ಫೋಟೋಗಳನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ಈ ರೀತಿ ಎಡಿಟ್ ಮಾಡಿ ಓರ್ವ ಮಹಿಳೆ ವಿರುದ್ಧ ಇಷ್ಟೊಂದು ದೊಡ್ಡ ಮಟ್ಟದ ಆರೋಪ ಮಾಡುವುದು ಸರಿ ಅಲ್ಲ ಎಂದು ಅವರು ಹೇಳಿದ್ದಾರೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…