ಪುತ್ತೂರು ಬಿಜೆಪಿ ಶಾಸಕ ಸಂಜೀವ ಮಠಂದೂರು ಅವರ ಜೊತೆಗೆ ಮಹಿಳೆಯೊಬ್ಬರ ಫೋಟೋ ವೈರಲ್ ಆಗುತ್ತಿದ್ದಂತೆಯೇ ಮಹಿಳೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಶಾಸಕರಿಗೂ ನನಗೂ ಸಂಪರ್ಕವೇ ಇಲ್ಲ, ಉದ್ದೇಶಪೂರ್ವಕವಾಗಿ ಈ ರೀತಿ ಮಾಡಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಚುನಾವಣೆಯ ಸಮಯದಲ್ಲಿ ಪುತ್ತೂರು ಶಾಸಕರ ಈ ಪೋಟೋ ವೈರಲ್ ಆಗಿರುವುದು ಬಿಜೆಪಿಗೂ ಮುಜುಗರವಾಗಿದೆ.ಉದ್ದೇಶಪೂರ್ವಕವಾಗಿ ವಿಡಿಯೋ ಮತ್ತು ಫೋಟೊಗಳನ್ನು ಹರಿಯಬಿಡಲಾಗಿದೆ ಎಂದು ಬಿಜೆಪಿ ವಲಯದಲ್ಲಿ ಚರ್ಚೆಯೂ ಆಗುತ್ತಿದೆ. ಈ ನಡುವೆ ಪುತ್ತೂರು ಶಾಸಕರು ಕೂಡಾ ದೂರು ನೀಡಿದ್ದಾರೆ.
ಫೋಟೋವನ್ನು ಯಾರೋ ಎಡಿಟ್ ಮಾಡಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆಂದು ಮಹಿಳೆ ದೂರಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೂ ಸ್ಪಷ್ಟನೆ ನೀಡಿದ್ದಾರೆ. ಶಾಸಕರನ್ನು ಭೇಟಿ ಮಾಡುವ ಪ್ರಸಂಗ ಈ ಹಿಂದೆ ಬಂದಿರಲೇ ಇಲ್ಲ. ನನ್ನ ಫೋಟೋಗಳನ್ನು ಎಡಿಟ್ ಮಾಡಿ ವೈರಲ್ ಮಾಡುತ್ತಿದ್ದಾರೆ. ಅದಕ್ಕೆ ನಾನು ಹೆದರುವ ಪ್ರಶ್ನೆಯೇ ಇಲ್ಲ. ಯಾಕಂದರೆ ನಾನು ಯಾವುದೇ ತಪ್ಪು ಮಾಡಿಲ್ಲ. ನನ್ನ ಫೋಟೋಗಳನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ಈ ರೀತಿ ಎಡಿಟ್ ಮಾಡಿ ಓರ್ವ ಮಹಿಳೆ ವಿರುದ್ಧ ಇಷ್ಟೊಂದು ದೊಡ್ಡ ಮಟ್ಟದ ಆರೋಪ ಮಾಡುವುದು ಸರಿ ಅಲ್ಲ ಎಂದು ಅವರು ಹೇಳಿದ್ದಾರೆ.
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…