Advertisement
ಅನುಕ್ರಮ

ನಿತ್ಯ ಜಂಜಡದ ನಡುವೆ……… ಉಪ್ಪಿನಕಾಯಿಯ ಚಿಂತೆ..!

Share

ಸುಮಾರು ಎರಡು ತಿಂಗಳಿನಿಂದ ನಿತ್ಯ ಮುಂಜಾನೆಯ ತೋಟದ ವಾಕಿಂಗ್ ಕೊನೆಯಾಗಿದೆ…. ಎಂತ ಹೇಳುತ್ತಿದ್ದಾಳೆ ಅನ್ನಿಸಿತಾ? ಈ ವರುಷದ ಕಾಡು ಮಾವಿನ ಹಣ್ಣು ಮುಗಿಯಿತು ಎಂಬುದು ವಿಷಯ. ಎರಡು ಮೂರು ಕವರ್ ತಗೊಂಡು ಬೇರೆ ಬೇರೆ ಜಾತಿಯ ಮಾವಿನ ಹಣ್ಣು ಹೆಕ್ಕಲು ಓಡೋಡಿ ಹೋಗುತ್ತಿದ್ದ ಕೆಲಸಕ್ಕೆ ಸದ್ಯ ವಿರಾಮ. ಇನ್ನು ಮುಂದಿನ ವರ್ಷ. ಯಾವ ಮಾವಿನ ಮರ ಫಲ ಬಿಡ ಬಹುದು?

ಉಪ್ಪಿನಕಾಯಿ ಮಿಡಿ ಹಾಕುವ ಮರ ಈ ಬಾರಿ ಹೂ ಬಿಟ್ಟಿತ್ತು ಆದರೆ ಉಳಿಯಲಿಲ್ಲ. ಮುಂದಕ್ಕೆ ಆಗ ಬಹುದೋ ಇಲ್ಲವೋ ಗೊತ್ತಿಲ್ಲ. ಸ್ವಲ್ಪ ಹಾಕಿದ ಉಪ್ಪಿನಕಾಯಿ ಸಾಕಗ ಬಹುದೋ ಗೊತ್ತಿಲ್ಲ. ನೆಕ್ಕರೆ ಮಾವಿನಕಾಯಿಯ ತುಂಡು ಉಪ್ಪಿನಕಾಯಿಯೇ ಗತಿಯಾ ಗೊತ್ತಿಲ್ಲ. ಯಾವುದಕ್ಕೂ ಇರಲಿ ಅಂತ ಸ್ವಲ್ಪ ಬೇಯಿಸಿದ ತುಂಡು ಹಾಕಿ ಇಟ್ಟು ಕೊಂಡರೆ ಧೈರ್ಯ ಅಂತ ಮಾಡಿ ಇಟ್ಟದ್ದೂ ಆಗಿದೆ. ಮನೆ ಎಂದ ಮೇಲೆ ಉಪ್ಪಿನಕಾಯಿ ಇಲ್ಲದಿದ್ದರೆ ಆದೀತೇ? ಬೇರೆ ಏನೂ ಇಲ್ಲದಿದ್ದರೂ ಒಂದು ತುಂಡು ಉಪ್ಪಿನಕಾಯಿ, ನೀರು ಮಜ್ಜಿಗೆ ಇದ್ದರೆ ನಮಗೆ ಮೃಷ್ಟಾನ್ನವೇ.

ನಿತ್ಯ ಕಾರ್ಯಕ್ರಮಕ್ಕೆ ಹೋಗಿ ಗಡದ್ದು ಊಟ ಮಾಡಿ ಬಾಯಿ ಕೆಟ್ಟಾಗ ಲಿಂಬೆಹುಳಿಯ ಚಪ್ಪೆ ಉಪ್ಪಿನಕಾಯಿ ಮಜ್ಜಿಗೆಗೆ ಸರಿಸಾಟಿಯಾದದ್ದು ಬೇರೆ ಯಾವುದೂ ಇಲ್ಲ. ಅದರಲ್ಲೂ ಈ ಉಪ್ಪಿನಕಾಯಿಗೆ ಬೇವಿನ ಸೊಪ್ಪು, ಗಾಂಧಾರಿ ಮೆಣಸು, ಶುಂಠಿಯ ಸಣ್ಣ ತುಂಡು, ಬೆಳ್ಳುಳ್ಳಿಯ ಕೊಚ್ಚಲು ತೆಂಗಿನ ಎಣ್ಣೆಯ ಒಗ್ಗರಣೆಗೆ ಲಿಂಬೆ ಹುಳಿಯ ರಸ ತೆಗೆದ ಸಿಪ್ಪೆಯ ಪುಟ್ಟ ತುಂಡುಗಳನ್ನು ಹಾಕಿ ಮಾಡಿದ ಉಪ್ಪಿನ ಕಾಯಿ ಸೂಪರ್. ಒಮ್ಮೆ ಮಾಡಿ ಹೇಳಿ ಆಯ್ತಾ!

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

2 days ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

2 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

2 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

3 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

3 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

3 days ago