ಸಾವಯವ ತಾಲೂಕು-ಗೆಡ್ಡೆಗೆಣಸುಗಳ ಊರು ಜೋಯಿಡಾದಲ್ಲಿ ಬೆಳೆಗಳಿಗೆ ಹಂದಿ ಕಾಟ | ಕೃಷಿಗೆ ಅಪಾರ ಹಾನಿ

July 14, 2025
7:00 AM

ಸಾವಯವ ತಾಲೂಕು ಎಂದು ಘೋಷಣೆ ಮಾಡಲು ಸಿದ್ಧವಾಗಿರುವ ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನಲ್ಲಿ ಈಗ ಕೃಷಿಗೆ ಸಂಕಷ್ಟವಾಗಿದೆ. ಜೋಯಿಡಾ ತಾಲೂಕಿನಲ್ಲಿ ಗೆಡ್ಡೆ ಗೆಣಸುಗಳನ್ನು ಸಾವಯವ ಪದ್ಧತಿಯಲ್ಲಿ ಅನೇಕ ವರ್ಷಗಳಿಂದಲೂ ಸಾಂಪ್ರದಾಯಿಕವಾಗಿ ಬೆಳೆದುಕೊಂಡು ಬರಲಾಗಿದೆ. ಆದರೆ ಈಗ ಹಂದಿ ಮತ್ತು ಕಾಡು ಪ್ರಾಣಿಗಳ ಕಾಟದಿಂದ ರೈತರು ಹೈರಾಣಾಗಿ ಹೋಗಿದ್ದಾರೆ. ಅರಣ್ಯ ಇಲಾಖೆ ಹಾನಿಯಾದ ಬೆಳೆಗೆ ಯಾವುದೇ ಪರಿಹಾರವನ್ನು ನೀಡುತ್ತಿಲ್ಲ. ಇದನ್ನೇ ನಂಬಿದ ರೈತ ಕುಟುಂಬಗಳು ಗೆಡ್ಡೆ ಗೆಣಸು ಬೆಳೆಯುವುದನ್ನು ನಿಲ್ಲಿಸಲು ಮುಂದಾಗಿದ್ದಾರೆ.

Advertisement
Advertisement

ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎನ್ನುವ ಪರಿಸ್ಥಿತಿ ಈಗ ಜೋಯಿಡಾ ತಾಲೂಕಿನಲ್ಲಿ ಉದ್ಭವವಾಗಿದೆ. ತಾಲೂಕಿನ ಗೆಡ್ಡೆ ಗೆಣಸು ಹಾಗೂ ಕೆಸು ಗಡ್ಡೆಗೆ ರಾಷ್ಟ್ರೀಯ ಪ್ರಶಸ್ತಿ ಬಂದ ನಂತರ ಇದಕ್ಕೆ ಹೆಚ್ಚಿನ ಬೇಡಿಕೆ ಇದೆ. ಅನೇಕ ರೈತರು ಕೇಸು ಮತ್ತು ಇತರೆ ಗೆಡ್ಡೆ ಗೆಣಸುಗಳಾದ ಕಣಂಗ, ಕಾಟೆಕಣಂಗ, ಚಿರಕೊ, ನವಲಕೋನ್, ಕೊನ್, ಕಾಸರ ಆಳು, ಧವೆ ಆಳು ಸೇರಿದಂತೆ 40 ಕ್ಕೂ ಹೆಚ್ಚು ವಿವಿಧ ಜಾತಿಯ ಗೆಡ್ಡೆ ಗೆಣಸು (ಕಂದ ಮುಳೆ) ಬೆಳೆದು ಕುಟುಂಬ ನಿರ್ವಹಣೆ ಮಾಡುತ್ತಿದ್ದಾರೆ.

ಗೆಡ್ಡೆ ಗೆಣಸು ವಿಶೇಷ : ಜೋಯಿಡಾ ತಾಲೂಕಿನ ಗೆಡ್ಡೆ ಗೆಣಸುಗಳಿಗೆ ರಾಷ್ಟ್ರೀಯ ಪ್ರಶಸ್ತಿ ಬಂದನಂತರ ಹೆಚ್ಚಾಗಿ ಬೆಳಸುತ್ತಾರೆ. ಹಂದಿ ಕಾಟ ಹೆಚ್ಚಾಗಿದೆ. ಎಕರೆ ಗಟ್ಟಲೆ ಕೇಸು ಬೆಳೆ ಹಂದಿ ಪಾಲಾಗಿದೆ. ವಿದ್ಯುತ್‌ ಬೇಲಿ ಉಪಯೋಗಿಸಿದರು ಹಂದಿ ಕಾಟ ನಿಯಂತ್ರಣ ಅಸಾಧ್ಯವಾಗಿದೆ.

ಹಂದಿ ಮತ್ತು ಕಾಡು ಪ್ರಾಣಿಗಳ ಕಾಟ ನಿಯಂತ್ರಣಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಕಾಡು ಹಂದಿ ಕಾಟ ಹೆಚ್ಚಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳನ್ನು ಕೇಳಿದರೆ ಪರಿಹಾರ ನೀಡಲು ಅವಕಾಶ ಇಲ್ಲ ಎನ್ನುತ್ತಾರೆ. ಬೆಳೆ ರಕ್ಷಣೆಗೆ ವಿದ್ಯುತ್ ಬೇಲಿ ಅಥವಾ ಸಿಮೆಂಟಿನ ಗೋಡೆ ನಿರ್ಮಿಸಿ ಕೊಡುವ ಅಗತ್ಯ ಇದೆ ಎಂದು ರೈತರು ಆಗ್ರಹಿಸಿದ್ದಾರೆ.

ಕೆಸುವಿನ ಗೆಡ್ಡೆಗೆ ಹಂದಿ ದಾಳಿಯಿಂದಾಗಿ ಲಕ್ಷಾಂತರ ರೂಪಾಯಿ ಹಾನಿಯಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಕೇಳಿದರೆ ಪರಿಹಾರ ನೀಡಲು ಅವಕಾಶ ಇಲ್ಲ ಎನ್ನುತ್ತಾರೆ. ನಾವು ಹೈರಾಣಾಗಿದ್ದೇವೆ. ಪರಿಹಾರ ನೀಡುವಂತೆ ಆಗ್ರಹಿಸುತ್ತೇನೆ ಎಂದು ಒತ್ತಾಯಿಸಿದ್ದಾರೆ ರೈತ ಮಂಜುನಾಥ ಬುದೊ ಕಾಲೇಕರ.

Advertisement

(ಮಾಹಿತಿ: ದೀಪಕ್‌, ಜೋಯಿಡಾ)

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಫಸಲ್ ಭೀಮಾ ಯೋಜನೆ ಹಣ ಬಿಡುಗಡೆ | ಕಲಬುರಗಿ ಜಿಲ್ಲೆಗೆ ಹೆಚ್ಚಿನ ಬೆಳೆ ವಿಮೆ
July 26, 2025
3:56 PM
by: The Rural Mirror ಸುದ್ದಿಜಾಲ
ಲಡಾಖ್‌ನ ದ್ರಾಸುದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ| ವೀರಯೋಧರಿಗೆ ಪಾದಯಾತ್ರೆ ಮೂಲಕ ಗೌರವ
July 26, 2025
3:16 PM
by: The Rural Mirror ಸುದ್ದಿಜಾಲ
ಬದುಕಿಗೆ ಧರ್ಮದ ತಳಹದಿ ಅಗತ್ಯ : ರಾಘವೇಶ್ವರ ಶ್ರೀ
July 26, 2025
2:08 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 26-07-2025 | ಜುಲೈ ಅಂತ್ಯದವರೆಗೂ ಸಾಮಾನ್ಯ ಮಳೆ | ಕಾರಣ ಏನು ?
July 26, 2025
11:18 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group