MIRROR FOCUS

ಸಾವಯವ ತಾಲೂಕು-ಗೆಡ್ಡೆಗೆಣಸುಗಳ ಊರು ಜೋಯಿಡಾದಲ್ಲಿ ಬೆಳೆಗಳಿಗೆ ಹಂದಿ ಕಾಟ | ಕೃಷಿಗೆ ಅಪಾರ ಹಾನಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸಾವಯವ ತಾಲೂಕು ಎಂದು ಘೋಷಣೆ ಮಾಡಲು ಸಿದ್ಧವಾಗಿರುವ ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನಲ್ಲಿ ಈಗ ಕೃಷಿಗೆ ಸಂಕಷ್ಟವಾಗಿದೆ. ಜೋಯಿಡಾ ತಾಲೂಕಿನಲ್ಲಿ ಗೆಡ್ಡೆ ಗೆಣಸುಗಳನ್ನು ಸಾವಯವ ಪದ್ಧತಿಯಲ್ಲಿ ಅನೇಕ ವರ್ಷಗಳಿಂದಲೂ ಸಾಂಪ್ರದಾಯಿಕವಾಗಿ ಬೆಳೆದುಕೊಂಡು ಬರಲಾಗಿದೆ. ಆದರೆ ಈಗ ಹಂದಿ ಮತ್ತು ಕಾಡು ಪ್ರಾಣಿಗಳ ಕಾಟದಿಂದ ರೈತರು ಹೈರಾಣಾಗಿ ಹೋಗಿದ್ದಾರೆ. ಅರಣ್ಯ ಇಲಾಖೆ ಹಾನಿಯಾದ ಬೆಳೆಗೆ ಯಾವುದೇ ಪರಿಹಾರವನ್ನು ನೀಡುತ್ತಿಲ್ಲ. ಇದನ್ನೇ ನಂಬಿದ ರೈತ ಕುಟುಂಬಗಳು ಗೆಡ್ಡೆ ಗೆಣಸು ಬೆಳೆಯುವುದನ್ನು ನಿಲ್ಲಿಸಲು ಮುಂದಾಗಿದ್ದಾರೆ.

Advertisement
Advertisement

ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎನ್ನುವ ಪರಿಸ್ಥಿತಿ ಈಗ ಜೋಯಿಡಾ ತಾಲೂಕಿನಲ್ಲಿ ಉದ್ಭವವಾಗಿದೆ. ತಾಲೂಕಿನ ಗೆಡ್ಡೆ ಗೆಣಸು ಹಾಗೂ ಕೆಸು ಗಡ್ಡೆಗೆ ರಾಷ್ಟ್ರೀಯ ಪ್ರಶಸ್ತಿ ಬಂದ ನಂತರ ಇದಕ್ಕೆ ಹೆಚ್ಚಿನ ಬೇಡಿಕೆ ಇದೆ. ಅನೇಕ ರೈತರು ಕೇಸು ಮತ್ತು ಇತರೆ ಗೆಡ್ಡೆ ಗೆಣಸುಗಳಾದ ಕಣಂಗ, ಕಾಟೆಕಣಂಗ, ಚಿರಕೊ, ನವಲಕೋನ್, ಕೊನ್, ಕಾಸರ ಆಳು, ಧವೆ ಆಳು ಸೇರಿದಂತೆ 40 ಕ್ಕೂ ಹೆಚ್ಚು ವಿವಿಧ ಜಾತಿಯ ಗೆಡ್ಡೆ ಗೆಣಸು (ಕಂದ ಮುಳೆ) ಬೆಳೆದು ಕುಟುಂಬ ನಿರ್ವಹಣೆ ಮಾಡುತ್ತಿದ್ದಾರೆ.

ಗೆಡ್ಡೆ ಗೆಣಸು ವಿಶೇಷ : ಜೋಯಿಡಾ ತಾಲೂಕಿನ ಗೆಡ್ಡೆ ಗೆಣಸುಗಳಿಗೆ ರಾಷ್ಟ್ರೀಯ ಪ್ರಶಸ್ತಿ ಬಂದನಂತರ ಹೆಚ್ಚಾಗಿ ಬೆಳಸುತ್ತಾರೆ. ಹಂದಿ ಕಾಟ ಹೆಚ್ಚಾಗಿದೆ. ಎಕರೆ ಗಟ್ಟಲೆ ಕೇಸು ಬೆಳೆ ಹಂದಿ ಪಾಲಾಗಿದೆ. ವಿದ್ಯುತ್‌ ಬೇಲಿ ಉಪಯೋಗಿಸಿದರು ಹಂದಿ ಕಾಟ ನಿಯಂತ್ರಣ ಅಸಾಧ್ಯವಾಗಿದೆ.

ಹಂದಿ ಮತ್ತು ಕಾಡು ಪ್ರಾಣಿಗಳ ಕಾಟ ನಿಯಂತ್ರಣಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಕಾಡು ಹಂದಿ ಕಾಟ ಹೆಚ್ಚಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳನ್ನು ಕೇಳಿದರೆ ಪರಿಹಾರ ನೀಡಲು ಅವಕಾಶ ಇಲ್ಲ ಎನ್ನುತ್ತಾರೆ. ಬೆಳೆ ರಕ್ಷಣೆಗೆ ವಿದ್ಯುತ್ ಬೇಲಿ ಅಥವಾ ಸಿಮೆಂಟಿನ ಗೋಡೆ ನಿರ್ಮಿಸಿ ಕೊಡುವ ಅಗತ್ಯ ಇದೆ ಎಂದು ರೈತರು ಆಗ್ರಹಿಸಿದ್ದಾರೆ.

ಕೆಸುವಿನ ಗೆಡ್ಡೆಗೆ ಹಂದಿ ದಾಳಿಯಿಂದಾಗಿ ಲಕ್ಷಾಂತರ ರೂಪಾಯಿ ಹಾನಿಯಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಕೇಳಿದರೆ ಪರಿಹಾರ ನೀಡಲು ಅವಕಾಶ ಇಲ್ಲ ಎನ್ನುತ್ತಾರೆ. ನಾವು ಹೈರಾಣಾಗಿದ್ದೇವೆ. ಪರಿಹಾರ ನೀಡುವಂತೆ ಆಗ್ರಹಿಸುತ್ತೇನೆ ಎಂದು ಒತ್ತಾಯಿಸಿದ್ದಾರೆ ರೈತ ಮಂಜುನಾಥ ಬುದೊ ಕಾಲೇಕರ.

Advertisement

(ಮಾಹಿತಿ: ದೀಪಕ್‌, ಜೋಯಿಡಾ)

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಉತ್ಪನ್ನಗಳ ಮೌಲವರ್ಧನೆಗೆ ಪ್ರೋತ್ಸಾಹ | ಕೃಷಿ ಉದ್ಯಮಿಗಳಾಗುವಂತೆ ಉತ್ತೇಜನ

ರಾಮನಗರ ಜಿಲ್ಲೆಯಲ್ಲಿ  ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…

5 hours ago

ದಾವಣಗೆರೆ ಜಿಲ್ಲೆಗೆ ಮುಂದಿನ 2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಗೆ ಸಿದ್ಧತೆ

ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…

6 hours ago

ಬಳ್ಳಾರಿಯಲ್ಲಿ ತಾಳೆ ಬೆಳೆ ಕುರಿತ ತರಬೇತಿ ಕಾರ್ಯಕ್ರಮ

ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…

6 hours ago

ಹಾವೇರಿ ಜಿಲ್ಲೆಯಲ್ಲಿ ಹೆಚ್ಚುವರಿ ಯೂರಿಯಾ ರಸಗೊಬ್ಬರ ಪೂರೈಸುವಂತೆ  ಬೇಡಿಕೆ

ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ  ಪೂರೈಕೆಯಾಗಿದ್ದು,…

7 hours ago

ರಾಜ್ಯಕ್ಕೆ ಅಗತ್ಯ ರಸಗೊಬ್ಬರ ಪೂರೈಸುವಂತೆ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ

ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…

7 hours ago

ಅಮರನಾಥ ಯಾತ್ರೆ ಮುಂದುವರಿಕೆ | 9, 482 ಯಾತ್ರಿಕರಿಂದ ಪೂಜೆ ಸಲ್ಲಿಕೆ | 3.52 ಲಕ್ಷ ತಲುಪಿದ ಭಕ್ತರ ಸಂಖ್ಯೆ

ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ  ಸುಮಾರು…

7 hours ago