Advertisement
MIRROR FOCUS

ಸಾವಯವ ತಾಲೂಕು-ಗೆಡ್ಡೆಗೆಣಸುಗಳ ಊರು ಜೋಯಿಡಾದಲ್ಲಿ ಬೆಳೆಗಳಿಗೆ ಹಂದಿ ಕಾಟ | ಕೃಷಿಗೆ ಅಪಾರ ಹಾನಿ

Share

ಸಾವಯವ ತಾಲೂಕು ಎಂದು ಘೋಷಣೆ ಮಾಡಲು ಸಿದ್ಧವಾಗಿರುವ ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನಲ್ಲಿ ಈಗ ಕೃಷಿಗೆ ಸಂಕಷ್ಟವಾಗಿದೆ. ಜೋಯಿಡಾ ತಾಲೂಕಿನಲ್ಲಿ ಗೆಡ್ಡೆ ಗೆಣಸುಗಳನ್ನು ಸಾವಯವ ಪದ್ಧತಿಯಲ್ಲಿ ಅನೇಕ ವರ್ಷಗಳಿಂದಲೂ ಸಾಂಪ್ರದಾಯಿಕವಾಗಿ ಬೆಳೆದುಕೊಂಡು ಬರಲಾಗಿದೆ. ಆದರೆ ಈಗ ಹಂದಿ ಮತ್ತು ಕಾಡು ಪ್ರಾಣಿಗಳ ಕಾಟದಿಂದ ರೈತರು ಹೈರಾಣಾಗಿ ಹೋಗಿದ್ದಾರೆ. ಅರಣ್ಯ ಇಲಾಖೆ ಹಾನಿಯಾದ ಬೆಳೆಗೆ ಯಾವುದೇ ಪರಿಹಾರವನ್ನು ನೀಡುತ್ತಿಲ್ಲ. ಇದನ್ನೇ ನಂಬಿದ ರೈತ ಕುಟುಂಬಗಳು ಗೆಡ್ಡೆ ಗೆಣಸು ಬೆಳೆಯುವುದನ್ನು ನಿಲ್ಲಿಸಲು ಮುಂದಾಗಿದ್ದಾರೆ.

ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎನ್ನುವ ಪರಿಸ್ಥಿತಿ ಈಗ ಜೋಯಿಡಾ ತಾಲೂಕಿನಲ್ಲಿ ಉದ್ಭವವಾಗಿದೆ. ತಾಲೂಕಿನ ಗೆಡ್ಡೆ ಗೆಣಸು ಹಾಗೂ ಕೆಸು ಗಡ್ಡೆಗೆ ರಾಷ್ಟ್ರೀಯ ಪ್ರಶಸ್ತಿ ಬಂದ ನಂತರ ಇದಕ್ಕೆ ಹೆಚ್ಚಿನ ಬೇಡಿಕೆ ಇದೆ. ಅನೇಕ ರೈತರು ಕೇಸು ಮತ್ತು ಇತರೆ ಗೆಡ್ಡೆ ಗೆಣಸುಗಳಾದ ಕಣಂಗ, ಕಾಟೆಕಣಂಗ, ಚಿರಕೊ, ನವಲಕೋನ್, ಕೊನ್, ಕಾಸರ ಆಳು, ಧವೆ ಆಳು ಸೇರಿದಂತೆ 40 ಕ್ಕೂ ಹೆಚ್ಚು ವಿವಿಧ ಜಾತಿಯ ಗೆಡ್ಡೆ ಗೆಣಸು (ಕಂದ ಮುಳೆ) ಬೆಳೆದು ಕುಟುಂಬ ನಿರ್ವಹಣೆ ಮಾಡುತ್ತಿದ್ದಾರೆ.

ಗೆಡ್ಡೆ ಗೆಣಸು ವಿಶೇಷ : ಜೋಯಿಡಾ ತಾಲೂಕಿನ ಗೆಡ್ಡೆ ಗೆಣಸುಗಳಿಗೆ ರಾಷ್ಟ್ರೀಯ ಪ್ರಶಸ್ತಿ ಬಂದನಂತರ ಹೆಚ್ಚಾಗಿ ಬೆಳಸುತ್ತಾರೆ. ಹಂದಿ ಕಾಟ ಹೆಚ್ಚಾಗಿದೆ. ಎಕರೆ ಗಟ್ಟಲೆ ಕೇಸು ಬೆಳೆ ಹಂದಿ ಪಾಲಾಗಿದೆ. ವಿದ್ಯುತ್‌ ಬೇಲಿ ಉಪಯೋಗಿಸಿದರು ಹಂದಿ ಕಾಟ ನಿಯಂತ್ರಣ ಅಸಾಧ್ಯವಾಗಿದೆ.

ಹಂದಿ ಮತ್ತು ಕಾಡು ಪ್ರಾಣಿಗಳ ಕಾಟ ನಿಯಂತ್ರಣಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಕಾಡು ಹಂದಿ ಕಾಟ ಹೆಚ್ಚಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳನ್ನು ಕೇಳಿದರೆ ಪರಿಹಾರ ನೀಡಲು ಅವಕಾಶ ಇಲ್ಲ ಎನ್ನುತ್ತಾರೆ. ಬೆಳೆ ರಕ್ಷಣೆಗೆ ವಿದ್ಯುತ್ ಬೇಲಿ ಅಥವಾ ಸಿಮೆಂಟಿನ ಗೋಡೆ ನಿರ್ಮಿಸಿ ಕೊಡುವ ಅಗತ್ಯ ಇದೆ ಎಂದು ರೈತರು ಆಗ್ರಹಿಸಿದ್ದಾರೆ.

ಕೆಸುವಿನ ಗೆಡ್ಡೆಗೆ ಹಂದಿ ದಾಳಿಯಿಂದಾಗಿ ಲಕ್ಷಾಂತರ ರೂಪಾಯಿ ಹಾನಿಯಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಕೇಳಿದರೆ ಪರಿಹಾರ ನೀಡಲು ಅವಕಾಶ ಇಲ್ಲ ಎನ್ನುತ್ತಾರೆ. ನಾವು ಹೈರಾಣಾಗಿದ್ದೇವೆ. ಪರಿಹಾರ ನೀಡುವಂತೆ ಆಗ್ರಹಿಸುತ್ತೇನೆ ಎಂದು ಒತ್ತಾಯಿಸಿದ್ದಾರೆ ರೈತ ಮಂಜುನಾಥ ಬುದೊ ಕಾಲೇಕರ.

(ಮಾಹಿತಿ: ದೀಪಕ್‌, ಜೋಯಿಡಾ)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

16 hours ago

ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…

18 hours ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

22 hours ago

ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ

ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…

2 days ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

2 days ago