Advertisement
MIRROR FOCUS

ಸಾವಯವ ತಾಲೂಕು-ಗೆಡ್ಡೆಗೆಣಸುಗಳ ಊರು ಜೋಯಿಡಾದಲ್ಲಿ ಬೆಳೆಗಳಿಗೆ ಹಂದಿ ಕಾಟ | ಕೃಷಿಗೆ ಅಪಾರ ಹಾನಿ

Share

ಸಾವಯವ ತಾಲೂಕು ಎಂದು ಘೋಷಣೆ ಮಾಡಲು ಸಿದ್ಧವಾಗಿರುವ ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನಲ್ಲಿ ಈಗ ಕೃಷಿಗೆ ಸಂಕಷ್ಟವಾಗಿದೆ. ಜೋಯಿಡಾ ತಾಲೂಕಿನಲ್ಲಿ ಗೆಡ್ಡೆ ಗೆಣಸುಗಳನ್ನು ಸಾವಯವ ಪದ್ಧತಿಯಲ್ಲಿ ಅನೇಕ ವರ್ಷಗಳಿಂದಲೂ ಸಾಂಪ್ರದಾಯಿಕವಾಗಿ ಬೆಳೆದುಕೊಂಡು ಬರಲಾಗಿದೆ. ಆದರೆ ಈಗ ಹಂದಿ ಮತ್ತು ಕಾಡು ಪ್ರಾಣಿಗಳ ಕಾಟದಿಂದ ರೈತರು ಹೈರಾಣಾಗಿ ಹೋಗಿದ್ದಾರೆ. ಅರಣ್ಯ ಇಲಾಖೆ ಹಾನಿಯಾದ ಬೆಳೆಗೆ ಯಾವುದೇ ಪರಿಹಾರವನ್ನು ನೀಡುತ್ತಿಲ್ಲ. ಇದನ್ನೇ ನಂಬಿದ ರೈತ ಕುಟುಂಬಗಳು ಗೆಡ್ಡೆ ಗೆಣಸು ಬೆಳೆಯುವುದನ್ನು ನಿಲ್ಲಿಸಲು ಮುಂದಾಗಿದ್ದಾರೆ.

ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎನ್ನುವ ಪರಿಸ್ಥಿತಿ ಈಗ ಜೋಯಿಡಾ ತಾಲೂಕಿನಲ್ಲಿ ಉದ್ಭವವಾಗಿದೆ. ತಾಲೂಕಿನ ಗೆಡ್ಡೆ ಗೆಣಸು ಹಾಗೂ ಕೆಸು ಗಡ್ಡೆಗೆ ರಾಷ್ಟ್ರೀಯ ಪ್ರಶಸ್ತಿ ಬಂದ ನಂತರ ಇದಕ್ಕೆ ಹೆಚ್ಚಿನ ಬೇಡಿಕೆ ಇದೆ. ಅನೇಕ ರೈತರು ಕೇಸು ಮತ್ತು ಇತರೆ ಗೆಡ್ಡೆ ಗೆಣಸುಗಳಾದ ಕಣಂಗ, ಕಾಟೆಕಣಂಗ, ಚಿರಕೊ, ನವಲಕೋನ್, ಕೊನ್, ಕಾಸರ ಆಳು, ಧವೆ ಆಳು ಸೇರಿದಂತೆ 40 ಕ್ಕೂ ಹೆಚ್ಚು ವಿವಿಧ ಜಾತಿಯ ಗೆಡ್ಡೆ ಗೆಣಸು (ಕಂದ ಮುಳೆ) ಬೆಳೆದು ಕುಟುಂಬ ನಿರ್ವಹಣೆ ಮಾಡುತ್ತಿದ್ದಾರೆ.

ಗೆಡ್ಡೆ ಗೆಣಸು ವಿಶೇಷ : ಜೋಯಿಡಾ ತಾಲೂಕಿನ ಗೆಡ್ಡೆ ಗೆಣಸುಗಳಿಗೆ ರಾಷ್ಟ್ರೀಯ ಪ್ರಶಸ್ತಿ ಬಂದನಂತರ ಹೆಚ್ಚಾಗಿ ಬೆಳಸುತ್ತಾರೆ. ಹಂದಿ ಕಾಟ ಹೆಚ್ಚಾಗಿದೆ. ಎಕರೆ ಗಟ್ಟಲೆ ಕೇಸು ಬೆಳೆ ಹಂದಿ ಪಾಲಾಗಿದೆ. ವಿದ್ಯುತ್‌ ಬೇಲಿ ಉಪಯೋಗಿಸಿದರು ಹಂದಿ ಕಾಟ ನಿಯಂತ್ರಣ ಅಸಾಧ್ಯವಾಗಿದೆ.

ಹಂದಿ ಮತ್ತು ಕಾಡು ಪ್ರಾಣಿಗಳ ಕಾಟ ನಿಯಂತ್ರಣಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಕಾಡು ಹಂದಿ ಕಾಟ ಹೆಚ್ಚಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳನ್ನು ಕೇಳಿದರೆ ಪರಿಹಾರ ನೀಡಲು ಅವಕಾಶ ಇಲ್ಲ ಎನ್ನುತ್ತಾರೆ. ಬೆಳೆ ರಕ್ಷಣೆಗೆ ವಿದ್ಯುತ್ ಬೇಲಿ ಅಥವಾ ಸಿಮೆಂಟಿನ ಗೋಡೆ ನಿರ್ಮಿಸಿ ಕೊಡುವ ಅಗತ್ಯ ಇದೆ ಎಂದು ರೈತರು ಆಗ್ರಹಿಸಿದ್ದಾರೆ.

ಕೆಸುವಿನ ಗೆಡ್ಡೆಗೆ ಹಂದಿ ದಾಳಿಯಿಂದಾಗಿ ಲಕ್ಷಾಂತರ ರೂಪಾಯಿ ಹಾನಿಯಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಕೇಳಿದರೆ ಪರಿಹಾರ ನೀಡಲು ಅವಕಾಶ ಇಲ್ಲ ಎನ್ನುತ್ತಾರೆ. ನಾವು ಹೈರಾಣಾಗಿದ್ದೇವೆ. ಪರಿಹಾರ ನೀಡುವಂತೆ ಆಗ್ರಹಿಸುತ್ತೇನೆ ಎಂದು ಒತ್ತಾಯಿಸಿದ್ದಾರೆ ರೈತ ಮಂಜುನಾಥ ಬುದೊ ಕಾಲೇಕರ.

(ಮಾಹಿತಿ: ದೀಪಕ್‌, ಜೋಯಿಡಾ)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

36 minutes ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

3 hours ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

7 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

7 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

18 hours ago

ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ

ರಾಜ್ಯ ಬಜೆಟ್‌ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…

19 hours ago