ಸಾವಯವ ತಾಲೂಕು ಎಂದು ಘೋಷಣೆ ಮಾಡಲು ಸಿದ್ಧವಾಗಿರುವ ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನಲ್ಲಿ ಈಗ ಕೃಷಿಗೆ ಸಂಕಷ್ಟವಾಗಿದೆ. ಜೋಯಿಡಾ ತಾಲೂಕಿನಲ್ಲಿ ಗೆಡ್ಡೆ ಗೆಣಸುಗಳನ್ನು ಸಾವಯವ ಪದ್ಧತಿಯಲ್ಲಿ ಅನೇಕ ವರ್ಷಗಳಿಂದಲೂ ಸಾಂಪ್ರದಾಯಿಕವಾಗಿ ಬೆಳೆದುಕೊಂಡು ಬರಲಾಗಿದೆ. ಆದರೆ ಈಗ ಹಂದಿ ಮತ್ತು ಕಾಡು ಪ್ರಾಣಿಗಳ ಕಾಟದಿಂದ ರೈತರು ಹೈರಾಣಾಗಿ ಹೋಗಿದ್ದಾರೆ. ಅರಣ್ಯ ಇಲಾಖೆ ಹಾನಿಯಾದ ಬೆಳೆಗೆ ಯಾವುದೇ ಪರಿಹಾರವನ್ನು ನೀಡುತ್ತಿಲ್ಲ. ಇದನ್ನೇ ನಂಬಿದ ರೈತ ಕುಟುಂಬಗಳು ಗೆಡ್ಡೆ ಗೆಣಸು ಬೆಳೆಯುವುದನ್ನು ನಿಲ್ಲಿಸಲು ಮುಂದಾಗಿದ್ದಾರೆ.
ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎನ್ನುವ ಪರಿಸ್ಥಿತಿ ಈಗ ಜೋಯಿಡಾ ತಾಲೂಕಿನಲ್ಲಿ ಉದ್ಭವವಾಗಿದೆ. ತಾಲೂಕಿನ ಗೆಡ್ಡೆ ಗೆಣಸು ಹಾಗೂ ಕೆಸು ಗಡ್ಡೆಗೆ ರಾಷ್ಟ್ರೀಯ ಪ್ರಶಸ್ತಿ ಬಂದ ನಂತರ ಇದಕ್ಕೆ ಹೆಚ್ಚಿನ ಬೇಡಿಕೆ ಇದೆ. ಅನೇಕ ರೈತರು ಕೇಸು ಮತ್ತು ಇತರೆ ಗೆಡ್ಡೆ ಗೆಣಸುಗಳಾದ ಕಣಂಗ, ಕಾಟೆಕಣಂಗ, ಚಿರಕೊ, ನವಲಕೋನ್, ಕೊನ್, ಕಾಸರ ಆಳು, ಧವೆ ಆಳು ಸೇರಿದಂತೆ 40 ಕ್ಕೂ ಹೆಚ್ಚು ವಿವಿಧ ಜಾತಿಯ ಗೆಡ್ಡೆ ಗೆಣಸು (ಕಂದ ಮುಳೆ) ಬೆಳೆದು ಕುಟುಂಬ ನಿರ್ವಹಣೆ ಮಾಡುತ್ತಿದ್ದಾರೆ.
ಗೆಡ್ಡೆ ಗೆಣಸು ವಿಶೇಷ : ಜೋಯಿಡಾ ತಾಲೂಕಿನ ಗೆಡ್ಡೆ ಗೆಣಸುಗಳಿಗೆ ರಾಷ್ಟ್ರೀಯ ಪ್ರಶಸ್ತಿ ಬಂದನಂತರ ಹೆಚ್ಚಾಗಿ ಬೆಳಸುತ್ತಾರೆ. ಹಂದಿ ಕಾಟ ಹೆಚ್ಚಾಗಿದೆ. ಎಕರೆ ಗಟ್ಟಲೆ ಕೇಸು ಬೆಳೆ ಹಂದಿ ಪಾಲಾಗಿದೆ. ವಿದ್ಯುತ್ ಬೇಲಿ ಉಪಯೋಗಿಸಿದರು ಹಂದಿ ಕಾಟ ನಿಯಂತ್ರಣ ಅಸಾಧ್ಯವಾಗಿದೆ.
ಹಂದಿ ಮತ್ತು ಕಾಡು ಪ್ರಾಣಿಗಳ ಕಾಟ ನಿಯಂತ್ರಣಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಕಾಡು ಹಂದಿ ಕಾಟ ಹೆಚ್ಚಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳನ್ನು ಕೇಳಿದರೆ ಪರಿಹಾರ ನೀಡಲು ಅವಕಾಶ ಇಲ್ಲ ಎನ್ನುತ್ತಾರೆ. ಬೆಳೆ ರಕ್ಷಣೆಗೆ ವಿದ್ಯುತ್ ಬೇಲಿ ಅಥವಾ ಸಿಮೆಂಟಿನ ಗೋಡೆ ನಿರ್ಮಿಸಿ ಕೊಡುವ ಅಗತ್ಯ ಇದೆ ಎಂದು ರೈತರು ಆಗ್ರಹಿಸಿದ್ದಾರೆ.
ಕೆಸುವಿನ ಗೆಡ್ಡೆಗೆ ಹಂದಿ ದಾಳಿಯಿಂದಾಗಿ ಲಕ್ಷಾಂತರ ರೂಪಾಯಿ ಹಾನಿಯಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಕೇಳಿದರೆ ಪರಿಹಾರ ನೀಡಲು ಅವಕಾಶ ಇಲ್ಲ ಎನ್ನುತ್ತಾರೆ. ನಾವು ಹೈರಾಣಾಗಿದ್ದೇವೆ. ಪರಿಹಾರ ನೀಡುವಂತೆ ಆಗ್ರಹಿಸುತ್ತೇನೆ ಎಂದು ಒತ್ತಾಯಿಸಿದ್ದಾರೆ ರೈತ ಮಂಜುನಾಥ ಬುದೊ ಕಾಲೇಕರ.
(ಮಾಹಿತಿ: ದೀಪಕ್, ಜೋಯಿಡಾ)
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…