Advertisement
MIRROR FOCUS

ಸಾವಯವ ತಾಲೂಕು-ಗೆಡ್ಡೆಗೆಣಸುಗಳ ಊರು ಜೋಯಿಡಾದಲ್ಲಿ ಬೆಳೆಗಳಿಗೆ ಹಂದಿ ಕಾಟ | ಕೃಷಿಗೆ ಅಪಾರ ಹಾನಿ

Share

ಸಾವಯವ ತಾಲೂಕು ಎಂದು ಘೋಷಣೆ ಮಾಡಲು ಸಿದ್ಧವಾಗಿರುವ ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನಲ್ಲಿ ಈಗ ಕೃಷಿಗೆ ಸಂಕಷ್ಟವಾಗಿದೆ. ಜೋಯಿಡಾ ತಾಲೂಕಿನಲ್ಲಿ ಗೆಡ್ಡೆ ಗೆಣಸುಗಳನ್ನು ಸಾವಯವ ಪದ್ಧತಿಯಲ್ಲಿ ಅನೇಕ ವರ್ಷಗಳಿಂದಲೂ ಸಾಂಪ್ರದಾಯಿಕವಾಗಿ ಬೆಳೆದುಕೊಂಡು ಬರಲಾಗಿದೆ. ಆದರೆ ಈಗ ಹಂದಿ ಮತ್ತು ಕಾಡು ಪ್ರಾಣಿಗಳ ಕಾಟದಿಂದ ರೈತರು ಹೈರಾಣಾಗಿ ಹೋಗಿದ್ದಾರೆ. ಅರಣ್ಯ ಇಲಾಖೆ ಹಾನಿಯಾದ ಬೆಳೆಗೆ ಯಾವುದೇ ಪರಿಹಾರವನ್ನು ನೀಡುತ್ತಿಲ್ಲ. ಇದನ್ನೇ ನಂಬಿದ ರೈತ ಕುಟುಂಬಗಳು ಗೆಡ್ಡೆ ಗೆಣಸು ಬೆಳೆಯುವುದನ್ನು ನಿಲ್ಲಿಸಲು ಮುಂದಾಗಿದ್ದಾರೆ.

ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎನ್ನುವ ಪರಿಸ್ಥಿತಿ ಈಗ ಜೋಯಿಡಾ ತಾಲೂಕಿನಲ್ಲಿ ಉದ್ಭವವಾಗಿದೆ. ತಾಲೂಕಿನ ಗೆಡ್ಡೆ ಗೆಣಸು ಹಾಗೂ ಕೆಸು ಗಡ್ಡೆಗೆ ರಾಷ್ಟ್ರೀಯ ಪ್ರಶಸ್ತಿ ಬಂದ ನಂತರ ಇದಕ್ಕೆ ಹೆಚ್ಚಿನ ಬೇಡಿಕೆ ಇದೆ. ಅನೇಕ ರೈತರು ಕೇಸು ಮತ್ತು ಇತರೆ ಗೆಡ್ಡೆ ಗೆಣಸುಗಳಾದ ಕಣಂಗ, ಕಾಟೆಕಣಂಗ, ಚಿರಕೊ, ನವಲಕೋನ್, ಕೊನ್, ಕಾಸರ ಆಳು, ಧವೆ ಆಳು ಸೇರಿದಂತೆ 40 ಕ್ಕೂ ಹೆಚ್ಚು ವಿವಿಧ ಜಾತಿಯ ಗೆಡ್ಡೆ ಗೆಣಸು (ಕಂದ ಮುಳೆ) ಬೆಳೆದು ಕುಟುಂಬ ನಿರ್ವಹಣೆ ಮಾಡುತ್ತಿದ್ದಾರೆ.

ಗೆಡ್ಡೆ ಗೆಣಸು ವಿಶೇಷ : ಜೋಯಿಡಾ ತಾಲೂಕಿನ ಗೆಡ್ಡೆ ಗೆಣಸುಗಳಿಗೆ ರಾಷ್ಟ್ರೀಯ ಪ್ರಶಸ್ತಿ ಬಂದನಂತರ ಹೆಚ್ಚಾಗಿ ಬೆಳಸುತ್ತಾರೆ. ಹಂದಿ ಕಾಟ ಹೆಚ್ಚಾಗಿದೆ. ಎಕರೆ ಗಟ್ಟಲೆ ಕೇಸು ಬೆಳೆ ಹಂದಿ ಪಾಲಾಗಿದೆ. ವಿದ್ಯುತ್‌ ಬೇಲಿ ಉಪಯೋಗಿಸಿದರು ಹಂದಿ ಕಾಟ ನಿಯಂತ್ರಣ ಅಸಾಧ್ಯವಾಗಿದೆ.

ಹಂದಿ ಮತ್ತು ಕಾಡು ಪ್ರಾಣಿಗಳ ಕಾಟ ನಿಯಂತ್ರಣಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಕಾಡು ಹಂದಿ ಕಾಟ ಹೆಚ್ಚಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳನ್ನು ಕೇಳಿದರೆ ಪರಿಹಾರ ನೀಡಲು ಅವಕಾಶ ಇಲ್ಲ ಎನ್ನುತ್ತಾರೆ. ಬೆಳೆ ರಕ್ಷಣೆಗೆ ವಿದ್ಯುತ್ ಬೇಲಿ ಅಥವಾ ಸಿಮೆಂಟಿನ ಗೋಡೆ ನಿರ್ಮಿಸಿ ಕೊಡುವ ಅಗತ್ಯ ಇದೆ ಎಂದು ರೈತರು ಆಗ್ರಹಿಸಿದ್ದಾರೆ.

ಕೆಸುವಿನ ಗೆಡ್ಡೆಗೆ ಹಂದಿ ದಾಳಿಯಿಂದಾಗಿ ಲಕ್ಷಾಂತರ ರೂಪಾಯಿ ಹಾನಿಯಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಕೇಳಿದರೆ ಪರಿಹಾರ ನೀಡಲು ಅವಕಾಶ ಇಲ್ಲ ಎನ್ನುತ್ತಾರೆ. ನಾವು ಹೈರಾಣಾಗಿದ್ದೇವೆ. ಪರಿಹಾರ ನೀಡುವಂತೆ ಆಗ್ರಹಿಸುತ್ತೇನೆ ಎಂದು ಒತ್ತಾಯಿಸಿದ್ದಾರೆ ರೈತ ಮಂಜುನಾಥ ಬುದೊ ಕಾಲೇಕರ.

(ಮಾಹಿತಿ: ದೀಪಕ್‌, ಜೋಯಿಡಾ)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

15 hours ago

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…

15 hours ago

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

2 days ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

3 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

3 days ago