ಸಾವಯವ ತಾಲೂಕು ಎಂದು ಘೋಷಣೆ ಮಾಡಲು ಸಿದ್ಧವಾಗಿರುವ ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನಲ್ಲಿ ಈಗ ಕೃಷಿಗೆ ಸಂಕಷ್ಟವಾಗಿದೆ. ಜೋಯಿಡಾ ತಾಲೂಕಿನಲ್ಲಿ ಗೆಡ್ಡೆ ಗೆಣಸುಗಳನ್ನು ಸಾವಯವ ಪದ್ಧತಿಯಲ್ಲಿ ಅನೇಕ ವರ್ಷಗಳಿಂದಲೂ ಸಾಂಪ್ರದಾಯಿಕವಾಗಿ ಬೆಳೆದುಕೊಂಡು ಬರಲಾಗಿದೆ. ಆದರೆ ಈಗ ಹಂದಿ ಮತ್ತು ಕಾಡು ಪ್ರಾಣಿಗಳ ಕಾಟದಿಂದ ರೈತರು ಹೈರಾಣಾಗಿ ಹೋಗಿದ್ದಾರೆ. ಅರಣ್ಯ ಇಲಾಖೆ ಹಾನಿಯಾದ ಬೆಳೆಗೆ ಯಾವುದೇ ಪರಿಹಾರವನ್ನು ನೀಡುತ್ತಿಲ್ಲ. ಇದನ್ನೇ ನಂಬಿದ ರೈತ ಕುಟುಂಬಗಳು ಗೆಡ್ಡೆ ಗೆಣಸು ಬೆಳೆಯುವುದನ್ನು ನಿಲ್ಲಿಸಲು ಮುಂದಾಗಿದ್ದಾರೆ.
ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎನ್ನುವ ಪರಿಸ್ಥಿತಿ ಈಗ ಜೋಯಿಡಾ ತಾಲೂಕಿನಲ್ಲಿ ಉದ್ಭವವಾಗಿದೆ. ತಾಲೂಕಿನ ಗೆಡ್ಡೆ ಗೆಣಸು ಹಾಗೂ ಕೆಸು ಗಡ್ಡೆಗೆ ರಾಷ್ಟ್ರೀಯ ಪ್ರಶಸ್ತಿ ಬಂದ ನಂತರ ಇದಕ್ಕೆ ಹೆಚ್ಚಿನ ಬೇಡಿಕೆ ಇದೆ. ಅನೇಕ ರೈತರು ಕೇಸು ಮತ್ತು ಇತರೆ ಗೆಡ್ಡೆ ಗೆಣಸುಗಳಾದ ಕಣಂಗ, ಕಾಟೆಕಣಂಗ, ಚಿರಕೊ, ನವಲಕೋನ್, ಕೊನ್, ಕಾಸರ ಆಳು, ಧವೆ ಆಳು ಸೇರಿದಂತೆ 40 ಕ್ಕೂ ಹೆಚ್ಚು ವಿವಿಧ ಜಾತಿಯ ಗೆಡ್ಡೆ ಗೆಣಸು (ಕಂದ ಮುಳೆ) ಬೆಳೆದು ಕುಟುಂಬ ನಿರ್ವಹಣೆ ಮಾಡುತ್ತಿದ್ದಾರೆ.
ಗೆಡ್ಡೆ ಗೆಣಸು ವಿಶೇಷ : ಜೋಯಿಡಾ ತಾಲೂಕಿನ ಗೆಡ್ಡೆ ಗೆಣಸುಗಳಿಗೆ ರಾಷ್ಟ್ರೀಯ ಪ್ರಶಸ್ತಿ ಬಂದನಂತರ ಹೆಚ್ಚಾಗಿ ಬೆಳಸುತ್ತಾರೆ. ಹಂದಿ ಕಾಟ ಹೆಚ್ಚಾಗಿದೆ. ಎಕರೆ ಗಟ್ಟಲೆ ಕೇಸು ಬೆಳೆ ಹಂದಿ ಪಾಲಾಗಿದೆ. ವಿದ್ಯುತ್ ಬೇಲಿ ಉಪಯೋಗಿಸಿದರು ಹಂದಿ ಕಾಟ ನಿಯಂತ್ರಣ ಅಸಾಧ್ಯವಾಗಿದೆ.
ಹಂದಿ ಮತ್ತು ಕಾಡು ಪ್ರಾಣಿಗಳ ಕಾಟ ನಿಯಂತ್ರಣಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಕಾಡು ಹಂದಿ ಕಾಟ ಹೆಚ್ಚಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳನ್ನು ಕೇಳಿದರೆ ಪರಿಹಾರ ನೀಡಲು ಅವಕಾಶ ಇಲ್ಲ ಎನ್ನುತ್ತಾರೆ. ಬೆಳೆ ರಕ್ಷಣೆಗೆ ವಿದ್ಯುತ್ ಬೇಲಿ ಅಥವಾ ಸಿಮೆಂಟಿನ ಗೋಡೆ ನಿರ್ಮಿಸಿ ಕೊಡುವ ಅಗತ್ಯ ಇದೆ ಎಂದು ರೈತರು ಆಗ್ರಹಿಸಿದ್ದಾರೆ.
ಕೆಸುವಿನ ಗೆಡ್ಡೆಗೆ ಹಂದಿ ದಾಳಿಯಿಂದಾಗಿ ಲಕ್ಷಾಂತರ ರೂಪಾಯಿ ಹಾನಿಯಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಕೇಳಿದರೆ ಪರಿಹಾರ ನೀಡಲು ಅವಕಾಶ ಇಲ್ಲ ಎನ್ನುತ್ತಾರೆ. ನಾವು ಹೈರಾಣಾಗಿದ್ದೇವೆ. ಪರಿಹಾರ ನೀಡುವಂತೆ ಆಗ್ರಹಿಸುತ್ತೇನೆ ಎಂದು ಒತ್ತಾಯಿಸಿದ್ದಾರೆ ರೈತ ಮಂಜುನಾಥ ಬುದೊ ಕಾಲೇಕರ.
(ಮಾಹಿತಿ: ದೀಪಕ್, ಜೋಯಿಡಾ)
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…