ನ.17-18 | ಪಿಲಿಕುಳದಲ್ಲಿ ‘ಪಿಲಿಕುಳ ಕಂಬಳ’

November 2, 2024
6:54 PM

ಮಂಗಳೂರು ಹೊರವಲಯದ ಪಿಲಿಕುಳದ ಡಾ.ಶಿವರಾಮ ಕಾರಂತ ಜೈವಿಕ ಉದ್ಯಾನವನದಲ್ಲಿ ಈ ವರ್ಷದಿಂದ ಸರ್ಕಾರಿ ಪ್ರಾಯೋಜಿತ ‘ಪಿಲಿಕುಳ ಕಂಬಳ’ವನ್ನು ನ.17 ಮತ್ತು 18 ರಂದು ನಡೆಸಲು ನಿರ್ಧರಿಸಲಾಗಿದೆ.  ಡಿಸೆಂಬರ್‌ನಲ್ಲಿ ನಗರದ ಲಾಲ್‌ಬಾಗ್‌ನ ಕರಾವಳಿ ಉತ್ಸವ ಮೈದಾನದಲ್ಲಿ ಹಮ್ಮಿಕೊಳ್ಳಲಾಗುತ್ತಿದ್ದ ಕರಾವಳಿ ಉತ್ಸವದ ಪ್ರಮುಖ ಕಾರ್ಯಕ್ರಮಗಳನ್ನು ಪಿಲಿಕುಳಕ್ಕೂ ವಿಸ್ತರಿಸಲು ತೀರ್ಮಾನಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಕಂಬಳ ಆಯೋಜನೆ ಕುರಿತ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ದಿನೇಸ್ ಗುಂಡೂರಾವ್ ಅವರು, ಕಂಬಳಕ್ಕೆ ಸಂಬಂಧಿಸಿ ಮುಂದಿನ ರೂಪುರೇಷೆಗಳನ್ನು ಸಿದ್ಧಪಡಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಪಿಲಿಕುಳದಲ್ಲಿ ಕಂಬಳಕ್ಕೆ ಸಂಬಂಧಿಸಿ ಕಂಬಳ ಕರೆ ನಿರ್ಮಾಣದ ಕಾರ್ಯ ಶೇ.70 ರಷ್ಟು ಪೂರ್ಣಗೊಂಡಿದೆ. ಕರೆ ನಿರ್ಮಾಣ, ಕಂಬಳ ಆಯೋಜನೆ ಸೇರಿದಂತೆ ಸುಮಾರು 70 ಲಕ್ಷ ರೂ.ಅನುದಾನ ಅಗತ್ಯವಿದೆ. ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿಯವರು ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಿಂದ 5 ಲಕ್ಷ ರೂ.ಗಳನ್ನು ನಿರ್ಮಿತಿ ಕೇಂದ್ರಕ್ಕೆ ಹಸ್ತಾಂತರಿಸಿದ್ದಾರೆ ಎಂದು ಪ್ರವಾಸೋದ್ಯಮ ಇಲಾಖೆಯ ಪ್ರಭಾರ ಉಪ ನಿರ್ದೇಶಕಿ ರಶ್ಮಿ ಮಾಹಿತಿ ನೀಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 19-05-2026 | ಕರಾವಳಿಯಲ್ಲಿ ಮಳೆ ಕ್ಷೀಣಿಸುವ ಲಕ್ಷಣ – ಮೇ 27ರ ಸುಮಾರಿಗೆ ರಾಜ್ಯಕ್ಕೆ ಮುಂಗಾರು ಪ್ರವೇಶ ಸಾಧ್ಯತೆ
May 19, 2026
3:00 PM
by: ಸಾಯಿಶೇಖರ್ ಕರಿಕಳ
“ಮೇ 26ಕ್ಕೇ ಮುಂಗಾರು ಎಂಟ್ರಿ!” ಕರ್ನಾಟಕದಲ್ಲಿ ಭಾರೀ ಮಳೆ ಅಲರ್ಟ್‌, ಮೀನುಗಾರರಿಗೆ ಎಚ್ಚರಿಕೆ
May 18, 2026
10:14 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕಕ್ಕೆ ಭಾರೀ ಮಳೆ ಅಲರ್ಟ್‌ | ಬೆಂಗಳೂರಿನಲ್ಲಿ ಮಳೆ ಸಂಕಷ್ಟ, ಜಿಲ್ಲೆಗಳಲ್ಲಿ ಬೆಳೆಗಳು ಕೊಚ್ಚಿ ಹೋದವು…!
May 18, 2026
8:11 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 18-05-2026 | ಮೇ 26ರಿಂದ ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕು..? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ಸೂಚನೆ
May 18, 2026
2:51 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror