ಮಂಗಳೂರು ಹೊರವಲಯದ ಪಿಲಿಕುಳದ ಡಾ.ಶಿವರಾಮ ಕಾರಂತ ಜೈವಿಕ ಉದ್ಯಾನವನದಲ್ಲಿ ಈ ವರ್ಷದಿಂದ ಸರ್ಕಾರಿ ಪ್ರಾಯೋಜಿತ ‘ಪಿಲಿಕುಳ ಕಂಬಳ’ವನ್ನು ನ.17 ಮತ್ತು 18 ರಂದು ನಡೆಸಲು ನಿರ್ಧರಿಸಲಾಗಿದೆ. ಡಿಸೆಂಬರ್ನಲ್ಲಿ ನಗರದ ಲಾಲ್ಬಾಗ್ನ ಕರಾವಳಿ ಉತ್ಸವ ಮೈದಾನದಲ್ಲಿ ಹಮ್ಮಿಕೊಳ್ಳಲಾಗುತ್ತಿದ್ದ ಕರಾವಳಿ ಉತ್ಸವದ ಪ್ರಮುಖ ಕಾರ್ಯಕ್ರಮಗಳನ್ನು ಪಿಲಿಕುಳಕ್ಕೂ ವಿಸ್ತರಿಸಲು ತೀರ್ಮಾನಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಕಂಬಳ ಆಯೋಜನೆ ಕುರಿತ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ದಿನೇಸ್ ಗುಂಡೂರಾವ್ ಅವರು, ಕಂಬಳಕ್ಕೆ ಸಂಬಂಧಿಸಿ ಮುಂದಿನ ರೂಪುರೇಷೆಗಳನ್ನು ಸಿದ್ಧಪಡಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಪಿಲಿಕುಳದಲ್ಲಿ ಕಂಬಳಕ್ಕೆ ಸಂಬಂಧಿಸಿ ಕಂಬಳ ಕರೆ ನಿರ್ಮಾಣದ ಕಾರ್ಯ ಶೇ.70 ರಷ್ಟು ಪೂರ್ಣಗೊಂಡಿದೆ. ಕರೆ ನಿರ್ಮಾಣ, ಕಂಬಳ ಆಯೋಜನೆ ಸೇರಿದಂತೆ ಸುಮಾರು 70 ಲಕ್ಷ ರೂ.ಅನುದಾನ ಅಗತ್ಯವಿದೆ. ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿಯವರು ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಿಂದ 5 ಲಕ್ಷ ರೂ.ಗಳನ್ನು ನಿರ್ಮಿತಿ ಕೇಂದ್ರಕ್ಕೆ ಹಸ್ತಾಂತರಿಸಿದ್ದಾರೆ ಎಂದು ಪ್ರವಾಸೋದ್ಯಮ ಇಲಾಖೆಯ ಪ್ರಭಾರ ಉಪ ನಿರ್ದೇಶಕಿ ರಶ್ಮಿ ಮಾಹಿತಿ ನೀಡಿದರು.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…