ಚಂದ್ರಯಾನ 3ರ ಅಭೂತಪೂರ್ವ ಯಶಸ್ವಿನಿಂದ ಜಾಗತಿಕ ಮನ್ನಣೆಗಳಿಸಿದ ನಂತರ ಇಸ್ರೋ ಇನ್ನೊಂದು ಚಾರಿತ್ರಿಕ ಸಾಧನೆಗೆ ಮುಂದಾಗಿದೆ. ಹತ್ತಿರದ ಚಂದ್ರನಿಂದ ದೂರದ ಸೂರ್ಯನಿಗೆ ಗಮನಹರಿಸಿ ಭಾರತದ ಪ್ರಪ್ರಥಮ ಖಗೋಳ ಸೌರವೀಕ್ಷಣಾಲಯ ಆದಿತ್ಯ-ಎಲ್ 1 ಉಪಗ್ರಹವನ್ನು ಸೆ.2ರಂದು ಬೆಳಿಗ್ಗೆ 11.50ಕ್ಕೆ ಆಂಧ್ರದ ಶ್ರೀಹರಿಕೋಟ ಕೇಂದ್ರದಿಂದ ಉಡಾವಣೆ ಪ್ರಕ್ರಿಯೆ ಮಾಡುವುದಾಗಿ ಇಸ್ರೋ ಈಗಾಗಲೇ ಘೋಷಿಸಿದೆ.
ಪಿಲಿಕುಳ ವಿಜ್ಞಾನ ಕೇಂದ್ರವು ಆದಿತ್ಯ–ಎಲ್1 ಉಪಗ್ರಹದ ಮಾಹಿತಿ ಹಾಗೂ ಪ್ರಯೋಗಗಳ ಬಗ್ಗೆ ಇಸ್ರೋ ವಿಜ್ಞಾನಿಗಳ ನೇತೃತ್ವ ಹಾಗೂ ಭಾಗವಹಿಸುವಿಕೆಯೊಂದಿಗೆ ಜಿಲ್ಲೆಯ ಆಯ್ದ ಕಾಲೇಜುಗಳ ವಿದ್ಯಾರ್ಥಿಗಳಿಗೆ ಎರಡು ದಿನಗಳ ಪ್ರತ್ಯೇಕ ಕಾರ್ಯಗಾರಗಳನ್ನು ಆಯೋಜಿಸಿತ್ತು.
ಈಗ ಆದಿತ್ಯ-ಎಲ್1 ಉಪಗ್ರಹ ಉಡ್ಡಯನ ಸಂದರ್ಭದಲ್ಲಿ ವಿಜ್ಞಾನ ಕೇಂದ್ರ ಅದರ ನೇರಪ್ರಸಾರ ಹಾಗೂ ಭಿತ್ತಿ ಚಿತ್ರ ಪ್ರದರ್ಶನವನ್ನು ಬೆಳಿಗ್ಗೆ 11.30ಕ್ಕೆ ವಿಜ್ಞಾನ ಕೇಂದ್ರದ ಸಭಾಭವನದಲ್ಲಿ ಏರ್ಪಡಿಸಿದೆ. ಉಪಗ್ರಹದ ವಿವರಗಳನ್ನು ಕೇಂದ್ರದ ಸಿಬ್ಬಂದಿ ನೀಡಲಿದ್ದು, ಆಸಕ್ತರು ಭಾಗವಹಿಸುವಂತೆ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕರಾದ ಡಾ. ಕೆ.ವಿ. ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬರಗಾಲ(Drought) ಬಂದಾಗ ಬಾಯಿ ಬಡಿಕೊಳ್ಳುವವರೇ ಹೆಚ್ಚು. ನೀರಿಲ್ಲ, ಸೆಕೆ, ಮಳೆ ಇಲ್ಲ, ಬೆಳೆಗಳಿಗೆ…
ಪರಿಸರ(Environment) ಸ್ವಾಸ್ಥ್ಯದಿಂದರೇ ಮಾತ್ರ ಅದರ ಭಾಗವಾದ ಮಾನವರಾದ(Human) ನಾವು ಸ್ವಾಸ್ಥ್ಯದಿಂದಿರಬಹುದು. ನಮ್ಮ ಆರೋಗ್ಯಕ್ಕೆ(Health)…
ಭಾರತೀಯ(Indian) ಆಹಾರ ಪದ್ಧತಿಯಲ್ಲಿ(Food Style).... ಸಮುದ್ರದ ಉಪ್ಪು(Sea salt), ಅಯೋಡಿಕರಿಸಿದ ಟೇಬಲ್ ಉಪ್ಪು(Iodized…
ಪ್ರಕೃತಿ ವಿಕೋಪಕ್ಕೆ(Natural disaster) ರೈತ(Farmer) ಬೆಳೆದ ಬೆಳೆಗಳು(Crop) ನಾಶವಾಗುವುದು ಸಾಮಾನ್ಯ. ಮಳೆ(Rain) ಜಾಸ್ತಿಯಾಗಿ…
ಬರಗಾಲದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ಕೆಲವೆಡೆ ವರುಣರಾಯ(Rain) ಕೃಪೆ ತೋರಿ ತಕ್ಕಮಟ್ಟಿಗೆ ತಂಪೆರೆದಿದ್ದಾನೆ.…
ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…