ಚಂದ್ರಯಾನ 3ರ ಅಭೂತಪೂರ್ವ ಯಶಸ್ವಿನಿಂದ ಜಾಗತಿಕ ಮನ್ನಣೆಗಳಿಸಿದ ನಂತರ ಇಸ್ರೋ ಇನ್ನೊಂದು ಚಾರಿತ್ರಿಕ ಸಾಧನೆಗೆ ಮುಂದಾಗಿದೆ. ಹತ್ತಿರದ ಚಂದ್ರನಿಂದ ದೂರದ ಸೂರ್ಯನಿಗೆ ಗಮನಹರಿಸಿ ಭಾರತದ ಪ್ರಪ್ರಥಮ ಖಗೋಳ ಸೌರವೀಕ್ಷಣಾಲಯ ಆದಿತ್ಯ-ಎಲ್ 1 ಉಪಗ್ರಹವನ್ನು ಸೆ.2ರಂದು ಬೆಳಿಗ್ಗೆ 11.50ಕ್ಕೆ ಆಂಧ್ರದ ಶ್ರೀಹರಿಕೋಟ ಕೇಂದ್ರದಿಂದ ಉಡಾವಣೆ ಪ್ರಕ್ರಿಯೆ ಮಾಡುವುದಾಗಿ ಇಸ್ರೋ ಈಗಾಗಲೇ ಘೋಷಿಸಿದೆ.
ಪಿಲಿಕುಳ ವಿಜ್ಞಾನ ಕೇಂದ್ರವು ಆದಿತ್ಯ–ಎಲ್1 ಉಪಗ್ರಹದ ಮಾಹಿತಿ ಹಾಗೂ ಪ್ರಯೋಗಗಳ ಬಗ್ಗೆ ಇಸ್ರೋ ವಿಜ್ಞಾನಿಗಳ ನೇತೃತ್ವ ಹಾಗೂ ಭಾಗವಹಿಸುವಿಕೆಯೊಂದಿಗೆ ಜಿಲ್ಲೆಯ ಆಯ್ದ ಕಾಲೇಜುಗಳ ವಿದ್ಯಾರ್ಥಿಗಳಿಗೆ ಎರಡು ದಿನಗಳ ಪ್ರತ್ಯೇಕ ಕಾರ್ಯಗಾರಗಳನ್ನು ಆಯೋಜಿಸಿತ್ತು.
ಈಗ ಆದಿತ್ಯ-ಎಲ್1 ಉಪಗ್ರಹ ಉಡ್ಡಯನ ಸಂದರ್ಭದಲ್ಲಿ ವಿಜ್ಞಾನ ಕೇಂದ್ರ ಅದರ ನೇರಪ್ರಸಾರ ಹಾಗೂ ಭಿತ್ತಿ ಚಿತ್ರ ಪ್ರದರ್ಶನವನ್ನು ಬೆಳಿಗ್ಗೆ 11.30ಕ್ಕೆ ವಿಜ್ಞಾನ ಕೇಂದ್ರದ ಸಭಾಭವನದಲ್ಲಿ ಏರ್ಪಡಿಸಿದೆ. ಉಪಗ್ರಹದ ವಿವರಗಳನ್ನು ಕೇಂದ್ರದ ಸಿಬ್ಬಂದಿ ನೀಡಲಿದ್ದು, ಆಸಕ್ತರು ಭಾಗವಹಿಸುವಂತೆ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕರಾದ ಡಾ. ಕೆ.ವಿ. ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…