ಸುದ್ದಿಗಳು

ತೆಂಗಿನಲ್ಲಿ ಅರಳಿದ “ಪಿಂಗಾರ” | ತೆಂಗು ಕೊಯ್ಲು ತಂಡ ರಚನೆ ಮಾಡಿದ “ಪಿಂಗಾರ” ರೈತ ಉತ್ಪಾದಕ ಕಂಪನಿ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ವಿಟ್ಲದ ಪಿಂಗಾರ ತೋಟಗಾರಿಕಾ ರೈತ ಉತ್ಪಾದಕ ಕಂಪನಿ (FPO) ತೆಂಗು ಬೆಳೆಗಾರರಿಗೆ ಸಮಸ್ಯೆ ನಿವಾರಣೆಗೆ ಹೆಜ್ಜೆ ಇರಿಸಿದೆ. ತೆಂಗು ಕೊಯ್ಲು ಮಾಡುವ ತಂಡವನ್ನು ರಚನೆ ಮಾಡಿದ್ದು ಸೋಮವಾರ ಕೊಯ್ಲು ಆರಂಭಿಸಿದೆ. ಕಂಪನಿಯ ನಿರ್ದೇಶಕ ಜಯರಾಮ ರೈ ಅವರ ಮನೆಯಲ್ಲಿ  ತೆಂಗು ಕೊಯ್ಲು ತಂಡ ಕೆಲಸ ಆರಂಭಿಸಿತು.

Advertisement

ಬಂಟ್ವಾಳ ತಾಲೂಕು ವಿಟ್ಲದಲ್ಲಿರುವ ಪಿಂಗಾರ ತೋಟಗಾರಿಕಾ ರೈತ ಉತ್ಪಾದಕ ಕಂಪನಿಯು ಈಗಾಗಲೇ  ಅಡಿಕೆ ಕೊಯ್ಲು ತಂಡವನ್ನು ರಚಿಸಿದೆ. ಅಡಿಕೆ ಕೊಯ್ಲು, ಔಷಧಿ ಸಿಂಪಡಣೆಯ ಕೆಲಸ ನಡೆಸುತ್ತಿದ್ದು, ಇದೀಗ ತೆಂಗು ಕೊಯ್ಲು ಪಡೆಯನ್ನು ಸಿದ್ಧಗೊಳಿಸಿದೆ. ಈ ತಂಡದ ಕೆಲಸವನ್ನು ಅಡಿಕೆ ಪತ್ರಿಕೆ ಸಂಪಾದಕ ಶ್ರೀಪಡ್ರೆ ಉದ್ಘಾಟಿಸಿ ಶುಭಹಾರೈಸಿದರು.

ಈ ಸಂದರ್ಭ ಮಾತನಾಡಿದ ಅಡಿಕೆ ಪತ್ರಿಕೆ ಸಂಪಾದಕ ಶ್ರೀಪಡ್ರೆ, ತೆಂಗು ಕೊಯ್ಲು ತಂಡ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಆರಂಭವಾಗಿದೆ. ಈ ತಂಡ ಇನ್ನಷ್ಟು ವಿಸ್ತಾರಗೊಳ್ಳಬೇಕು. ಇದಕ್ಕಾಗಿ ಅಲ್ಲಲ್ಲಿ ಸಹಕಾರಿ ಸಂಘಗಳು, ಎಫ್‌ಪಿಒ ಗಳು ತಂಡಗಳನ್ನು ರಚನೆ ಮಾಡಬೇಕು, ಈ ಮೂಲಕ ಕೃಷಿಕರಿಗೆ ನೆರವಾಗಬಹುದು  ಎಂದು ಹೇಳಿದರು.

ಪಿಂಗಾರ ತೋಟಗಾರಿಕಾ ರೈತ ಉತ್ಪಾದಕ ಕಂಪನಿಯ ಅಧ್ಯಕ್ಷ ರಾಮ್‌ ಕಿಶೋರ್‌ ಮಂಚಿ ಮಾತನಾಡಿ, ಕರೆದಲ್ಲಿಗೆ ತೆರಳಿ ತೆಂಗು ಕೊಯ್ಲು ಮಾಡುವ ಯೋಜನೆ ಇದಾಗಿದೆ. ಸದ್ಯ ಸುಮಾರು 25 ಕಿಮೀ ವ್ಯಾಪ್ತಿಯನ್ನು ಆಯ್ಕೆ ಮಾಡಿಕೊಂಡಿದ್ದು ಮುಂದೆ ಅಗತ್ಯ ಬಿದ್ದರೆ ವಿಸ್ತರಣೆ ಮಾಡಲಾಗುವುದು  ಎಂದರು.

ಪಿಂಗಾರ ಸಂಸ್ಥೆಗೆ ಕರೆ ಮಾಡಿ ರೈತರು ಕೊಯ್ಲಿಗೆ ದಿನ ನಿಗದಿ ಮಾಡಬೇಕು. ನಿಗದಿತ ದಿನದಂದು ನಾಲ್ವರು ಕಾರ್ಮಿಕರ ಜೊತೆ ಓರ್ವ ಮ್ಯಾನೇಜರ್‌ ಓಮ್ನಿ ವಾಹನದಲ್ಲಿ ತೋಟಕ್ಕೇ ಬಂದು ತೆಂಗಿನ ಕೊನೆಗಳನ್ನು ಕತ್ತಿಯಿಂದ ಕಡಿದು ಕೊಡುತ್ತಾರೆ. ಒಂದು ಮರದ ಕೊಯ್ಲಿಗೆ 50 ರು. ನಿಗದಿಪಡಿಸಲಾಗಿದೆ. ಕನಿಷ್ಠ, ಗರಿಷ್ಠ ಮರಗಳ ಸಂಖ್ಯೆಯ ಮಿತಿ ಇಲ್ಲ, ಕರೆ ಬಂದಲ್ಲಿಗೆ ತೆರಳಿ ವರ್ಷಪೂರ್ತಿ ತಂಡ ಕಾರ್ಯಾಚರಿಸಲಿದೆ ಎಂದು ಹೇಳುತ್ತಾರೆ ಪಿಂಗಾರ ತೋಟಗಾರಿಕಾ ರೈತ ಉತ್ಪಾದಕ ಕಂಪನಿಯ ಸಿಇಒ ಪ್ರದೀಪ್.‌ ಪಿಂಗಾರ ಸಂಸ್ಥೆಯ ಸಂಪರ್ಕ ಸಂಖ್ಯೆ 08255265799 ಅಥವಾ 9480229008

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಹವಾಮಾನ ವರದಿ | 01-05-2025 | ಕೆಲವು ಕಡೆ ಸಂಜೆ ಮಳೆ ನಿರೀಕ್ಷೆ | ಮೇ.6 ರಿಂದ ಮತ್ತೆ ಮಳೆ ಆರಂಭ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಹಾಗೂ…

10 hours ago

ಅಪ್ಪ ಅಮ್ಮ ಇಲ್ಲದ ಪರೀಕ್ಷಾ ನಿಯಮಗಳು

ಉದ್ಯೋಗದ ಪರೀಕ್ಷೆಗಳಿಗೂ ಧಾರ್ಮಿಕ ಸಂಕೇತಗಳಿಗೂ ಯಾಕೆ ಹೊಂದಿ ಬರುವುದಿಲ್ಲ? ಇದೊಂದು ಮಿಲಿಯನ್ ಡಾಲರ್…

13 hours ago

ಮೇ 2- 6 | ಮಂಗಳೂರಿನಲ್ಲಿ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ

ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ ಮೇ ತಿಂಗಳ 2 ರಿಂದ…

16 hours ago

ಜೋಗ ಜಲಪಾತದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಮುಕ್ತಾಯ | ಪ್ರವಾಸಿಗರಿಗೆ ಪ್ರವೇಶಕ್ಕೆ ಅವಕಾಶ | ಜೋಗ ಇನ್ನು ಮತ್ತಷ್ಟು ಆಕರ್ಷಕ |

ವಿಶ್ವವಿಖ್ಯಾತ ಜೋಗ ಜಲಪಾತದಲ್ಲಿ  ಪ್ರವಾಸಿಗರನ್ನು ಮತ್ತಷ್ಟು ಆಕರ್ಷಿಸುವ ಹಿನ್ನೆಲೆಯಲ್ಲಿ  ರಾಜ್ಯ ಸರ್ಕಾರ  ವಿವಿಧ…

16 hours ago

ಹವಾಮಾನ ವರದಿ | 30-04-2025 | ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ |

ಈಗಿನಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಾಗೂ ಮೇ 5ರಿಂದ ಉತ್ತರ…

1 day ago

ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ

ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ…

2 days ago