Advertisement
ಸುದ್ದಿಗಳು

ತೆಂಗಿನಲ್ಲಿ ಅರಳಿದ “ಪಿಂಗಾರ” | ತೆಂಗು ಕೊಯ್ಲು ತಂಡ ರಚನೆ ಮಾಡಿದ “ಪಿಂಗಾರ” ರೈತ ಉತ್ಪಾದಕ ಕಂಪನಿ |

Share

ವಿಟ್ಲದ ಪಿಂಗಾರ ತೋಟಗಾರಿಕಾ ರೈತ ಉತ್ಪಾದಕ ಕಂಪನಿ (FPO) ತೆಂಗು ಬೆಳೆಗಾರರಿಗೆ ಸಮಸ್ಯೆ ನಿವಾರಣೆಗೆ ಹೆಜ್ಜೆ ಇರಿಸಿದೆ. ತೆಂಗು ಕೊಯ್ಲು ಮಾಡುವ ತಂಡವನ್ನು ರಚನೆ ಮಾಡಿದ್ದು ಸೋಮವಾರ ಕೊಯ್ಲು ಆರಂಭಿಸಿದೆ. ಕಂಪನಿಯ ನಿರ್ದೇಶಕ ಜಯರಾಮ ರೈ ಅವರ ಮನೆಯಲ್ಲಿ  ತೆಂಗು ಕೊಯ್ಲು ತಂಡ ಕೆಲಸ ಆರಂಭಿಸಿತು.

ಬಂಟ್ವಾಳ ತಾಲೂಕು ವಿಟ್ಲದಲ್ಲಿರುವ ಪಿಂಗಾರ ತೋಟಗಾರಿಕಾ ರೈತ ಉತ್ಪಾದಕ ಕಂಪನಿಯು ಈಗಾಗಲೇ  ಅಡಿಕೆ ಕೊಯ್ಲು ತಂಡವನ್ನು ರಚಿಸಿದೆ. ಅಡಿಕೆ ಕೊಯ್ಲು, ಔಷಧಿ ಸಿಂಪಡಣೆಯ ಕೆಲಸ ನಡೆಸುತ್ತಿದ್ದು, ಇದೀಗ ತೆಂಗು ಕೊಯ್ಲು ಪಡೆಯನ್ನು ಸಿದ್ಧಗೊಳಿಸಿದೆ. ಈ ತಂಡದ ಕೆಲಸವನ್ನು ಅಡಿಕೆ ಪತ್ರಿಕೆ ಸಂಪಾದಕ ಶ್ರೀಪಡ್ರೆ ಉದ್ಘಾಟಿಸಿ ಶುಭಹಾರೈಸಿದರು.

ಈ ಸಂದರ್ಭ ಮಾತನಾಡಿದ ಅಡಿಕೆ ಪತ್ರಿಕೆ ಸಂಪಾದಕ ಶ್ರೀಪಡ್ರೆ, ತೆಂಗು ಕೊಯ್ಲು ತಂಡ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಆರಂಭವಾಗಿದೆ. ಈ ತಂಡ ಇನ್ನಷ್ಟು ವಿಸ್ತಾರಗೊಳ್ಳಬೇಕು. ಇದಕ್ಕಾಗಿ ಅಲ್ಲಲ್ಲಿ ಸಹಕಾರಿ ಸಂಘಗಳು, ಎಫ್‌ಪಿಒ ಗಳು ತಂಡಗಳನ್ನು ರಚನೆ ಮಾಡಬೇಕು, ಈ ಮೂಲಕ ಕೃಷಿಕರಿಗೆ ನೆರವಾಗಬಹುದು  ಎಂದು ಹೇಳಿದರು.

ಪಿಂಗಾರ ತೋಟಗಾರಿಕಾ ರೈತ ಉತ್ಪಾದಕ ಕಂಪನಿಯ ಅಧ್ಯಕ್ಷ ರಾಮ್‌ ಕಿಶೋರ್‌ ಮಂಚಿ ಮಾತನಾಡಿ, ಕರೆದಲ್ಲಿಗೆ ತೆರಳಿ ತೆಂಗು ಕೊಯ್ಲು ಮಾಡುವ ಯೋಜನೆ ಇದಾಗಿದೆ. ಸದ್ಯ ಸುಮಾರು 25 ಕಿಮೀ ವ್ಯಾಪ್ತಿಯನ್ನು ಆಯ್ಕೆ ಮಾಡಿಕೊಂಡಿದ್ದು ಮುಂದೆ ಅಗತ್ಯ ಬಿದ್ದರೆ ವಿಸ್ತರಣೆ ಮಾಡಲಾಗುವುದು  ಎಂದರು.

ಪಿಂಗಾರ ಸಂಸ್ಥೆಗೆ ಕರೆ ಮಾಡಿ ರೈತರು ಕೊಯ್ಲಿಗೆ ದಿನ ನಿಗದಿ ಮಾಡಬೇಕು. ನಿಗದಿತ ದಿನದಂದು ನಾಲ್ವರು ಕಾರ್ಮಿಕರ ಜೊತೆ ಓರ್ವ ಮ್ಯಾನೇಜರ್‌ ಓಮ್ನಿ ವಾಹನದಲ್ಲಿ ತೋಟಕ್ಕೇ ಬಂದು ತೆಂಗಿನ ಕೊನೆಗಳನ್ನು ಕತ್ತಿಯಿಂದ ಕಡಿದು ಕೊಡುತ್ತಾರೆ. ಒಂದು ಮರದ ಕೊಯ್ಲಿಗೆ 50 ರು. ನಿಗದಿಪಡಿಸಲಾಗಿದೆ. ಕನಿಷ್ಠ, ಗರಿಷ್ಠ ಮರಗಳ ಸಂಖ್ಯೆಯ ಮಿತಿ ಇಲ್ಲ, ಕರೆ ಬಂದಲ್ಲಿಗೆ ತೆರಳಿ ವರ್ಷಪೂರ್ತಿ ತಂಡ ಕಾರ್ಯಾಚರಿಸಲಿದೆ ಎಂದು ಹೇಳುತ್ತಾರೆ ಪಿಂಗಾರ ತೋಟಗಾರಿಕಾ ರೈತ ಉತ್ಪಾದಕ ಕಂಪನಿಯ ಸಿಇಒ ಪ್ರದೀಪ್.‌ ಪಿಂಗಾರ ಸಂಸ್ಥೆಯ ಸಂಪರ್ಕ ಸಂಖ್ಯೆ 08255265799 ಅಥವಾ 9480229008

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

16 hours ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

21 hours ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

1 day ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

1 day ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

1 day ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

2 days ago