Advertisement
ಸುದ್ದಿಗಳು

ತೆಂಗಿನಲ್ಲಿ ಅರಳಿದ “ಪಿಂಗಾರ” | ತೆಂಗು ಕೊಯ್ಲು ತಂಡ ರಚನೆ ಮಾಡಿದ “ಪಿಂಗಾರ” ರೈತ ಉತ್ಪಾದಕ ಕಂಪನಿ |

Share

ವಿಟ್ಲದ ಪಿಂಗಾರ ತೋಟಗಾರಿಕಾ ರೈತ ಉತ್ಪಾದಕ ಕಂಪನಿ (FPO) ತೆಂಗು ಬೆಳೆಗಾರರಿಗೆ ಸಮಸ್ಯೆ ನಿವಾರಣೆಗೆ ಹೆಜ್ಜೆ ಇರಿಸಿದೆ. ತೆಂಗು ಕೊಯ್ಲು ಮಾಡುವ ತಂಡವನ್ನು ರಚನೆ ಮಾಡಿದ್ದು ಸೋಮವಾರ ಕೊಯ್ಲು ಆರಂಭಿಸಿದೆ. ಕಂಪನಿಯ ನಿರ್ದೇಶಕ ಜಯರಾಮ ರೈ ಅವರ ಮನೆಯಲ್ಲಿ  ತೆಂಗು ಕೊಯ್ಲು ತಂಡ ಕೆಲಸ ಆರಂಭಿಸಿತು.

ಬಂಟ್ವಾಳ ತಾಲೂಕು ವಿಟ್ಲದಲ್ಲಿರುವ ಪಿಂಗಾರ ತೋಟಗಾರಿಕಾ ರೈತ ಉತ್ಪಾದಕ ಕಂಪನಿಯು ಈಗಾಗಲೇ  ಅಡಿಕೆ ಕೊಯ್ಲು ತಂಡವನ್ನು ರಚಿಸಿದೆ. ಅಡಿಕೆ ಕೊಯ್ಲು, ಔಷಧಿ ಸಿಂಪಡಣೆಯ ಕೆಲಸ ನಡೆಸುತ್ತಿದ್ದು, ಇದೀಗ ತೆಂಗು ಕೊಯ್ಲು ಪಡೆಯನ್ನು ಸಿದ್ಧಗೊಳಿಸಿದೆ. ಈ ತಂಡದ ಕೆಲಸವನ್ನು ಅಡಿಕೆ ಪತ್ರಿಕೆ ಸಂಪಾದಕ ಶ್ರೀಪಡ್ರೆ ಉದ್ಘಾಟಿಸಿ ಶುಭಹಾರೈಸಿದರು.

ಈ ಸಂದರ್ಭ ಮಾತನಾಡಿದ ಅಡಿಕೆ ಪತ್ರಿಕೆ ಸಂಪಾದಕ ಶ್ರೀಪಡ್ರೆ, ತೆಂಗು ಕೊಯ್ಲು ತಂಡ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಆರಂಭವಾಗಿದೆ. ಈ ತಂಡ ಇನ್ನಷ್ಟು ವಿಸ್ತಾರಗೊಳ್ಳಬೇಕು. ಇದಕ್ಕಾಗಿ ಅಲ್ಲಲ್ಲಿ ಸಹಕಾರಿ ಸಂಘಗಳು, ಎಫ್‌ಪಿಒ ಗಳು ತಂಡಗಳನ್ನು ರಚನೆ ಮಾಡಬೇಕು, ಈ ಮೂಲಕ ಕೃಷಿಕರಿಗೆ ನೆರವಾಗಬಹುದು  ಎಂದು ಹೇಳಿದರು.

ಪಿಂಗಾರ ತೋಟಗಾರಿಕಾ ರೈತ ಉತ್ಪಾದಕ ಕಂಪನಿಯ ಅಧ್ಯಕ್ಷ ರಾಮ್‌ ಕಿಶೋರ್‌ ಮಂಚಿ ಮಾತನಾಡಿ, ಕರೆದಲ್ಲಿಗೆ ತೆರಳಿ ತೆಂಗು ಕೊಯ್ಲು ಮಾಡುವ ಯೋಜನೆ ಇದಾಗಿದೆ. ಸದ್ಯ ಸುಮಾರು 25 ಕಿಮೀ ವ್ಯಾಪ್ತಿಯನ್ನು ಆಯ್ಕೆ ಮಾಡಿಕೊಂಡಿದ್ದು ಮುಂದೆ ಅಗತ್ಯ ಬಿದ್ದರೆ ವಿಸ್ತರಣೆ ಮಾಡಲಾಗುವುದು  ಎಂದರು.

ಪಿಂಗಾರ ಸಂಸ್ಥೆಗೆ ಕರೆ ಮಾಡಿ ರೈತರು ಕೊಯ್ಲಿಗೆ ದಿನ ನಿಗದಿ ಮಾಡಬೇಕು. ನಿಗದಿತ ದಿನದಂದು ನಾಲ್ವರು ಕಾರ್ಮಿಕರ ಜೊತೆ ಓರ್ವ ಮ್ಯಾನೇಜರ್‌ ಓಮ್ನಿ ವಾಹನದಲ್ಲಿ ತೋಟಕ್ಕೇ ಬಂದು ತೆಂಗಿನ ಕೊನೆಗಳನ್ನು ಕತ್ತಿಯಿಂದ ಕಡಿದು ಕೊಡುತ್ತಾರೆ. ಒಂದು ಮರದ ಕೊಯ್ಲಿಗೆ 50 ರು. ನಿಗದಿಪಡಿಸಲಾಗಿದೆ. ಕನಿಷ್ಠ, ಗರಿಷ್ಠ ಮರಗಳ ಸಂಖ್ಯೆಯ ಮಿತಿ ಇಲ್ಲ, ಕರೆ ಬಂದಲ್ಲಿಗೆ ತೆರಳಿ ವರ್ಷಪೂರ್ತಿ ತಂಡ ಕಾರ್ಯಾಚರಿಸಲಿದೆ ಎಂದು ಹೇಳುತ್ತಾರೆ ಪಿಂಗಾರ ತೋಟಗಾರಿಕಾ ರೈತ ಉತ್ಪಾದಕ ಕಂಪನಿಯ ಸಿಇಒ ಪ್ರದೀಪ್.‌ ಪಿಂಗಾರ ಸಂಸ್ಥೆಯ ಸಂಪರ್ಕ ಸಂಖ್ಯೆ 08255265799 ಅಥವಾ 9480229008

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

7 hours ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

8 hours ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

8 hours ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

18 hours ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

20 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

1 day ago