ಅಡಿಕೆಗೆ ಔಷಧಿ ಸಿಂಪಡಣೆ ಜಾಬ್‌ ವರ್ಕ್‌ | ಅರಳಿದ “ಪಿಂಗಾರ” ಸಂಸ್ಥೆ | 7 ತಿಂಗಳಲ್ಲಿ 20 ಲಕ್ಷ ವ್ಯವಹಾರ |

September 20, 2022
7:00 AM

ಅಡಿಕೆಗೆ ಔಷಧಿ ಸಿಂಪಡಣೆ ಬಹುದೊಡ್ಡ ಸವಾಲು. ಕಾರಣ ನುರಿತ ಕಾರ್ಮಿಕರ ಕೊರತೆ ಹಾಗೂ ಮಳೆಗಾಲ  ಮರ ಏರುವ ಸಮಸ್ಯೆ. ಇದಕ್ಕೆ ಪರಿಹಾರವಾಗಿ ಪೈಬರ್‌ ದೋಟಿ ಬಳಕೆಗೆ ಬಂದಿತು. ಇದಕ್ಕಾಗಿಯೇ ತರಬೇತಿ ನಡೆಯಿತು. ಕೆಲವು ಕಡೆ ಜಾಬ್‌ ವರ್ಕ್‌ ಆರಂಭವಾದವು. ಇಂತಹ ಜಾಬ್‌ ವರ್ಕ್‌ ಮಾಡಿದ ಮುಂಚೂಣಿಯಲ್ಲಿರುವ ಸಂಸ್ಥೆ ವಿಟ್ಲ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಎಫ್‌ ಪಿ ಒ ಪಿಂಗಾರ. ಈ ವರ್ಷ ದೋಟಿ ತಂಡದ ಮೂಲಕ 20 ಲಕ್ಷ ವ್ಯವಹಾರ ನಡೆಸಿದೆ. ಸಂಸ್ಥೆಯನ್ನು ರಾಮ್‌ ಕಿಶೋರ್‌ ಮಂಚಿ ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ.

ಅಡಿಕೆ ಕೃಷಿಕರಿಗೆ ವರವಾಗುವಂತಹ ಕಾರ್ಯವೊಂದನ್ನು  ವಿಟ್ಲದ ಪಿಂಗಾರ ಸಂಸ್ಥೆ ಮಾಡಿದೆ. ಪಿಂಗಾರವು ರೈತರಿಂದಲೇ ರಚನೆಯಾದ ಸಂಸ್ಥೆ. ರೈತ ಪರವಾದ ಹಲವು ಕಾರ್ಯಕ್ರಮ, ಯೋಜನೆಗಳನ್ನು ಕಾರ್ಯರೂಪಕ್ಕೆ ಇಳಿಸುತ್ತಿರುವ ಈ ಸಂಸ್ಥೆ ಈ ಬಾರಿ ಅಡಿಕೆ ಬೆಳೆಗಾರರಿಗೆ ನೆರವಾಗುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇರಿಸಿತ್ತು. ಕಾರ್ಬನ್‌ ಪೈಬರ್‌ ದೋಟಿ ಮೂಲಕ ಅಡಿಕೆ ಕೊಯ್ಲು ಹಾಗೂ ಔಷಧಿ ಸಿಂಪಡಣೆಗೆ ಸಾಧ್ಯ ಎಂಬುದು ಮನಗಂಡ ಬಳಿಕ ಈ ಸಂಸ್ಥೆ ಅಡಿಕೆ ಕೊಯ್ಲು ಹಾಗೂ ಔಷಧಿ ಸಿಂಪಡಣೆಗೆ ಜಾಬ್‌ ವರ್ಕ್‌ ನಡೆಸಲು ಸಿದ್ಧತೆ ನಡೆಸಿ ಮಾರ್ಚ್‌ ಆರಂಭದಿಂದ ಈ ಕೆಲಸ ಆರಂಭಿಸಿತು. ಇದೀಗ ಒಟ್ಟು 20 ಲಕ್ಷ ವ್ಯವಹಾರ ಇದೇ ಕಾರ್ಯದಿಂದ ನಡೆಸಿದೆ.

ಇಲ್ಲಿ ಇದಕ್ಕಾಗಿಯೇ 22 ಜನ ಕೆಲಸ ಮಾಡಿದ್ದಾರೆ. ಪಿಂಗಾರ ಸಂಸ್ಥೆಯ ವತಿಯಿಂದಲೇ ಖಾಯಂ ಆಗಿರುವ 12 ಜನ ಇದ್ದರೆ ಉಳಿದವರೆಲ್ಲಾ ಅಗತ್ಯ ಇದ್ದಾಗ ನೆರವಾಗುವ ತಂಡ. ದೋಟಿ ಹಾಗೂ ಪಂಪ್‌ ಸೇರಿದಂತೆ ಸುಮಾರು 10 ಲಕ್ಷ ರೂಪಾಯಿ ದೋಟಿಯ ಜಾಬ್‌ ವರ್ಕ್‌ ತಂಡಕ್ಕೆ ವಿನಿಯೋಗಿಸಿದ ಪಿಂಗಾರ ಸಂಸ್ಥೆ ಈ ವರ್ಷ ಮೊದಲ ಹೆಜ್ಜೆಯಲ್ಲಿ 20 ಲಕ್ಷ ವ್ಯವಹಾರ ಮಾಡಿದೆ. ವಿಟ್ಲ, ಪುಣಚ, ಪುತ್ತೂರು ಸೇರಿದಂತೆ ಕಾಸರಗೋಡು, ಕಡಬ ಪ್ರದೇಶದ ಕೆಲವು ಅಡಿಕೆ ಬೆಳೆಗಾರರ ತೋಟಗಳಿಗೆ ತೆರಳಿ ಔಷಧಿ ಸಿಂಪಡಣೆ ಹಾಗೂ ಅಡಿಕೆ ಕೊಯ್ಲು ಮಾಡಿದ್ದಾರೆ. ಒಟ್ಟು 8 ದೋಟಿ ಬಳಕೆಯಾಗಿದೆ. ತೀರಾ ಬೇಡಿಕೆ ಇದ್ದಾಗ ಬಾಡಿಗೆಗೆ ಪಡೆದು 11 ದೋಟಿಯವರೆಗೂ ಕೆಲಸ ಮಾಡಿದ್ದಾರೆ. ಆರಂಭದಲ್ಲಿ ಅಡಿಕೆ ಔಷಧಿ ಸಿಂಪಡಣೆಯ  ಜಾಬ್‌ ವರ್ಕ್‌ ಮೂಲಕ ಯಶಸ್ವಿಯಾದ ಪಿಂಗಾರ ಸಂಸ್ಥೆ ಈಗ ಮಾದರಿಯಾಗಿದೆ.

ಕಳೆದ ಮಾರ್ಚ್‌ ತಿಂಗಳಿನಿಂದ ಅಡಿಕೆ ಬೆಳೆಗಾರರ ಹಿತಕ್ಕಾಗಿ, ಔಷಧಿ ಸಿಂಪಡಣೆಯ ಸಮಸ್ಯೆ ನಿವಾರಣೆಗೆ ಪಿಂಗಾರ ಸಂಸ್ಥೆಯು ತಂಡವನ್ನು ರಚನೆ ಮಾಡಿ ಪೈಬರ್‌ ದೋಟಿಯ ಮೂಲಕ ಕೆಲಸ ಆರಂಭಿಸಿದೆ. ಈಗಾಗಲೇ 20 ಲಕ್ಷ ವ್ಯವಹಾರ ದೋಟಿಯ ಮೂಲಕ ಸಂಸ್ಥೆ ನಡೆಸಿದೆ ಎನ್ನುತ್ತಾರೆ ಪಿಂಗಾರ ಸಂಸ್ಥೆಯ ಅಧ್ಯಕ್ಷ ರಾಮ್‌ ಕಿಶೋರ್‌ ಮಂಚಿ.[/su_quote]

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

ಇದನ್ನೂ ಓದಿ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ
June 16, 2026
8:15 PM
by: ದ ರೂರಲ್ ಮಿರರ್.ಕಾಂ
ಬಿಡದಿ ಟೌನ್‌ಶಿಪ್‌ಗೆ 2 ಲಕ್ಷಕ್ಕೂ ಹೆಚ್ಚು ಮರಗಳ ಕತ್ತರಿ…? – ಯೋಜನೆಗೆ ಪರಿಸರವಾದಿಗಳು, ರೈತರಿಂದ ತೀವ್ರ ವಿರೋಧ
June 16, 2026
7:33 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-06-2026 | ರಾಜ್ಯದಲ್ಲಿ ಇನ್ನೂ ದುರ್ಬಲ ಮಳೆ ಚಟುವಟಿಕೆ – ಜೂ.22 ರಿಂದ ಕರಾವಳಿಯಲ್ಲಿ ಮುಂಗಾರು ಚೇತರಿಕೆ ಸಾಧ್ಯತೆ
June 16, 2026
2:16 PM
by: ಸಾಯಿಶೇಖರ್ ಕರಿಕಳ
ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು
June 15, 2026
9:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror