Advertisement
MIRROR FOCUS

ಅಡಿಕೆಗೆ ಔಷಧಿ ಸಿಂಪಡಣೆ ಜಾಬ್‌ ವರ್ಕ್‌ | ಅರಳಿದ “ಪಿಂಗಾರ” ಸಂಸ್ಥೆ | 7 ತಿಂಗಳಲ್ಲಿ 20 ಲಕ್ಷ ವ್ಯವಹಾರ |

Share

ಅಡಿಕೆಗೆ ಔಷಧಿ ಸಿಂಪಡಣೆ ಬಹುದೊಡ್ಡ ಸವಾಲು. ಕಾರಣ ನುರಿತ ಕಾರ್ಮಿಕರ ಕೊರತೆ ಹಾಗೂ ಮಳೆಗಾಲ  ಮರ ಏರುವ ಸಮಸ್ಯೆ. ಇದಕ್ಕೆ ಪರಿಹಾರವಾಗಿ ಪೈಬರ್‌ ದೋಟಿ ಬಳಕೆಗೆ ಬಂದಿತು. ಇದಕ್ಕಾಗಿಯೇ ತರಬೇತಿ ನಡೆಯಿತು. ಕೆಲವು ಕಡೆ ಜಾಬ್‌ ವರ್ಕ್‌ ಆರಂಭವಾದವು. ಇಂತಹ ಜಾಬ್‌ ವರ್ಕ್‌ ಮಾಡಿದ ಮುಂಚೂಣಿಯಲ್ಲಿರುವ ಸಂಸ್ಥೆ ವಿಟ್ಲ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಎಫ್‌ ಪಿ ಒ ಪಿಂಗಾರ. ಈ ವರ್ಷ ದೋಟಿ ತಂಡದ ಮೂಲಕ 20 ಲಕ್ಷ ವ್ಯವಹಾರ ನಡೆಸಿದೆ. ಸಂಸ್ಥೆಯನ್ನು ರಾಮ್‌ ಕಿಶೋರ್‌ ಮಂಚಿ ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ.

ಅಡಿಕೆ ಕೃಷಿಕರಿಗೆ ವರವಾಗುವಂತಹ ಕಾರ್ಯವೊಂದನ್ನು  ವಿಟ್ಲದ ಪಿಂಗಾರ ಸಂಸ್ಥೆ ಮಾಡಿದೆ. ಪಿಂಗಾರವು ರೈತರಿಂದಲೇ ರಚನೆಯಾದ ಸಂಸ್ಥೆ. ರೈತ ಪರವಾದ ಹಲವು ಕಾರ್ಯಕ್ರಮ, ಯೋಜನೆಗಳನ್ನು ಕಾರ್ಯರೂಪಕ್ಕೆ ಇಳಿಸುತ್ತಿರುವ ಈ ಸಂಸ್ಥೆ ಈ ಬಾರಿ ಅಡಿಕೆ ಬೆಳೆಗಾರರಿಗೆ ನೆರವಾಗುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇರಿಸಿತ್ತು. ಕಾರ್ಬನ್‌ ಪೈಬರ್‌ ದೋಟಿ ಮೂಲಕ ಅಡಿಕೆ ಕೊಯ್ಲು ಹಾಗೂ ಔಷಧಿ ಸಿಂಪಡಣೆಗೆ ಸಾಧ್ಯ ಎಂಬುದು ಮನಗಂಡ ಬಳಿಕ ಈ ಸಂಸ್ಥೆ ಅಡಿಕೆ ಕೊಯ್ಲು ಹಾಗೂ ಔಷಧಿ ಸಿಂಪಡಣೆಗೆ ಜಾಬ್‌ ವರ್ಕ್‌ ನಡೆಸಲು ಸಿದ್ಧತೆ ನಡೆಸಿ ಮಾರ್ಚ್‌ ಆರಂಭದಿಂದ ಈ ಕೆಲಸ ಆರಂಭಿಸಿತು. ಇದೀಗ ಒಟ್ಟು 20 ಲಕ್ಷ ವ್ಯವಹಾರ ಇದೇ ಕಾರ್ಯದಿಂದ ನಡೆಸಿದೆ.

ಇಲ್ಲಿ ಇದಕ್ಕಾಗಿಯೇ 22 ಜನ ಕೆಲಸ ಮಾಡಿದ್ದಾರೆ. ಪಿಂಗಾರ ಸಂಸ್ಥೆಯ ವತಿಯಿಂದಲೇ ಖಾಯಂ ಆಗಿರುವ 12 ಜನ ಇದ್ದರೆ ಉಳಿದವರೆಲ್ಲಾ ಅಗತ್ಯ ಇದ್ದಾಗ ನೆರವಾಗುವ ತಂಡ. ದೋಟಿ ಹಾಗೂ ಪಂಪ್‌ ಸೇರಿದಂತೆ ಸುಮಾರು 10 ಲಕ್ಷ ರೂಪಾಯಿ ದೋಟಿಯ ಜಾಬ್‌ ವರ್ಕ್‌ ತಂಡಕ್ಕೆ ವಿನಿಯೋಗಿಸಿದ ಪಿಂಗಾರ ಸಂಸ್ಥೆ ಈ ವರ್ಷ ಮೊದಲ ಹೆಜ್ಜೆಯಲ್ಲಿ 20 ಲಕ್ಷ ವ್ಯವಹಾರ ಮಾಡಿದೆ. ವಿಟ್ಲ, ಪುಣಚ, ಪುತ್ತೂರು ಸೇರಿದಂತೆ ಕಾಸರಗೋಡು, ಕಡಬ ಪ್ರದೇಶದ ಕೆಲವು ಅಡಿಕೆ ಬೆಳೆಗಾರರ ತೋಟಗಳಿಗೆ ತೆರಳಿ ಔಷಧಿ ಸಿಂಪಡಣೆ ಹಾಗೂ ಅಡಿಕೆ ಕೊಯ್ಲು ಮಾಡಿದ್ದಾರೆ. ಒಟ್ಟು 8 ದೋಟಿ ಬಳಕೆಯಾಗಿದೆ. ತೀರಾ ಬೇಡಿಕೆ ಇದ್ದಾಗ ಬಾಡಿಗೆಗೆ ಪಡೆದು 11 ದೋಟಿಯವರೆಗೂ ಕೆಲಸ ಮಾಡಿದ್ದಾರೆ. ಆರಂಭದಲ್ಲಿ ಅಡಿಕೆ ಔಷಧಿ ಸಿಂಪಡಣೆಯ  ಜಾಬ್‌ ವರ್ಕ್‌ ಮೂಲಕ ಯಶಸ್ವಿಯಾದ ಪಿಂಗಾರ ಸಂಸ್ಥೆ ಈಗ ಮಾದರಿಯಾಗಿದೆ.

ಕಳೆದ ಮಾರ್ಚ್‌ ತಿಂಗಳಿನಿಂದ ಅಡಿಕೆ ಬೆಳೆಗಾರರ ಹಿತಕ್ಕಾಗಿ, ಔಷಧಿ ಸಿಂಪಡಣೆಯ ಸಮಸ್ಯೆ ನಿವಾರಣೆಗೆ ಪಿಂಗಾರ ಸಂಸ್ಥೆಯು ತಂಡವನ್ನು ರಚನೆ ಮಾಡಿ ಪೈಬರ್‌ ದೋಟಿಯ ಮೂಲಕ ಕೆಲಸ ಆರಂಭಿಸಿದೆ. ಈಗಾಗಲೇ 20 ಲಕ್ಷ ವ್ಯವಹಾರ ದೋಟಿಯ ಮೂಲಕ ಸಂಸ್ಥೆ ನಡೆಸಿದೆ ಎನ್ನುತ್ತಾರೆ ಪಿಂಗಾರ ಸಂಸ್ಥೆಯ ಅಧ್ಯಕ್ಷ ರಾಮ್‌ ಕಿಶೋರ್‌ ಮಂಚಿ.[/su_quote]

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

2 hours ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

3 hours ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

4 hours ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

5 hours ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

16 hours ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

1 day ago