Advertisement
MIRROR FOCUS

ಅಡಿಕೆಗೆ ಔಷಧಿ ಸಿಂಪಡಣೆ ಜಾಬ್‌ ವರ್ಕ್‌ | ಅರಳಿದ “ಪಿಂಗಾರ” ಸಂಸ್ಥೆ | 7 ತಿಂಗಳಲ್ಲಿ 20 ಲಕ್ಷ ವ್ಯವಹಾರ |

Share

ಅಡಿಕೆಗೆ ಔಷಧಿ ಸಿಂಪಡಣೆ ಬಹುದೊಡ್ಡ ಸವಾಲು. ಕಾರಣ ನುರಿತ ಕಾರ್ಮಿಕರ ಕೊರತೆ ಹಾಗೂ ಮಳೆಗಾಲ  ಮರ ಏರುವ ಸಮಸ್ಯೆ. ಇದಕ್ಕೆ ಪರಿಹಾರವಾಗಿ ಪೈಬರ್‌ ದೋಟಿ ಬಳಕೆಗೆ ಬಂದಿತು. ಇದಕ್ಕಾಗಿಯೇ ತರಬೇತಿ ನಡೆಯಿತು. ಕೆಲವು ಕಡೆ ಜಾಬ್‌ ವರ್ಕ್‌ ಆರಂಭವಾದವು. ಇಂತಹ ಜಾಬ್‌ ವರ್ಕ್‌ ಮಾಡಿದ ಮುಂಚೂಣಿಯಲ್ಲಿರುವ ಸಂಸ್ಥೆ ವಿಟ್ಲ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಎಫ್‌ ಪಿ ಒ ಪಿಂಗಾರ. ಈ ವರ್ಷ ದೋಟಿ ತಂಡದ ಮೂಲಕ 20 ಲಕ್ಷ ವ್ಯವಹಾರ ನಡೆಸಿದೆ. ಸಂಸ್ಥೆಯನ್ನು ರಾಮ್‌ ಕಿಶೋರ್‌ ಮಂಚಿ ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ.

Advertisement
Advertisement

ಅಡಿಕೆ ಕೃಷಿಕರಿಗೆ ವರವಾಗುವಂತಹ ಕಾರ್ಯವೊಂದನ್ನು  ವಿಟ್ಲದ ಪಿಂಗಾರ ಸಂಸ್ಥೆ ಮಾಡಿದೆ. ಪಿಂಗಾರವು ರೈತರಿಂದಲೇ ರಚನೆಯಾದ ಸಂಸ್ಥೆ. ರೈತ ಪರವಾದ ಹಲವು ಕಾರ್ಯಕ್ರಮ, ಯೋಜನೆಗಳನ್ನು ಕಾರ್ಯರೂಪಕ್ಕೆ ಇಳಿಸುತ್ತಿರುವ ಈ ಸಂಸ್ಥೆ ಈ ಬಾರಿ ಅಡಿಕೆ ಬೆಳೆಗಾರರಿಗೆ ನೆರವಾಗುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇರಿಸಿತ್ತು. ಕಾರ್ಬನ್‌ ಪೈಬರ್‌ ದೋಟಿ ಮೂಲಕ ಅಡಿಕೆ ಕೊಯ್ಲು ಹಾಗೂ ಔಷಧಿ ಸಿಂಪಡಣೆಗೆ ಸಾಧ್ಯ ಎಂಬುದು ಮನಗಂಡ ಬಳಿಕ ಈ ಸಂಸ್ಥೆ ಅಡಿಕೆ ಕೊಯ್ಲು ಹಾಗೂ ಔಷಧಿ ಸಿಂಪಡಣೆಗೆ ಜಾಬ್‌ ವರ್ಕ್‌ ನಡೆಸಲು ಸಿದ್ಧತೆ ನಡೆಸಿ ಮಾರ್ಚ್‌ ಆರಂಭದಿಂದ ಈ ಕೆಲಸ ಆರಂಭಿಸಿತು. ಇದೀಗ ಒಟ್ಟು 20 ಲಕ್ಷ ವ್ಯವಹಾರ ಇದೇ ಕಾರ್ಯದಿಂದ ನಡೆಸಿದೆ.

ಇಲ್ಲಿ ಇದಕ್ಕಾಗಿಯೇ 22 ಜನ ಕೆಲಸ ಮಾಡಿದ್ದಾರೆ. ಪಿಂಗಾರ ಸಂಸ್ಥೆಯ ವತಿಯಿಂದಲೇ ಖಾಯಂ ಆಗಿರುವ 12 ಜನ ಇದ್ದರೆ ಉಳಿದವರೆಲ್ಲಾ ಅಗತ್ಯ ಇದ್ದಾಗ ನೆರವಾಗುವ ತಂಡ. ದೋಟಿ ಹಾಗೂ ಪಂಪ್‌ ಸೇರಿದಂತೆ ಸುಮಾರು 10 ಲಕ್ಷ ರೂಪಾಯಿ ದೋಟಿಯ ಜಾಬ್‌ ವರ್ಕ್‌ ತಂಡಕ್ಕೆ ವಿನಿಯೋಗಿಸಿದ ಪಿಂಗಾರ ಸಂಸ್ಥೆ ಈ ವರ್ಷ ಮೊದಲ ಹೆಜ್ಜೆಯಲ್ಲಿ 20 ಲಕ್ಷ ವ್ಯವಹಾರ ಮಾಡಿದೆ. ವಿಟ್ಲ, ಪುಣಚ, ಪುತ್ತೂರು ಸೇರಿದಂತೆ ಕಾಸರಗೋಡು, ಕಡಬ ಪ್ರದೇಶದ ಕೆಲವು ಅಡಿಕೆ ಬೆಳೆಗಾರರ ತೋಟಗಳಿಗೆ ತೆರಳಿ ಔಷಧಿ ಸಿಂಪಡಣೆ ಹಾಗೂ ಅಡಿಕೆ ಕೊಯ್ಲು ಮಾಡಿದ್ದಾರೆ. ಒಟ್ಟು 8 ದೋಟಿ ಬಳಕೆಯಾಗಿದೆ. ತೀರಾ ಬೇಡಿಕೆ ಇದ್ದಾಗ ಬಾಡಿಗೆಗೆ ಪಡೆದು 11 ದೋಟಿಯವರೆಗೂ ಕೆಲಸ ಮಾಡಿದ್ದಾರೆ. ಆರಂಭದಲ್ಲಿ ಅಡಿಕೆ ಔಷಧಿ ಸಿಂಪಡಣೆಯ  ಜಾಬ್‌ ವರ್ಕ್‌ ಮೂಲಕ ಯಶಸ್ವಿಯಾದ ಪಿಂಗಾರ ಸಂಸ್ಥೆ ಈಗ ಮಾದರಿಯಾಗಿದೆ.

ಕಳೆದ ಮಾರ್ಚ್‌ ತಿಂಗಳಿನಿಂದ ಅಡಿಕೆ ಬೆಳೆಗಾರರ ಹಿತಕ್ಕಾಗಿ, ಔಷಧಿ ಸಿಂಪಡಣೆಯ ಸಮಸ್ಯೆ ನಿವಾರಣೆಗೆ ಪಿಂಗಾರ ಸಂಸ್ಥೆಯು ತಂಡವನ್ನು ರಚನೆ ಮಾಡಿ ಪೈಬರ್‌ ದೋಟಿಯ ಮೂಲಕ ಕೆಲಸ ಆರಂಭಿಸಿದೆ. ಈಗಾಗಲೇ 20 ಲಕ್ಷ ವ್ಯವಹಾರ ದೋಟಿಯ ಮೂಲಕ ಸಂಸ್ಥೆ ನಡೆಸಿದೆ ಎನ್ನುತ್ತಾರೆ ಪಿಂಗಾರ ಸಂಸ್ಥೆಯ ಅಧ್ಯಕ್ಷ ರಾಮ್‌ ಕಿಶೋರ್‌ ಮಂಚಿ.[/su_quote]

 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

1 day ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

1 day ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

1 day ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

1 day ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

1 day ago

ಜಾಗತಿಕ ಒತ್ತಡ – ಗ್ರಾಮೀಣ ಜೀವನೋಪಾಯ | ಅಡಿಕೆ ಕುರಿತ ನಿಜವಾದ ಚರ್ಚೆ ಈಗ ಆರಂಭವಾಗಬೇಕು

ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…

1 day ago