Advertisement
MIRROR FOCUS

ಅಡಿಕೆಗೆ ಔಷಧಿ ಸಿಂಪಡಣೆ ಜಾಬ್‌ ವರ್ಕ್‌ | ಅರಳಿದ “ಪಿಂಗಾರ” ಸಂಸ್ಥೆ | 7 ತಿಂಗಳಲ್ಲಿ 20 ಲಕ್ಷ ವ್ಯವಹಾರ |

Share

ಅಡಿಕೆಗೆ ಔಷಧಿ ಸಿಂಪಡಣೆ ಬಹುದೊಡ್ಡ ಸವಾಲು. ಕಾರಣ ನುರಿತ ಕಾರ್ಮಿಕರ ಕೊರತೆ ಹಾಗೂ ಮಳೆಗಾಲ  ಮರ ಏರುವ ಸಮಸ್ಯೆ. ಇದಕ್ಕೆ ಪರಿಹಾರವಾಗಿ ಪೈಬರ್‌ ದೋಟಿ ಬಳಕೆಗೆ ಬಂದಿತು. ಇದಕ್ಕಾಗಿಯೇ ತರಬೇತಿ ನಡೆಯಿತು. ಕೆಲವು ಕಡೆ ಜಾಬ್‌ ವರ್ಕ್‌ ಆರಂಭವಾದವು. ಇಂತಹ ಜಾಬ್‌ ವರ್ಕ್‌ ಮಾಡಿದ ಮುಂಚೂಣಿಯಲ್ಲಿರುವ ಸಂಸ್ಥೆ ವಿಟ್ಲ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಎಫ್‌ ಪಿ ಒ ಪಿಂಗಾರ. ಈ ವರ್ಷ ದೋಟಿ ತಂಡದ ಮೂಲಕ 20 ಲಕ್ಷ ವ್ಯವಹಾರ ನಡೆಸಿದೆ. ಸಂಸ್ಥೆಯನ್ನು ರಾಮ್‌ ಕಿಶೋರ್‌ ಮಂಚಿ ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ.

ಅಡಿಕೆ ಕೃಷಿಕರಿಗೆ ವರವಾಗುವಂತಹ ಕಾರ್ಯವೊಂದನ್ನು  ವಿಟ್ಲದ ಪಿಂಗಾರ ಸಂಸ್ಥೆ ಮಾಡಿದೆ. ಪಿಂಗಾರವು ರೈತರಿಂದಲೇ ರಚನೆಯಾದ ಸಂಸ್ಥೆ. ರೈತ ಪರವಾದ ಹಲವು ಕಾರ್ಯಕ್ರಮ, ಯೋಜನೆಗಳನ್ನು ಕಾರ್ಯರೂಪಕ್ಕೆ ಇಳಿಸುತ್ತಿರುವ ಈ ಸಂಸ್ಥೆ ಈ ಬಾರಿ ಅಡಿಕೆ ಬೆಳೆಗಾರರಿಗೆ ನೆರವಾಗುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇರಿಸಿತ್ತು. ಕಾರ್ಬನ್‌ ಪೈಬರ್‌ ದೋಟಿ ಮೂಲಕ ಅಡಿಕೆ ಕೊಯ್ಲು ಹಾಗೂ ಔಷಧಿ ಸಿಂಪಡಣೆಗೆ ಸಾಧ್ಯ ಎಂಬುದು ಮನಗಂಡ ಬಳಿಕ ಈ ಸಂಸ್ಥೆ ಅಡಿಕೆ ಕೊಯ್ಲು ಹಾಗೂ ಔಷಧಿ ಸಿಂಪಡಣೆಗೆ ಜಾಬ್‌ ವರ್ಕ್‌ ನಡೆಸಲು ಸಿದ್ಧತೆ ನಡೆಸಿ ಮಾರ್ಚ್‌ ಆರಂಭದಿಂದ ಈ ಕೆಲಸ ಆರಂಭಿಸಿತು. ಇದೀಗ ಒಟ್ಟು 20 ಲಕ್ಷ ವ್ಯವಹಾರ ಇದೇ ಕಾರ್ಯದಿಂದ ನಡೆಸಿದೆ.

ಇಲ್ಲಿ ಇದಕ್ಕಾಗಿಯೇ 22 ಜನ ಕೆಲಸ ಮಾಡಿದ್ದಾರೆ. ಪಿಂಗಾರ ಸಂಸ್ಥೆಯ ವತಿಯಿಂದಲೇ ಖಾಯಂ ಆಗಿರುವ 12 ಜನ ಇದ್ದರೆ ಉಳಿದವರೆಲ್ಲಾ ಅಗತ್ಯ ಇದ್ದಾಗ ನೆರವಾಗುವ ತಂಡ. ದೋಟಿ ಹಾಗೂ ಪಂಪ್‌ ಸೇರಿದಂತೆ ಸುಮಾರು 10 ಲಕ್ಷ ರೂಪಾಯಿ ದೋಟಿಯ ಜಾಬ್‌ ವರ್ಕ್‌ ತಂಡಕ್ಕೆ ವಿನಿಯೋಗಿಸಿದ ಪಿಂಗಾರ ಸಂಸ್ಥೆ ಈ ವರ್ಷ ಮೊದಲ ಹೆಜ್ಜೆಯಲ್ಲಿ 20 ಲಕ್ಷ ವ್ಯವಹಾರ ಮಾಡಿದೆ. ವಿಟ್ಲ, ಪುಣಚ, ಪುತ್ತೂರು ಸೇರಿದಂತೆ ಕಾಸರಗೋಡು, ಕಡಬ ಪ್ರದೇಶದ ಕೆಲವು ಅಡಿಕೆ ಬೆಳೆಗಾರರ ತೋಟಗಳಿಗೆ ತೆರಳಿ ಔಷಧಿ ಸಿಂಪಡಣೆ ಹಾಗೂ ಅಡಿಕೆ ಕೊಯ್ಲು ಮಾಡಿದ್ದಾರೆ. ಒಟ್ಟು 8 ದೋಟಿ ಬಳಕೆಯಾಗಿದೆ. ತೀರಾ ಬೇಡಿಕೆ ಇದ್ದಾಗ ಬಾಡಿಗೆಗೆ ಪಡೆದು 11 ದೋಟಿಯವರೆಗೂ ಕೆಲಸ ಮಾಡಿದ್ದಾರೆ. ಆರಂಭದಲ್ಲಿ ಅಡಿಕೆ ಔಷಧಿ ಸಿಂಪಡಣೆಯ  ಜಾಬ್‌ ವರ್ಕ್‌ ಮೂಲಕ ಯಶಸ್ವಿಯಾದ ಪಿಂಗಾರ ಸಂಸ್ಥೆ ಈಗ ಮಾದರಿಯಾಗಿದೆ.

ಕಳೆದ ಮಾರ್ಚ್‌ ತಿಂಗಳಿನಿಂದ ಅಡಿಕೆ ಬೆಳೆಗಾರರ ಹಿತಕ್ಕಾಗಿ, ಔಷಧಿ ಸಿಂಪಡಣೆಯ ಸಮಸ್ಯೆ ನಿವಾರಣೆಗೆ ಪಿಂಗಾರ ಸಂಸ್ಥೆಯು ತಂಡವನ್ನು ರಚನೆ ಮಾಡಿ ಪೈಬರ್‌ ದೋಟಿಯ ಮೂಲಕ ಕೆಲಸ ಆರಂಭಿಸಿದೆ. ಈಗಾಗಲೇ 20 ಲಕ್ಷ ವ್ಯವಹಾರ ದೋಟಿಯ ಮೂಲಕ ಸಂಸ್ಥೆ ನಡೆಸಿದೆ ಎನ್ನುತ್ತಾರೆ ಪಿಂಗಾರ ಸಂಸ್ಥೆಯ ಅಧ್ಯಕ್ಷ ರಾಮ್‌ ಕಿಶೋರ್‌ ಮಂಚಿ.[/su_quote]

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

1 day ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

1 day ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

1 day ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

2 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

2 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

2 days ago