Advertisement
ಸುದ್ದಿಗಳು

ಪಿತೃಪಕ್ಷ ಮತ್ತು ಶ್ರಾದ್ಧವಿಧಿ | “ಶಾಸ್ತ್ರ ಮತ್ತು ಸಂದೇಹ ನಿವಾರಣೆ” ವಿಶೇಷ ಸಂವಾದದಿಂದ ಮಹತ್ವಪೂರ್ಣ ಮಾರ್ಗದರ್ಶನ ! |

Share

ಹಿಂದೂ ಧರ್ಮದಲ್ಲಿ ಈಶ್ವರಪ್ರಾಪ್ತಿಗಾಗಿ ‘ದೇವಋಣ’, ಋಷಿಋಣ’, ‘ಪಿತೃಋಣ’ ಮತ್ತು ‘ಸಮಾಜ ಋಣ’ ಹೀಗೆ 4 ಪ್ರಕಾರಗಳ ಋಣಗಳನ್ನು ತೀರಿಸಲು ಹೇಳಲಾಗಿದೆ. ಇದರಲ್ಲಿ ‘ಪಿತೃಋಣ’ ತೀರಿಸಲು ಪೂರ್ವಜರಿಗೆ ಮುಕ್ತಿ ದೊರಕಿಸಿಕೊಡಲು ಪ್ರಯತ್ನಿಸುವುದು ಅಗತ್ಯವಿರುತ್ತದೆ. ‘ಶ್ರಾದ್ಧ’ ಮಾಡುವುದು ಇದು ಪೂರ್ವಜರ ಮುಕ್ತಿಗಾಗಿ ಮಹತ್ವದ್ದಾಗಿದೆ. ಯಾರಿಗೆ ಸಾಧ್ಯವಿದೆಯೋ, ಅವರು ಪಿತೃಪಕ್ಷದಲ್ಲಿ ಪುರೋಹಿತರನ್ನು ಕರೆದು ಶ್ರಾದ್ಧವಿಧಿಯನ್ನು ಮಾಡಬೇಕು; ಆದರೆ ಎಲ್ಲಿ ಕೊರೊನಾದಿಂದ ಪುರೋಹಿತರ ಹಾಗೂ ಶ್ರಾದ್ಧದ ವಸ್ತುಗಳ ಕೊರತೆಯಿಂದ ಶ್ರಾದ್ಧ ಮಾಡಲು ಸಾಧ್ಯವಿಲ್ಲವೋ ಅಲ್ಲಿ ಆಪದ್ಧರ್ಮ ಎಂದು ಸಂಕಲ್ಪಪೂರ್ವಕವಾಗಿ ಆಮಶ್ರಾದ್ಧ, ಹಿರಣ್ಯಶ್ರಾದ್ಧ ಅಥವಾ ಗೋಗ್ರಾಸವನ್ನು ಅರ್ಪಿಸಬೇಕು.

Advertisement
Advertisement

ಅದೇ ರೀತಿ ಪೂರ್ವಜರಿಗೆ ಮುಂದಿನ ಗತಿ ಸಿಗಲು ಹಾಗೂ ಅತೃಪ್ತ ಪೂರ್ವಜರಿಂದ ತೊಂದರೆಯಾಗದಿರಲು, ನಿಯಮಿತವಾಗಿ ಸಾಧನೆ ಮಾಡುವುದೂ ಅಗತ್ಯವಿದೆ. ಅದಕ್ಕಾಗಿ ಶ್ರಾದ್ಧ ವಿಧಿಯೊಂದಿಗೆ ಪಿತೃಪಕ್ಷದಲ್ಲಿ ಹೆಚ್ಚೆಚ್ಚು ಸಮಯ, ಅದೇ ರೀತಿ ಇತರ ಸಮಯದಲ್ಲಿಯೂ ಪ್ರತಿದಿನ ಕಡಿಮೆ ಪಕ್ಷ 1 ರಿಂದ 2 ಗಂಟೆ ‘ಶ್ರೀ ಗುರುದೇವ ದತ್ತ’ ಈ ನಾಮಜಪವನ್ನು ಎಲ್ಲರೂ ಮಾಡಬೇಕು, ಎಂದು ಸನಾತನ ಸಂಸ್ಥೆಯ ಧರ್ಮಪ್ರಚಾರಕ ಸಂತರಾದ ಪೂ. ರಮಾನಂದ ಗೌಡ ಇವರು ಮಾರ್ಗದರ್ಶನ ಮಾಡಿದರು. ಅವರು ಗಣೇಶೋತ್ಸವದ ನಂತರ ಆರಂಭವಾಗುವ ಪಿತೃಪಕ್ಷದ ನಿಮಿತ್ತ ಸನಾತನ ಸಂಸ್ಥೆ ಮತ್ತು ಹಿಂದೂ ಜನಜಾಗೃತಿ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ‘ಪಿತೃಪಕ್ಷ ಮತ್ತು ಶ್ರಾದ್ಧವಿಧಿ : ಶಾಸ್ತ್ರ ಮತ್ತು ಸಂದೇಹ ನಿವಾರಣೆ’ ಈ ವಿಷಯದ ವಿಶೇಷ ಸಂವಾದದಲ್ಲಿ ಮಾತನಾಡುತ್ತಿದ್ದರು.

ಅವರು ತಮ್ಮ ಮಾತನ್ನು ಮುಂದುವರಿಸುತ್ತಾ, ‘ಹಿಂದೂಗಳಲ್ಲಿ ಧರ್ಮಶಿಕ್ಷಣದ ಅಭಾವ, ಪಾಶ್ಚಾತ್ಯರ ಅಂಧಾನುಕರಣೆ ಹಾಗೂ ಹಿಂದೂ ಧರ್ಮವನ್ನು ಕೀಳಾಗಿ ಪರಿಗಣಿಸುವ ವೃತ್ತಿ ಇವುಗಳಿಂದಾಗಿ ಹಲವಾರು ಬಾರಿ ಶ್ರಾದ್ಧವಿಧಿಯನ್ನು ನಿರ್ಲಕ್ಷಿಸಲಾಗುತ್ತದೆ; ಆದರೆ ಇಂದೂ ಕೂಡ ಅನೇಕ ಪಾಶ್ಚಾತ್ಯ ದೇಶಗಳಲ್ಲಿ ಸಾವಿರಾರು ಜನರು ಭಾರತದ ತೀರ್ಥಕ್ಷೇತ್ರಗಳಿಗೆ ಬಂದು ಪೂರ್ವಜರಿಗೆ ಮುಂದಿನ ಗತಿ ಸಿಗಬೇಕು, ಎಂದು ಶ್ರದ್ಧೆಯಿಂದ ಶ್ರಾದ್ಧವಿಧಿ ಮಾಡುತ್ತಾರೆ. ‘ಮನು’ ಇವರು ಮೊದಲ ಬಾರಿ ಶ್ರಾದ್ಧವಿಧಿಯನ್ನು ಮಾಡಿದ್ದಾರೆ. ‘ಭಗೀರಥ ರಾಜ’ನು ಪೂರ್ವಜರ ಮುಕ್ತಿಗಾಗಿ ಮಾಡಿದ ಕಠೋರ ತಪಸ್ಸು, ಅದೇ ರೀತಿ ತ್ರೇತಾಯುಗದಲ್ಲಿ ಪ್ರಭು ಶ್ರೀರಾಮಚಂದ್ರ ಇವರ ಕಾಲದಿಂದ ಹಿಡಿದು ಛತ್ರಪತಿ ಶಿವಾಜಿ ಮಹಾರಾಜರ ಕಾಲದಲ್ಲಿಯೂ ಶ್ರಾದ್ಧವಿಧಿ ಮಾಡಿರುವ ಉದಾಹರಣೆಗಳು ಇವೆ. ಆದ್ದರಿಂದ ತಥಾಕಥಿತ ಪ್ರಗತಿಪರರು ಶ್ರಾದ್ಧವಿಧಿಯ ಬಗ್ಗೆ ಮಾಡುತ್ತಿರುವ ಅಪಪ್ರಚಾರಕ್ಕೆ ಬಲಿಯಾಗದೇ ಕೊರೊನಾದ ಸೋಂಕಿನ ಕಾಲದಲ್ಲಿಯೂ ತಮ್ಮ ಕ್ಷಮತೆಗನುಸಾರ ಪಿತೃಋಣ ತೀರಿಸಲು ಶ್ರದ್ಧೆಯಿಂದ ‘ಶ್ರಾದ್ಧವಿಧಿ’ ಮಾಡಿ, ಎಂದು ಪೂ. ರಮಾನಂದ ಗೌಡ ಇವರು ಹೇಳಿದರು.

ಪಿತೃಪಕ್ಷದಲ್ಲಿ ಮಹಾಲಯ ಶ್ರಾದ್ಧವನ್ನು ಭಾವಪೂರ್ಣವಾಗಿ ಮಾಡಿದರೆ ಯಶಸ್ಸು, ಧನ, ಕೀರ್ತಿ ಲಭಿಸುತ್ತದೆ. ಪೂರ್ವಜರಿಗೆ ಮರ್ತ್ಯ ಲೋಕದಿಂದ ಮುಂದೆ ಹೋಗಲು ಶ್ರಾದ್ಧವಿಧಿಯಿಂದ ಶಕ್ತಿ ಸಿಗುತ್ತದೆ. ಮೃತ್ಯುವಿನ ನಂತರವೂ ಸದ್ಗತಿಗಾಗಿ ಶ್ರಾದ್ಧವಿಧಿ ಹೇಳುವಂತಹ ಏಕೈಕ ಧರ್ಮವೆಂದರ ಹಿಂದೂ ಧರ್ಮ. ಸದ್ಯ ಸಮಾಜದಲ್ಲಿ ಧರ್ಮಶಿಕ್ಷಣದ ಅಭಾವದಿಂದ ‘ಶ್ರಾದ್ಧ ಮಾಡುವ ಬದಲು ಸಾಮಾಜಿಕ ಸಂಸ್ಥೆಗಳಿಗೆ ಅಥವಾ ಅನಾಥಾಲಯಗಳಿಗೆ ದೇಣಿಗೆ ನೀಡಿ’, ಎಂಬ ಅಯೋಗ್ಯ ಪರಿಕಲ್ಪನೆಯನ್ನು ಪ್ರಸಾರ ಮಾಡಲಾಗುತ್ತದೆ; ಆದರೆ ಹೀಗೆ ಮಾಡುವುದು ಅಯೋಗ್ಯವಾಗಿದೆ. ಧಾರ್ಮಿಕ ಕೃತಿಗಳು ಧರ್ಮಶಾಸ್ತ್ರಾಕ್ಕನುಸಾರ ಆಗುವುದು ಅಗತ್ಯವಿರುತ್ತದೆ. ಅದಕ್ಕನುಸಾರ ಕೃತಿ ಮಾಡಿದರೆ ಮಾತ್ರ ಪಿತೃಋಣ ತೀರುತ್ತದೆ, ಎಂದೂ ಪೂ. ರಮಾನಂದ ಗೌಡ ಇವರು ಹೇಳಿದರು.

# ರಮಾನಂದ ಗೌಡ, ಧರ್ಮಪ್ರಚಾರಕರು, ಸನಾತನ ಸಂಸ್ಥೆ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

11 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

12 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

1 day ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

3 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

3 days ago