Advertisement
MIRROR FOCUS

ಹಳ್ಳ-ಕೊಳ್ಳ, ನದಿ,ಕೆರೆ ತುಂಬಿದ್ದರು ಕುಡಿಯೋಕೆ ನೀರಿಲ್ಲ | ಉತ್ತರ ಕನ್ನಡದಲ್ಲಿ ಪ್ರವಾಹ ಪರಿಸ್ಥಿತಿಯಿಂದ ಪರದಾಡುತ್ತಿರುವ ಜನತೆ

Share

ಕಳೆದ 10-12 ದಿನಗಳಲ್ಲಿ ಸುರಿದ ಭಾರಿ ಮಳೆಗೆ ಉತ್ತರ ಕನ್ನಡದ(Uttara Kannada) ಜನತೆ ನಲುಗಿದ್ದಾರೆ. ಈ ಮಧ್ಯೆ ಅಂಕೋಲದಲ್ಲಿ ನಡೆದ ಗುಡ್ಡ ಕುಸಿತ ದುರಂತ ಎಲ್ಲರನ್ನೂ ಬೆಚ್ಚಿ ಬೀಳುವಂತೆ ಮಾಡಿತ್ತು. ಇದೀಗ ಉತ್ತರ ಕನ್ನಡದಲ್ಲಿ ಮಳೆ(Rain) ಅಬ್ಬರ ಕಮ್ಮಿಯಾಗಿ ನದಿ, ತೊರೆ, ಬಾವಿಗಳು ನೀರಿನಿಂದ ತುಂಬಿದ್ದರು, ಕೆಲ ಊರಿನ ಜನಕ್ಕೆ ಕುಡಿಯಲು(Drinking water) ಹಾಗೂ ದಿನ ಬಳಕೆಗೆ ನೀರಿಲ್ಲದೆ ಪರದಾಡುವಂತಾಗಿದೆ. ಜಿಲ್ಲೆಯಲ್ಲಿ ನೆರೆ ಬಂದು ಜನರ ಜೀವನ ದಿಕ್ಕಾಪಾಲಾಗಿದೆ. ಸದ್ಯ ಕುಮಟಾದ ಹಲವೆಡೆ ಜನರಿಗೆ ಕುಡಿಯಲು ನೀರಿಲ್ಲ ಎಂಬುದು ನಿಜಕ್ಕೂ ವಿಪರ್ಯಾಸ. ಹೌದು, ಅಘನಾಶಿನಿಯ (Aghanashini) ನೆರೆಗೆ ಸಿಕ್ಕಿ ನಲುಗುತ್ತಿರುವ ಕುಮಟಾದ ಹೆಗಡೆ ಗ್ರಾಮಸ್ಥರಿಗೆ ಕುಡಿಯಲು ನೀರಿಲ್ಲ.

Advertisement
Advertisement

ನೀರು ಪೂರೈಕೆ : ಅಣ್ಣಪ್ಪ ಎಂಬುವವರ ನೇತೃತ್ವದಲ್ಲಿ ಯುವಾಬ್ರಿಗೇಡ್‌ನ 10 ಜನರ ತಂಡವೊಂದು ಕುಮಟಾ ತಾಲೂಕಿನ ಹೆಗಡೆಯ ಗ್ರಾಮದ 40 ಮನೆಗಳಿಗೆ ಹಗಲು- ರಾತ್ರಿ ಎನ್ನದೇ ನೀರು ಪೂರೈಕೆ ಮಾಡಿದೆ. ಕಳೆದ ಮೂರು ದಿನಗಳಿಂದ ಕುಡಿಯುವ ನೀರಿನ ಪೂರೈಕೆಯನ್ನು ಮಚಗೋಣದಿಂದ ತಂದು ಈ ತಂಡ ಪೂರೈಸುತ್ತಿದೆ. ಈಗಾಗಲೇ ಗ್ರಾಮಸ್ಥರಿಗಾಗಿ 12,000 ಲೀಟರ್‌ನಷ್ಟು ನೀರನ್ನು ಹಂಚಿದೆ. ಎರಡು ಪಿಕಪ್‌ ವಾಹನಗಳಲ್ಲಿ ತಂಡದ ಸದಸ್ಯರು 40 ಕುಟುಂಬದ 200 ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿದ್ದಾರೆ. ಒಟ್ಟಿನಲ್ಲಿ ಸಮುದ್ರ ತುಂಬಾ ನೀರಿದ್ರೂ, ಕುಡಿಯೋಕೆ ಆಗಲ್ಲ ಅನ್ನೋ ಹಾಗೆ ಉತ್ತರ ಕನ್ನಡದ ಹಲವೆಡೆ ಮನೆ ಸುತ್ತಮುತ್ತ ನೀರಿದ್ರೂ ನೆರೆಯ ನಡುವೆ ಕುಡಿಯುವ ನೀರಿಗಾಗಿ ಬವಣೆ ಎದುರಿಸುವಂತಾಗಿದೆ.

ನೆರೆಯಿಂದಾಗಿ ನೀರಿನಲ್ಲಿ ಕೆಸರು ಹಾಗೂ ಮಣ್ಣು ಮಿಶ್ರಣಗೊಂಡಿರುವುದರಿಂದ ಗೃಹ ಬಳಕೆಗೆ ಉಪಯೋಗಿಸಲಾಗಂತಾಗಿದೆ. ಇದರಿಂದ ಊರ ಜನ ನೀರಿಗಾಗಿ ಪರದಾಡುವಂತಾಗಿದೆ. ಜನ ಪ್ರತಿನಿಧೀಗಳು ಮಾಡಬೇಕಾದ ಕೆಲಸವನ್ನು ಯುವಾ ಬ್ರಿಗೇಡ್‌ ಮಾಡಿ ಊರ ಜನರ ನೀರಿನ ಬವಣೆಯನ್ನು ನೀಗಿಸುತ್ತಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

8 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

1 day ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

1 day ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

1 day ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

1 day ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

1 day ago