Advertisement
MIRROR FOCUS

ಹಳ್ಳ-ಕೊಳ್ಳ, ನದಿ,ಕೆರೆ ತುಂಬಿದ್ದರು ಕುಡಿಯೋಕೆ ನೀರಿಲ್ಲ | ಉತ್ತರ ಕನ್ನಡದಲ್ಲಿ ಪ್ರವಾಹ ಪರಿಸ್ಥಿತಿಯಿಂದ ಪರದಾಡುತ್ತಿರುವ ಜನತೆ

Share

ಕಳೆದ 10-12 ದಿನಗಳಲ್ಲಿ ಸುರಿದ ಭಾರಿ ಮಳೆಗೆ ಉತ್ತರ ಕನ್ನಡದ(Uttara Kannada) ಜನತೆ ನಲುಗಿದ್ದಾರೆ. ಈ ಮಧ್ಯೆ ಅಂಕೋಲದಲ್ಲಿ ನಡೆದ ಗುಡ್ಡ ಕುಸಿತ ದುರಂತ ಎಲ್ಲರನ್ನೂ ಬೆಚ್ಚಿ ಬೀಳುವಂತೆ ಮಾಡಿತ್ತು. ಇದೀಗ ಉತ್ತರ ಕನ್ನಡದಲ್ಲಿ ಮಳೆ(Rain) ಅಬ್ಬರ ಕಮ್ಮಿಯಾಗಿ ನದಿ, ತೊರೆ, ಬಾವಿಗಳು ನೀರಿನಿಂದ ತುಂಬಿದ್ದರು, ಕೆಲ ಊರಿನ ಜನಕ್ಕೆ ಕುಡಿಯಲು(Drinking water) ಹಾಗೂ ದಿನ ಬಳಕೆಗೆ ನೀರಿಲ್ಲದೆ ಪರದಾಡುವಂತಾಗಿದೆ. ಜಿಲ್ಲೆಯಲ್ಲಿ ನೆರೆ ಬಂದು ಜನರ ಜೀವನ ದಿಕ್ಕಾಪಾಲಾಗಿದೆ. ಸದ್ಯ ಕುಮಟಾದ ಹಲವೆಡೆ ಜನರಿಗೆ ಕುಡಿಯಲು ನೀರಿಲ್ಲ ಎಂಬುದು ನಿಜಕ್ಕೂ ವಿಪರ್ಯಾಸ. ಹೌದು, ಅಘನಾಶಿನಿಯ (Aghanashini) ನೆರೆಗೆ ಸಿಕ್ಕಿ ನಲುಗುತ್ತಿರುವ ಕುಮಟಾದ ಹೆಗಡೆ ಗ್ರಾಮಸ್ಥರಿಗೆ ಕುಡಿಯಲು ನೀರಿಲ್ಲ.

ನೀರು ಪೂರೈಕೆ : ಅಣ್ಣಪ್ಪ ಎಂಬುವವರ ನೇತೃತ್ವದಲ್ಲಿ ಯುವಾಬ್ರಿಗೇಡ್‌ನ 10 ಜನರ ತಂಡವೊಂದು ಕುಮಟಾ ತಾಲೂಕಿನ ಹೆಗಡೆಯ ಗ್ರಾಮದ 40 ಮನೆಗಳಿಗೆ ಹಗಲು- ರಾತ್ರಿ ಎನ್ನದೇ ನೀರು ಪೂರೈಕೆ ಮಾಡಿದೆ. ಕಳೆದ ಮೂರು ದಿನಗಳಿಂದ ಕುಡಿಯುವ ನೀರಿನ ಪೂರೈಕೆಯನ್ನು ಮಚಗೋಣದಿಂದ ತಂದು ಈ ತಂಡ ಪೂರೈಸುತ್ತಿದೆ. ಈಗಾಗಲೇ ಗ್ರಾಮಸ್ಥರಿಗಾಗಿ 12,000 ಲೀಟರ್‌ನಷ್ಟು ನೀರನ್ನು ಹಂಚಿದೆ. ಎರಡು ಪಿಕಪ್‌ ವಾಹನಗಳಲ್ಲಿ ತಂಡದ ಸದಸ್ಯರು 40 ಕುಟುಂಬದ 200 ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿದ್ದಾರೆ. ಒಟ್ಟಿನಲ್ಲಿ ಸಮುದ್ರ ತುಂಬಾ ನೀರಿದ್ರೂ, ಕುಡಿಯೋಕೆ ಆಗಲ್ಲ ಅನ್ನೋ ಹಾಗೆ ಉತ್ತರ ಕನ್ನಡದ ಹಲವೆಡೆ ಮನೆ ಸುತ್ತಮುತ್ತ ನೀರಿದ್ರೂ ನೆರೆಯ ನಡುವೆ ಕುಡಿಯುವ ನೀರಿಗಾಗಿ ಬವಣೆ ಎದುರಿಸುವಂತಾಗಿದೆ.

ನೆರೆಯಿಂದಾಗಿ ನೀರಿನಲ್ಲಿ ಕೆಸರು ಹಾಗೂ ಮಣ್ಣು ಮಿಶ್ರಣಗೊಂಡಿರುವುದರಿಂದ ಗೃಹ ಬಳಕೆಗೆ ಉಪಯೋಗಿಸಲಾಗಂತಾಗಿದೆ. ಇದರಿಂದ ಊರ ಜನ ನೀರಿಗಾಗಿ ಪರದಾಡುವಂತಾಗಿದೆ. ಜನ ಪ್ರತಿನಿಧೀಗಳು ಮಾಡಬೇಕಾದ ಕೆಲಸವನ್ನು ಯುವಾ ಬ್ರಿಗೇಡ್‌ ಮಾಡಿ ಊರ ಜನರ ನೀರಿನ ಬವಣೆಯನ್ನು ನೀಗಿಸುತ್ತಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

8 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

9 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

10 hours ago

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

12 hours ago

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

24 hours ago