Advertisement
MIRROR FOCUS

ಹಳ್ಳ-ಕೊಳ್ಳ, ನದಿ,ಕೆರೆ ತುಂಬಿದ್ದರು ಕುಡಿಯೋಕೆ ನೀರಿಲ್ಲ | ಉತ್ತರ ಕನ್ನಡದಲ್ಲಿ ಪ್ರವಾಹ ಪರಿಸ್ಥಿತಿಯಿಂದ ಪರದಾಡುತ್ತಿರುವ ಜನತೆ

Share

ಕಳೆದ 10-12 ದಿನಗಳಲ್ಲಿ ಸುರಿದ ಭಾರಿ ಮಳೆಗೆ ಉತ್ತರ ಕನ್ನಡದ(Uttara Kannada) ಜನತೆ ನಲುಗಿದ್ದಾರೆ. ಈ ಮಧ್ಯೆ ಅಂಕೋಲದಲ್ಲಿ ನಡೆದ ಗುಡ್ಡ ಕುಸಿತ ದುರಂತ ಎಲ್ಲರನ್ನೂ ಬೆಚ್ಚಿ ಬೀಳುವಂತೆ ಮಾಡಿತ್ತು. ಇದೀಗ ಉತ್ತರ ಕನ್ನಡದಲ್ಲಿ ಮಳೆ(Rain) ಅಬ್ಬರ ಕಮ್ಮಿಯಾಗಿ ನದಿ, ತೊರೆ, ಬಾವಿಗಳು ನೀರಿನಿಂದ ತುಂಬಿದ್ದರು, ಕೆಲ ಊರಿನ ಜನಕ್ಕೆ ಕುಡಿಯಲು(Drinking water) ಹಾಗೂ ದಿನ ಬಳಕೆಗೆ ನೀರಿಲ್ಲದೆ ಪರದಾಡುವಂತಾಗಿದೆ. ಜಿಲ್ಲೆಯಲ್ಲಿ ನೆರೆ ಬಂದು ಜನರ ಜೀವನ ದಿಕ್ಕಾಪಾಲಾಗಿದೆ. ಸದ್ಯ ಕುಮಟಾದ ಹಲವೆಡೆ ಜನರಿಗೆ ಕುಡಿಯಲು ನೀರಿಲ್ಲ ಎಂಬುದು ನಿಜಕ್ಕೂ ವಿಪರ್ಯಾಸ. ಹೌದು, ಅಘನಾಶಿನಿಯ (Aghanashini) ನೆರೆಗೆ ಸಿಕ್ಕಿ ನಲುಗುತ್ತಿರುವ ಕುಮಟಾದ ಹೆಗಡೆ ಗ್ರಾಮಸ್ಥರಿಗೆ ಕುಡಿಯಲು ನೀರಿಲ್ಲ.

ನೀರು ಪೂರೈಕೆ : ಅಣ್ಣಪ್ಪ ಎಂಬುವವರ ನೇತೃತ್ವದಲ್ಲಿ ಯುವಾಬ್ರಿಗೇಡ್‌ನ 10 ಜನರ ತಂಡವೊಂದು ಕುಮಟಾ ತಾಲೂಕಿನ ಹೆಗಡೆಯ ಗ್ರಾಮದ 40 ಮನೆಗಳಿಗೆ ಹಗಲು- ರಾತ್ರಿ ಎನ್ನದೇ ನೀರು ಪೂರೈಕೆ ಮಾಡಿದೆ. ಕಳೆದ ಮೂರು ದಿನಗಳಿಂದ ಕುಡಿಯುವ ನೀರಿನ ಪೂರೈಕೆಯನ್ನು ಮಚಗೋಣದಿಂದ ತಂದು ಈ ತಂಡ ಪೂರೈಸುತ್ತಿದೆ. ಈಗಾಗಲೇ ಗ್ರಾಮಸ್ಥರಿಗಾಗಿ 12,000 ಲೀಟರ್‌ನಷ್ಟು ನೀರನ್ನು ಹಂಚಿದೆ. ಎರಡು ಪಿಕಪ್‌ ವಾಹನಗಳಲ್ಲಿ ತಂಡದ ಸದಸ್ಯರು 40 ಕುಟುಂಬದ 200 ಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿದ್ದಾರೆ. ಒಟ್ಟಿನಲ್ಲಿ ಸಮುದ್ರ ತುಂಬಾ ನೀರಿದ್ರೂ, ಕುಡಿಯೋಕೆ ಆಗಲ್ಲ ಅನ್ನೋ ಹಾಗೆ ಉತ್ತರ ಕನ್ನಡದ ಹಲವೆಡೆ ಮನೆ ಸುತ್ತಮುತ್ತ ನೀರಿದ್ರೂ ನೆರೆಯ ನಡುವೆ ಕುಡಿಯುವ ನೀರಿಗಾಗಿ ಬವಣೆ ಎದುರಿಸುವಂತಾಗಿದೆ.

ನೆರೆಯಿಂದಾಗಿ ನೀರಿನಲ್ಲಿ ಕೆಸರು ಹಾಗೂ ಮಣ್ಣು ಮಿಶ್ರಣಗೊಂಡಿರುವುದರಿಂದ ಗೃಹ ಬಳಕೆಗೆ ಉಪಯೋಗಿಸಲಾಗಂತಾಗಿದೆ. ಇದರಿಂದ ಊರ ಜನ ನೀರಿಗಾಗಿ ಪರದಾಡುವಂತಾಗಿದೆ. ಜನ ಪ್ರತಿನಿಧೀಗಳು ಮಾಡಬೇಕಾದ ಕೆಲಸವನ್ನು ಯುವಾ ಬ್ರಿಗೇಡ್‌ ಮಾಡಿ ಊರ ಜನರ ನೀರಿನ ಬವಣೆಯನ್ನು ನೀಗಿಸುತ್ತಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

10 hours ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

11 hours ago

ಮಲೆನಾಡಿನ ಸಂಕಷ್ಟವೇ ಅವಕಾಶವಾಗಬಹುದೇ? : ‘ನಿರಪೇಕ್ಷಿತ ಕಾಡು ಕೃಷಿ’ ಹೊಸ ಪರಿಕಲ್ಪನೆ

ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…

11 hours ago

ನಿಷೇಧಿತ ಗುಟ್ಕಾ ಮಾರಾಟಕ್ಕೆ ಕಡಿವಾಣ | FDA ದಾಳಿ, 14 ಮಂದಿ ಬಂಧನ – ₹32 ಲಕ್ಷ ಮೌಲ್ಯದ ವಸ್ತು ವಶ

ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…

12 hours ago

ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ

ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…

12 hours ago

ಲ್ಯಾಬ್‌ ಟು ಲ್ಯಾಂಡ್ – 13.4 ಕೋಟಿ ರೈತರನ್ನು ತಲುಪಿದ ‘ವಿಕಸಿತ ಕೃಷಿ ಸಂಕಲ್ಪ ಅಭಿಯಾನ’

ದೇಶದಾದ್ಯಂತ ನಡೆದ ವಿಕಸಿತ ಕೃಷಿ ಸಂಕಲ್ಪ ಅಭಿಯಾನವು 13.4 ಕೋಟಿ ರೈತರನ್ನು ತಲುಪಿದೆ…

15 hours ago