ದೇಶದ ಕೃಷಿ ವಿಜ್ಞಾನ ಕೇಂದ್ರಗಳನ್ನು ನಾಲೆಡ್ಜ್ ಹಬ್ಗಳನ್ನಾಗಿ ಮಾಡಲು ಕೇಂದ್ರ ಸರ್ಕಾರ ಯೋಜನೆ ಹಾಕಿಕೊಂಡಿದೆ ಎಂದು ರಾಜ್ಯ ಯೋಜನಾ ಆಯೋಗದ ಮಾಜಿ ಸದಸ್ಯ ಡಾ.ಕೆ.ಪಿ.ಬಸವರಾಜಪ್ಪ ಹೇಳಿದ್ದಾರೆ.
ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಆರಂಭಗೊಂಡ ಎರಡು ದಿನಗಳ ಕೃಷಿಕರ ಸಮೃದ್ಧಿಗಾಗಿ ಸಸ್ಯಸಂತೆ ಮತ್ತು ಸಾವಯವ ಕೃಷಿ ಪರಿಕರಗಳ ಪ್ರದರ್ಶನ ಹಾಗೂ ಮಾರಾಟ ಮೇಳದಲ್ಲಿ ಅವರು ಮಾತನಾಡಿದರು. ಕೇಂದ್ರ ಸರ್ಕಾರ ದೇಶದ ಕೃಷಿ ಮತ್ತು ತೋಟಗಾರಿಕಾ ಕ್ಷೇತ್ರದ ಅಭಿವೃದ್ಧಿಗಾಗಿ 14 ಸಾವಿರ ಕೋಟಿ ರೂಪಾಯಿ ಮೀಸಲಿಟ್ಟಿದೆಯಲ್ಲದೇ, ಈ ಕ್ಷೇತ್ರದಲ್ಲಿ ಹೊಸ ಪ್ರಯೋಗಗಳನ್ನು ಮಾಡಿ, ರೈತರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿ ಮಾಡುವ ಚಿಂತನೆ ಹೊಂದಿದೆ ಎಂದು ಹೇಳಿದರು. ಕೃಷಿ ಕ್ಷೇತ್ರದಲ್ಲಿ 1950 ರಿಂದ ದೇಶದ ರೈತರ ಸಾಧನೆ ಸತತವಾಗಿ ಏರಿಕೆಯಾಗುತ್ತಿದೆ. 1985 ರಿಂದ ಇಂದಿನವರೆಗೆ ಶೇಕಡ.300ರಷ್ಟು ಆಹಾರ ಧಾನ್ಯ ಉತ್ಪಾದನೆ ಹೆಚ್ಚಳವಾಗಿದೆ ಎಂದು ಹೇಳಿದರು.
ಕರ್ನಾಟಕದಲ್ಲಿ ಮಳೆ ಕೊರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೂರ್ಣಾವಧಿ ಕೃಷಿ ಸಚಿವರನ್ನು ತಕ್ಷಣ ನೇಮಿಸಬೇಕು…
ವಿಶ್ವ ಯೋಗ ದಿನದ ಅಂಗವಾಗಿ ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆ ಉದ್ಯೋಗಿಗಳ ರಿಕ್ರಿಯೇಷನ್ ಸೆಂಟರ್…
ದೇಶದಲ್ಲಿ ಮುಂಗಾರು ಮಳೆ ಕೊರತೆ 40%ಕ್ಕೆ ಏರಿಕೆಯಾಗಿದ್ದು, ಪ್ರಮುಖ ಕೃಷಿ ಪ್ರದೇಶಗಳಲ್ಲಿ ಮೋಡಗಳ…
ಕೇರಳ ಸರ್ಕಾರ ರಬ್ಬರ್ ಬೆಂಬಲ ಬೆಲೆಯನ್ನು ₹200ರಿಂದ ₹250ಕ್ಕೆ ಹೆಚ್ಚಿಸಿದೆ. ಮಾರುಕಟ್ಟೆ ಬೆಲೆ…
ಮೂರು ವರ್ಷಗಳಲ್ಲಿ ದೇಶದ ಅರಣ್ಯ ಪ್ರದೇಶಗಳಲ್ಲಿ 28 ಲಕ್ಷಕ್ಕೂ ಹೆಚ್ಚು ಮರಗಳನ್ನು ಕಡಿಯಲು…
ಜೂನ್ 30ರೊಳಗೆ LPG e-KYC ಪೂರ್ಣಗೊಳಿಸುವಂತೆ ಗ್ರಾಹಕರಿಗೆ ಸೂಚನೆ ನೀಡಲಾಗಿದೆ. e-KYC ಬಾಕಿ…