ದೇಶದ ಕೃಷಿ ವಿಜ್ಞಾನ ಕೇಂದ್ರಗಳನ್ನು ನಾಲೆಡ್ಜ್ ಹಬ್ಗಳನ್ನಾಗಿ ಮಾಡಲು ಕೇಂದ್ರ ಸರ್ಕಾರ ಯೋಜನೆ ಹಾಕಿಕೊಂಡಿದೆ ಎಂದು ರಾಜ್ಯ ಯೋಜನಾ ಆಯೋಗದ ಮಾಜಿ ಸದಸ್ಯ ಡಾ.ಕೆ.ಪಿ.ಬಸವರಾಜಪ್ಪ ಹೇಳಿದ್ದಾರೆ.
ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಆರಂಭಗೊಂಡ ಎರಡು ದಿನಗಳ ಕೃಷಿಕರ ಸಮೃದ್ಧಿಗಾಗಿ ಸಸ್ಯಸಂತೆ ಮತ್ತು ಸಾವಯವ ಕೃಷಿ ಪರಿಕರಗಳ ಪ್ರದರ್ಶನ ಹಾಗೂ ಮಾರಾಟ ಮೇಳದಲ್ಲಿ ಅವರು ಮಾತನಾಡಿದರು. ಕೇಂದ್ರ ಸರ್ಕಾರ ದೇಶದ ಕೃಷಿ ಮತ್ತು ತೋಟಗಾರಿಕಾ ಕ್ಷೇತ್ರದ ಅಭಿವೃದ್ಧಿಗಾಗಿ 14 ಸಾವಿರ ಕೋಟಿ ರೂಪಾಯಿ ಮೀಸಲಿಟ್ಟಿದೆಯಲ್ಲದೇ, ಈ ಕ್ಷೇತ್ರದಲ್ಲಿ ಹೊಸ ಪ್ರಯೋಗಗಳನ್ನು ಮಾಡಿ, ರೈತರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿ ಮಾಡುವ ಚಿಂತನೆ ಹೊಂದಿದೆ ಎಂದು ಹೇಳಿದರು. ಕೃಷಿ ಕ್ಷೇತ್ರದಲ್ಲಿ 1950 ರಿಂದ ದೇಶದ ರೈತರ ಸಾಧನೆ ಸತತವಾಗಿ ಏರಿಕೆಯಾಗುತ್ತಿದೆ. 1985 ರಿಂದ ಇಂದಿನವರೆಗೆ ಶೇಕಡ.300ರಷ್ಟು ಆಹಾರ ಧಾನ್ಯ ಉತ್ಪಾದನೆ ಹೆಚ್ಚಳವಾಗಿದೆ ಎಂದು ಹೇಳಿದರು.
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…
ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…
ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…