ಕೊಪ್ಪಳದಲ್ಲಿ ಸಸ್ಯ ಸಂತೆ | 45 ಲಕ್ಷಕ್ಕೂ ಅಧಿಕ ಸಸಿಗಳು ಮಾರಾಟ | ಇಲಾಖೆಯ ಮಾದರಿ ಕಾರ್ಯ |

August 22, 2025
7:57 AM

ಕೊಪ್ಪಳ ನಗರದಲ್ಲಿ ಆಯೋಜನೆಗೊಂಡಿದ್ದ ಆರು ದಿನಗಳ ಸಸ್ಯ ಸಂತೆ ಮತ್ತು ತೋಟಗಾರಿಕೆ ಅಭಿಯಾನ  ಮುಕ್ತಾಯಗೊಂಡಿದೆ. ಈ ಅಭಿಯಾನದಲ್ಲಿ 45 ಲಕ್ಷಕ್ಕೂ ಹೆಚ್ಚಿನ ಸಸಿಗಳು ಹಾಗೂ ವಿವಿಧ ಪರಿಕರಗಳ ಬೇಡಿಕೆಯ ವಹಿವಾಟು ನಡೆಸುವ ಮೂಲಕ ಸಸ್ಯಸಂತೆ ವಿಶೇಷವಾಗಿ ಗಮನ ಸೆಳೆದಿದೆ. ಇಲಾಖೆಯ ಮಾದರಿ ಕಾರ್ಯ ಇದಾಗಿದೆ.

ತೋಟಗಾರಿಕಾ ಬೆಳೆಗಳ ಸಸಿಗಳು ಹೆಚ್ಚಾಗಿ ಮಾರಾಟವಾಗಿದ್ದವು. ವಿದೇಶಿ ಸಸಿಗಳಲ್ಲಿ ಮುಖ್ಯವಾಗಿ ಮಾವಿನ ತಳಿ ಮಿಯಾಚಾಕಿ, ಮೆಕಡೋಮಿಯಾ, ಮ್ಯಾಂಗೋಸ್ಟಿನ್, ಲಿಚ್ಚಿ, ವಿದೇಶಿ ಹಲಸು ಮತ್ತು ಚರಿ ಸಸಿಗಳು ಹೆಚ್ಚಿನ ಪ್ರಮಾಣದಲ್ಲಿ ಮಾರಾಟವಾಗಿವೆ.  ರೈತರು ಸಸ್ಯ ಸಂತೆಯಲ್ಲಿ ಹಣ್ಣು ಮತ್ತು ತೋಟಗಾರಿಕಾ ಸಸಿಗಳನ್ನು ಮುಗಿಬಿದ್ದು ಖರೀದಿ ಮಾಡಿದ್ದು, 25 ಲಕ್ಷಕ್ಕೂ ಹೆಚ್ಚಿನ ಮೊತ್ತದ ಸ್ವದೇಶಿ ಮತ್ತು ವಿದೇಶಿ ಸಸಿಗಳ ಖರೀದಿಗೆ ಮುಂಗಡವಾಗಿ ಹೆಸರು ನೊಂದಾಯಿಸಿದ್ದಾರೆ. 2 ಸಾವಿರ ಎಕರೆಗೂ ಹೆಚ್ಚಿನ ತೋಟಗಾರಿಕಾ ಪ್ರದೇಶಗಳಲ್ಲಿ ಮಾವು, ಮೂಸಂಬಿ, ನೇರಳೆ, ಸೇಬು, ನಿಂಬೆ, ಹಲಸು ಹಾಗೂ ಸಾಂಬಾರ ಪದಾರ್ಥಗಳನ್ನು ಬೆಳೆಯಲು ಮುಂದಾಗಿರುವ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ರಾಜ್ಯ ವಲಯದ ಸಹಾಯಕ ನಿರ್ದೇಶಕ ಮಂಜುನಾಥ್ ದೊಡ್ಡಪತ್ತಾರ ಹೇಳುತ್ತಾರೆ.

ಮುನಿರಾಬಾದ್ ತೋಟಗಾರಿಕಾ ಇಲಾಖೆಯಿಂದ ಸಸ್ಯಸಂತೆಯ ಬಗ್ಗೆ ಮಾಹಿತಿ ದೊರೆಯಿತು. ಇಲ್ಲಿ ವಿಭಿನ್ನ ತಳಿಯ ಹೂವು ಹಾಗೂ ಹಣ್ಣಿನ ಸಸಿಗಳನ್ನು ಖರೀದಿ ಮಾಡಿರುವುದಾಗಿ ರೈತರು ಅನುಭವ ಹಂಚಿಕೊಂಡಿದ್ದಾರೆ. ಮೇಳದಲ್ಲಿ ಸ್ವದೇಶಿ ಹಾಗೂ ವಿದೇಶಿ ಹಣ್ಣಿನ ಸಸಿಗಳ ಕುರಿತಾಗಿ ಸಸ್ಯಸಂತೆಯಲ್ಲಿ ಮಾಹಿತಿ ದೊರಕಿದ್ದು, ಕಡಿಮೆ ಬೆಲೆಯಲ್ಲಿ ಹೆಚ್ಚಿನ ಸಸಿಗಳನ್ನು ಕೊಳ್ಳಲು ಸಾಧ್ಯವಾಗಿದ್ದರ ಬಗ್ಗೆ ರೈತ ಪ್ರಶಾಂತ್ ನಿಲೋಗಲ್ ಸಂತಸ ಹಂಚಿಕೊಂಡರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ….

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror