ಕೊಪ್ಪಳ ನಗರದಲ್ಲಿ ಆಯೋಜನೆಗೊಂಡಿದ್ದ ಆರು ದಿನಗಳ ಸಸ್ಯ ಸಂತೆ ಮತ್ತು ತೋಟಗಾರಿಕೆ ಅಭಿಯಾನ ಮುಕ್ತಾಯಗೊಂಡಿದೆ. ಈ ಅಭಿಯಾನದಲ್ಲಿ 45 ಲಕ್ಷಕ್ಕೂ ಹೆಚ್ಚಿನ ಸಸಿಗಳು ಹಾಗೂ ವಿವಿಧ ಪರಿಕರಗಳ ಬೇಡಿಕೆಯ ವಹಿವಾಟು ನಡೆಸುವ ಮೂಲಕ ಸಸ್ಯಸಂತೆ ವಿಶೇಷವಾಗಿ ಗಮನ ಸೆಳೆದಿದೆ. ಇಲಾಖೆಯ ಮಾದರಿ ಕಾರ್ಯ ಇದಾಗಿದೆ.
ತೋಟಗಾರಿಕಾ ಬೆಳೆಗಳ ಸಸಿಗಳು ಹೆಚ್ಚಾಗಿ ಮಾರಾಟವಾಗಿದ್ದವು. ವಿದೇಶಿ ಸಸಿಗಳಲ್ಲಿ ಮುಖ್ಯವಾಗಿ ಮಾವಿನ ತಳಿ ಮಿಯಾಚಾಕಿ, ಮೆಕಡೋಮಿಯಾ, ಮ್ಯಾಂಗೋಸ್ಟಿನ್, ಲಿಚ್ಚಿ, ವಿದೇಶಿ ಹಲಸು ಮತ್ತು ಚರಿ ಸಸಿಗಳು ಹೆಚ್ಚಿನ ಪ್ರಮಾಣದಲ್ಲಿ ಮಾರಾಟವಾಗಿವೆ. ರೈತರು ಸಸ್ಯ ಸಂತೆಯಲ್ಲಿ ಹಣ್ಣು ಮತ್ತು ತೋಟಗಾರಿಕಾ ಸಸಿಗಳನ್ನು ಮುಗಿಬಿದ್ದು ಖರೀದಿ ಮಾಡಿದ್ದು, 25 ಲಕ್ಷಕ್ಕೂ ಹೆಚ್ಚಿನ ಮೊತ್ತದ ಸ್ವದೇಶಿ ಮತ್ತು ವಿದೇಶಿ ಸಸಿಗಳ ಖರೀದಿಗೆ ಮುಂಗಡವಾಗಿ ಹೆಸರು ನೊಂದಾಯಿಸಿದ್ದಾರೆ. 2 ಸಾವಿರ ಎಕರೆಗೂ ಹೆಚ್ಚಿನ ತೋಟಗಾರಿಕಾ ಪ್ರದೇಶಗಳಲ್ಲಿ ಮಾವು, ಮೂಸಂಬಿ, ನೇರಳೆ, ಸೇಬು, ನಿಂಬೆ, ಹಲಸು ಹಾಗೂ ಸಾಂಬಾರ ಪದಾರ್ಥಗಳನ್ನು ಬೆಳೆಯಲು ಮುಂದಾಗಿರುವ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ರಾಜ್ಯ ವಲಯದ ಸಹಾಯಕ ನಿರ್ದೇಶಕ ಮಂಜುನಾಥ್ ದೊಡ್ಡಪತ್ತಾರ ಹೇಳುತ್ತಾರೆ.
ಮುನಿರಾಬಾದ್ ತೋಟಗಾರಿಕಾ ಇಲಾಖೆಯಿಂದ ಸಸ್ಯಸಂತೆಯ ಬಗ್ಗೆ ಮಾಹಿತಿ ದೊರೆಯಿತು. ಇಲ್ಲಿ ವಿಭಿನ್ನ ತಳಿಯ ಹೂವು ಹಾಗೂ ಹಣ್ಣಿನ ಸಸಿಗಳನ್ನು ಖರೀದಿ ಮಾಡಿರುವುದಾಗಿ ರೈತರು ಅನುಭವ ಹಂಚಿಕೊಂಡಿದ್ದಾರೆ. ಮೇಳದಲ್ಲಿ ಸ್ವದೇಶಿ ಹಾಗೂ ವಿದೇಶಿ ಹಣ್ಣಿನ ಸಸಿಗಳ ಕುರಿತಾಗಿ ಸಸ್ಯಸಂತೆಯಲ್ಲಿ ಮಾಹಿತಿ ದೊರಕಿದ್ದು, ಕಡಿಮೆ ಬೆಲೆಯಲ್ಲಿ ಹೆಚ್ಚಿನ ಸಸಿಗಳನ್ನು ಕೊಳ್ಳಲು ಸಾಧ್ಯವಾಗಿದ್ದರ ಬಗ್ಗೆ ರೈತ ಪ್ರಶಾಂತ್ ನಿಲೋಗಲ್ ಸಂತಸ ಹಂಚಿಕೊಂಡರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ….
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…