Advertisement
MIRROR FOCUS

ಕೊಪ್ಪಳದಲ್ಲಿ ಸಸ್ಯ ಸಂತೆ | 45 ಲಕ್ಷಕ್ಕೂ ಅಧಿಕ ಸಸಿಗಳು ಮಾರಾಟ | ಇಲಾಖೆಯ ಮಾದರಿ ಕಾರ್ಯ |

Share

ಕೊಪ್ಪಳ ನಗರದಲ್ಲಿ ಆಯೋಜನೆಗೊಂಡಿದ್ದ ಆರು ದಿನಗಳ ಸಸ್ಯ ಸಂತೆ ಮತ್ತು ತೋಟಗಾರಿಕೆ ಅಭಿಯಾನ  ಮುಕ್ತಾಯಗೊಂಡಿದೆ. ಈ ಅಭಿಯಾನದಲ್ಲಿ 45 ಲಕ್ಷಕ್ಕೂ ಹೆಚ್ಚಿನ ಸಸಿಗಳು ಹಾಗೂ ವಿವಿಧ ಪರಿಕರಗಳ ಬೇಡಿಕೆಯ ವಹಿವಾಟು ನಡೆಸುವ ಮೂಲಕ ಸಸ್ಯಸಂತೆ ವಿಶೇಷವಾಗಿ ಗಮನ ಸೆಳೆದಿದೆ. ಇಲಾಖೆಯ ಮಾದರಿ ಕಾರ್ಯ ಇದಾಗಿದೆ.

ತೋಟಗಾರಿಕಾ ಬೆಳೆಗಳ ಸಸಿಗಳು ಹೆಚ್ಚಾಗಿ ಮಾರಾಟವಾಗಿದ್ದವು. ವಿದೇಶಿ ಸಸಿಗಳಲ್ಲಿ ಮುಖ್ಯವಾಗಿ ಮಾವಿನ ತಳಿ ಮಿಯಾಚಾಕಿ, ಮೆಕಡೋಮಿಯಾ, ಮ್ಯಾಂಗೋಸ್ಟಿನ್, ಲಿಚ್ಚಿ, ವಿದೇಶಿ ಹಲಸು ಮತ್ತು ಚರಿ ಸಸಿಗಳು ಹೆಚ್ಚಿನ ಪ್ರಮಾಣದಲ್ಲಿ ಮಾರಾಟವಾಗಿವೆ.  ರೈತರು ಸಸ್ಯ ಸಂತೆಯಲ್ಲಿ ಹಣ್ಣು ಮತ್ತು ತೋಟಗಾರಿಕಾ ಸಸಿಗಳನ್ನು ಮುಗಿಬಿದ್ದು ಖರೀದಿ ಮಾಡಿದ್ದು, 25 ಲಕ್ಷಕ್ಕೂ ಹೆಚ್ಚಿನ ಮೊತ್ತದ ಸ್ವದೇಶಿ ಮತ್ತು ವಿದೇಶಿ ಸಸಿಗಳ ಖರೀದಿಗೆ ಮುಂಗಡವಾಗಿ ಹೆಸರು ನೊಂದಾಯಿಸಿದ್ದಾರೆ. 2 ಸಾವಿರ ಎಕರೆಗೂ ಹೆಚ್ಚಿನ ತೋಟಗಾರಿಕಾ ಪ್ರದೇಶಗಳಲ್ಲಿ ಮಾವು, ಮೂಸಂಬಿ, ನೇರಳೆ, ಸೇಬು, ನಿಂಬೆ, ಹಲಸು ಹಾಗೂ ಸಾಂಬಾರ ಪದಾರ್ಥಗಳನ್ನು ಬೆಳೆಯಲು ಮುಂದಾಗಿರುವ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ರಾಜ್ಯ ವಲಯದ ಸಹಾಯಕ ನಿರ್ದೇಶಕ ಮಂಜುನಾಥ್ ದೊಡ್ಡಪತ್ತಾರ ಹೇಳುತ್ತಾರೆ.

ಮುನಿರಾಬಾದ್ ತೋಟಗಾರಿಕಾ ಇಲಾಖೆಯಿಂದ ಸಸ್ಯಸಂತೆಯ ಬಗ್ಗೆ ಮಾಹಿತಿ ದೊರೆಯಿತು. ಇಲ್ಲಿ ವಿಭಿನ್ನ ತಳಿಯ ಹೂವು ಹಾಗೂ ಹಣ್ಣಿನ ಸಸಿಗಳನ್ನು ಖರೀದಿ ಮಾಡಿರುವುದಾಗಿ ರೈತರು ಅನುಭವ ಹಂಚಿಕೊಂಡಿದ್ದಾರೆ. ಮೇಳದಲ್ಲಿ ಸ್ವದೇಶಿ ಹಾಗೂ ವಿದೇಶಿ ಹಣ್ಣಿನ ಸಸಿಗಳ ಕುರಿತಾಗಿ ಸಸ್ಯಸಂತೆಯಲ್ಲಿ ಮಾಹಿತಿ ದೊರಕಿದ್ದು, ಕಡಿಮೆ ಬೆಲೆಯಲ್ಲಿ ಹೆಚ್ಚಿನ ಸಸಿಗಳನ್ನು ಕೊಳ್ಳಲು ಸಾಧ್ಯವಾಗಿದ್ದರ ಬಗ್ಗೆ ರೈತ ಪ್ರಶಾಂತ್ ನಿಲೋಗಲ್ ಸಂತಸ ಹಂಚಿಕೊಂಡರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ….

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

11 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

18 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

1 day ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

1 day ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

2 days ago