Advertisement
MIRROR FOCUS

ಕೊಪ್ಪಳದಲ್ಲಿ ಸಸ್ಯ ಸಂತೆ | 45 ಲಕ್ಷಕ್ಕೂ ಅಧಿಕ ಸಸಿಗಳು ಮಾರಾಟ | ಇಲಾಖೆಯ ಮಾದರಿ ಕಾರ್ಯ |

Share

ಕೊಪ್ಪಳ ನಗರದಲ್ಲಿ ಆಯೋಜನೆಗೊಂಡಿದ್ದ ಆರು ದಿನಗಳ ಸಸ್ಯ ಸಂತೆ ಮತ್ತು ತೋಟಗಾರಿಕೆ ಅಭಿಯಾನ  ಮುಕ್ತಾಯಗೊಂಡಿದೆ. ಈ ಅಭಿಯಾನದಲ್ಲಿ 45 ಲಕ್ಷಕ್ಕೂ ಹೆಚ್ಚಿನ ಸಸಿಗಳು ಹಾಗೂ ವಿವಿಧ ಪರಿಕರಗಳ ಬೇಡಿಕೆಯ ವಹಿವಾಟು ನಡೆಸುವ ಮೂಲಕ ಸಸ್ಯಸಂತೆ ವಿಶೇಷವಾಗಿ ಗಮನ ಸೆಳೆದಿದೆ. ಇಲಾಖೆಯ ಮಾದರಿ ಕಾರ್ಯ ಇದಾಗಿದೆ.

ತೋಟಗಾರಿಕಾ ಬೆಳೆಗಳ ಸಸಿಗಳು ಹೆಚ್ಚಾಗಿ ಮಾರಾಟವಾಗಿದ್ದವು. ವಿದೇಶಿ ಸಸಿಗಳಲ್ಲಿ ಮುಖ್ಯವಾಗಿ ಮಾವಿನ ತಳಿ ಮಿಯಾಚಾಕಿ, ಮೆಕಡೋಮಿಯಾ, ಮ್ಯಾಂಗೋಸ್ಟಿನ್, ಲಿಚ್ಚಿ, ವಿದೇಶಿ ಹಲಸು ಮತ್ತು ಚರಿ ಸಸಿಗಳು ಹೆಚ್ಚಿನ ಪ್ರಮಾಣದಲ್ಲಿ ಮಾರಾಟವಾಗಿವೆ.  ರೈತರು ಸಸ್ಯ ಸಂತೆಯಲ್ಲಿ ಹಣ್ಣು ಮತ್ತು ತೋಟಗಾರಿಕಾ ಸಸಿಗಳನ್ನು ಮುಗಿಬಿದ್ದು ಖರೀದಿ ಮಾಡಿದ್ದು, 25 ಲಕ್ಷಕ್ಕೂ ಹೆಚ್ಚಿನ ಮೊತ್ತದ ಸ್ವದೇಶಿ ಮತ್ತು ವಿದೇಶಿ ಸಸಿಗಳ ಖರೀದಿಗೆ ಮುಂಗಡವಾಗಿ ಹೆಸರು ನೊಂದಾಯಿಸಿದ್ದಾರೆ. 2 ಸಾವಿರ ಎಕರೆಗೂ ಹೆಚ್ಚಿನ ತೋಟಗಾರಿಕಾ ಪ್ರದೇಶಗಳಲ್ಲಿ ಮಾವು, ಮೂಸಂಬಿ, ನೇರಳೆ, ಸೇಬು, ನಿಂಬೆ, ಹಲಸು ಹಾಗೂ ಸಾಂಬಾರ ಪದಾರ್ಥಗಳನ್ನು ಬೆಳೆಯಲು ಮುಂದಾಗಿರುವ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ರಾಜ್ಯ ವಲಯದ ಸಹಾಯಕ ನಿರ್ದೇಶಕ ಮಂಜುನಾಥ್ ದೊಡ್ಡಪತ್ತಾರ ಹೇಳುತ್ತಾರೆ.

ಮುನಿರಾಬಾದ್ ತೋಟಗಾರಿಕಾ ಇಲಾಖೆಯಿಂದ ಸಸ್ಯಸಂತೆಯ ಬಗ್ಗೆ ಮಾಹಿತಿ ದೊರೆಯಿತು. ಇಲ್ಲಿ ವಿಭಿನ್ನ ತಳಿಯ ಹೂವು ಹಾಗೂ ಹಣ್ಣಿನ ಸಸಿಗಳನ್ನು ಖರೀದಿ ಮಾಡಿರುವುದಾಗಿ ರೈತರು ಅನುಭವ ಹಂಚಿಕೊಂಡಿದ್ದಾರೆ. ಮೇಳದಲ್ಲಿ ಸ್ವದೇಶಿ ಹಾಗೂ ವಿದೇಶಿ ಹಣ್ಣಿನ ಸಸಿಗಳ ಕುರಿತಾಗಿ ಸಸ್ಯಸಂತೆಯಲ್ಲಿ ಮಾಹಿತಿ ದೊರಕಿದ್ದು, ಕಡಿಮೆ ಬೆಲೆಯಲ್ಲಿ ಹೆಚ್ಚಿನ ಸಸಿಗಳನ್ನು ಕೊಳ್ಳಲು ಸಾಧ್ಯವಾಗಿದ್ದರ ಬಗ್ಗೆ ರೈತ ಪ್ರಶಾಂತ್ ನಿಲೋಗಲ್ ಸಂತಸ ಹಂಚಿಕೊಂಡರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ….

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ | ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…

3 minutes ago

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ

ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…

5 hours ago

ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!

ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…

8 hours ago

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

12 hours ago

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಮೈತ್ರಿ..! ಹವಾಮಾನ ಸವಾಲು ಎದುರಿಸಲು ಸ್ಮಾರ್ಟ್ ಕೃಷಿ ತಂತ್ರಜ್ಞಾನಕ್ಕೆ ಒತ್ತು

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್‌, AI ಹಾಗೂ ಸ್ಮಾರ್ಟ್…

12 hours ago

“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್

ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…

21 hours ago