Advertisement
The Rural Mirror ಕಾಳಜಿ

“ತಾಯಿಯ ಹೆಸರಲ್ಲಿ ಒಂದು ಗಿಡ” ಅಭಿಯಾನ | ಪರಿಸರ ಉಳಿಸಿ ಇದೂ ಒಂದು ಅಭಿಯಾನ |

Share

ಕಳೆದೊಂದು ವಾರದಿಂದ “ತಾಯಿಯ ಹೆಸರಲ್ಲಿ ಒಂದು ಗಿಡ” ಅಭಿಯಾನಕ್ಕೆ ಎಲ್ಲೆಡೆಯೂ ಚಾಲನೆ ನೀಡಲಾಗಿದೆ. ಪರಿಸರ ಸ್ವಚ್ಛತೆ ಹಾಗೂ ಸ್ವಚ್ಛ ಪರಿಸರವೂ ಒಂದು ಅಭಿಯಾನವಾಗಿದೆ. ಎಲ್ಲಾ ಅಭಿಯಾನಗಳೂ ಒಂದು ದಿನಕ್ಕೆ ಮುಗಿಯುವುದಿಲ್ಲ, ಇದು ನಿರಂತರ ಪ್ರಕ್ರಿಯೆ. 

Advertisement

ತಾಯಿಯ ಹೆಸರಿನಲ್ಲಿ ಒಂದು ಗಿಡ ನೆಡುವ ಅಭಿಯಾನವು ರಾಜ್ಯದ ಮಾತ್ರವಲ್ಲ ದೇಶದ ಹಲವು ಕಡೆಗಳಲ್ಲಿ ನಡೆಯುತ್ತಿದೆ. ಈಗಾಗಲೇ ಪರಿಸರ ಉಳಿಸುವ ಅಭಿಯಾನವು ಹಾಗೂ ಹವಾಮಾನ ಬದಲಾವಣೆಯ ನಿಯಂತ್ರಣ ತೀರಾ ಅನಿವಾರ್ಯವಾಗಿ ನಡೆಯಲೇಬೇಕಿದೆ. ಹವಾಮಾನ ಬದಲಾವಣೆ ಕಾರಣದಿಂದ ಕೃಷಿ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಈಗಾಗಲೇ ಹಲವು ಸಂಕಷ್ಟಗಳು ಆರಂಭವಾಗಿದೆ. ಇದರ ನಿಯಂತ್ರಣಕ್ಕೆ ಇಂತಹ ಅಭಿಯಾನಗಳು ನಿರಂತರವಾಗಿ ನಡೆಯಬೇಕಿದೆ. ಶಾಳೇಐ ಆವರಣಗಳಲ್ಲಿ ಹಣ್ಣಿನ ಗಿಡನಗಳನ್ನು ನೆಡುವ ಮೂಲಕ ಮಕ್ಕಳಿಗೂ, ಪರಿಸರಕ್ಕೂ ಪೂರಕವಾದ ವಾತಾವರಣ ಸೃಷ್ಟಿಯಾಗಬಹುದಾಗಿದೆ.

“ತಾಯಿಯ ಹೆಸರಲ್ಲಿ ಒಂದು ಗಿಡ” ಅಭಿಯಾನದಡಿ ಕೋಲಾರ ತಾಲೂಕಿನ ಸೀತಿ ಬಿಜಿಎಸ್ ಪಬ್ಲಿಕ್ ಶಾಲೆ ಆವರಣದಲ್ಲಿ ಏಕಕಾಲದಲ್ಲಿ 100 ಗಿಡ ನೆಡುವ ಕಾರ್ಯಕ್ಕೆ ಚಾಲನೆ ನೀಡಲಾಗಿತ್ತು.  ವಿದ್ಯಾರ್ಥಿಗಳು ಕೂಡಾ ಹುಟ್ಟುಹಬ್ಬದಂದು ಒಂದೊಂದು ಗಿಡ ನೆಟ್ಟು ಪೋಷಿಸುವ ಸಂಕಲ್ಪ ಮಾಡಲು ಇಲ್ಲಿ ನಿರ್ಧರಿಸಲಾಗಿದೆ.  ಇದರ ಜೊತೆಗೇ ಪ್ಲಾಸ್ಟಿಕ್ ಬಳಕೆ ನಿಯಂತ್ರಿಸಿ ಪ್ಲಾಸ್ಟಿಕ್ ಮುಕ್ತ ಗ್ರಾಮವಾಗಿಸಲೂ ಚಿಂತನೆ ನಡೆದಿದೆ.

ತಾಯಿಯ ಹೆಸರಿನಲ್ಲಿ ಗಿಡ ನೆಡುವುದು ಏಕೆ? ತಾಯಿ ಯಾವತ್ತೂ ಪ್ರೀತಿ, ಸಹಾನುಭೂತಿ ಮತ್ತು  ಕಾಳಜಿಯನ್ನು ಹೊಂದಿದವಳು. ಪರಿಸರವೂ ಹಾಗೆಯೇ, ಯಾವತ್ತೂ ಭೂಮಿಯ ಮೇಲಿನ ಎಲ್ಲಾ ಜೀವಿಗಳನ್ನೂ ಕಾಪಾಡುತ್ತಾ ಇರುತ್ತದೆ. ತಾಯಿಯಂತೆಯೇ, ಪ್ರಕೃತಿ ಮಾತೆ ಕೂಡ ನಮ್ಮನ್ನು ಬೇಷರತ್ತಾಗಿ ಪೋಷಿಸುತ್ತಾಳೆ, ಯಾವಾಗಲೂ ನಮ್ಮನ್ನು ರಕ್ಷಿಸುತ್ತಾಳೆ. ಅವಳ ಅಪ್ಪುಗೆಯಿಂದ ಸಾಂತ್ವನವನ್ನು ಕಂಡುಕೊಳ್ಳುತ್ತೇವೆ. ಹೀಗಾಗಿ ಅವುಗಳ ರಕ್ಷಣೆ ಎಲ್ಲರ ಜವಾಬ್ದಾರಿಯೂ ಹೌದು. ಗಿಡಗಳನ್ನು ನೆಟ್ಟು ತಾಯಂದಿರು ನೀಡುವ ಪ್ರೀತಿ, ಕಾಳಜಿಯನ್ನು ಗೌರವಿಸೋಣ.

ನಮ್ಮ ತಾಯಂದಿರು ನಮ್ಮನ್ನು ಪ್ರೀತಿಸುವಂತೆಯೇ, ಪ್ರಕೃತಿ ಮಾತೆ ನಮ್ಮನ್ನು ಕಾಳಜಿ ವಹಿಸುತ್ತದೆ, ನಿರೀಕ್ಷೆಯಿಲ್ಲದೆ ಸಹಾಯ ಮಾಡುತ್ತದೆ. ಇದಕ್ಕಾಗಿಯೇ ತಾಯಿಯ ಹೆಸರಿನಲ್ಲಿ ನಮ್ಮದೂ ಒಂದು ಗಿಡ. ಅದು ಫೋಟೋ ತೆಗೆಯಲು ಅಲ್ಲ…!.

The “Plant in Mother’s Name” campaign has been launched globally over the past week. In addition, promoting environmental cleanliness and a clean environment is also a key focus of this campaign. It is important to recognize that these campaigns are ongoing efforts and not something that can be achieved in a single day.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

33 minutes ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

5 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

5 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

5 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

17 hours ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

1 day ago