ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಹಾಡೋನಹಳ್ಳಿಯ ಜಿಲ್ಲಾ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸಸ್ಯ ತಳಿಗಳ ಸಂರಕ್ಷಣೆ ಮತ್ತು ರೈತರ ಹಕ್ಕುಗಳ ಕಾಯ್ದೆ ಯ ಬಗ್ಗೆ ತರಬೇತಿ ಮತ್ತು ವಸ್ತುಪ್ರದರ್ಶನ ನಡೆಯಿತು. ವಸ್ತುಪ್ರದರ್ಶನದಲ್ಲಿ ವಿವಿಧ ಜಿಲ್ಲೆಗಳ ರೈತರು ತಂದಿದ್ದ ಹಣ್ಣುಗಳ ತಳಿಗಳು, ಬೀಜಗಳು, ವೈವಿಧ್ಯತೆಯ ಸ್ಥಳೀಯ ಸೊಪ್ಪು ಹಾಗೂ ತರಕಾರಿಗಳು, ಸಿರಿಧಾನ್ಯಗಳ ತಳಿಗಳನ್ನು ಪ್ರದರ್ಶನಕ್ಕಿಡಲಾಗಿತ್ತು. ಕೃಷಿ ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕ ಡಾ. ನಿರಂಜನ ಮೂರ್ತಿ ಮೇಳವನ್ನು ಉದ್ಘಾಟಿಸಿ ಮಾತನಾಡಿ, ನಮ್ಮಲ್ಲಿರುವ ಸಸ್ಯ ತಳಿಗಳನ್ನು ಅದರಲ್ಲೂ ವಿಶೇಷವಾಗಿ ರೈತರು ಸಂರಕ್ಷಿಸಿದ ಸಸ್ಯತಳಿಗಳನ್ನು ರಕ್ಷಣೆ ಮಾಡಬೇಕು, ಅದರ ಜೊತೆಗೆ ಹಲಸು ತಳಿಗಳನ್ನೂ ಸಂರಕ್ಷಣೆ ಮಾಡಬೇಕಿದೆ ಎಂದು ಕರೆ ನೀಡಿದರು. ಇದೇ ವೇಳೆ ದೇಸೀ ತಳಿ ಬೀಜ ಸಂರಕ್ಷಕ ರೈತರನ್ನು ಗೌರವಿಸಲಾಯಿತು.
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…