Advertisement
ಅನುಕ್ರಮ

ಸಸ್ಯ ಪರಿಚಯ | ಮರಳಿ ತನ್ನಿ ಮರೆತ ಸೊಪ್ಪು – ತುಂಬೆ ಗಿಡ

Share

ಅಚ್ಚ ಬಿಳಿಯ ಹೂಗಳಿಂದ ನಳನಳಿಸುವ ತುಂಬೆ ಗಿಡವು ಶಿವ ದೇವರಿಗೆ ಪ್ರೀತಿಯ ಹೂವಂತೆ. ಮಳೆಗಾಲದಲ್ಲಿ ಅಂಗಳ, ಹೂತೋಟ, ತೋಟದ ಬದಿಗಳಲ್ಲಿ ಹುಟ್ಟಿ ಬೆಳೆಯುವ ತುಂಬೆ ಗಿಡವು ಔಷಧೀಯ ಗಿಡ.

ಚಿಕ್ಕ ಮಕ್ಕಳಿಗೆ ಕಫದ ಸಮಸ್ಯೆ ಯಾದಾಗ ತುಂಬೆ ಎಲೆಗಳ ರಸವನ್ನು ಜೇನುತುಪ್ಪ ಸೇರಿಸಿ ನುಣ್ಣಗೆ ಅರೆದು ಕುಡಿಸಿದರೆ ಕಫ ನಿವಾರಣೆ ಆಗುತ್ತದೆ. ಶೀತ, ನೆಗಡಿ , ಜ್ವರ ತಲೆನೋವು ಮೊದಲಾದ ಮಳೆಗಾಲದ ಸಮಸ್ಯೆಗಳನ್ನು ತುಂಬೆ ಕಷಾಯವನ್ನು ಸೇವಿಸಿ ಕಡಿಮೆ ಮಾಡಿಕೊಳ್ಳಬಹುದು. ಅಲರ್ಜಿ, ತುರಿಕಜ್ಜಿಗಳಿಗೆ ತುಂಬೆ ರಸವನ್ನು ಉಪ್ಪಿನ ಜತೆ ಬೆರೆಸಿ ಹಚ್ಚಿದರೆ ಉಪಶಮನವಾಗುತ್ತದೆ.

ಕಣ್ಣು ನೋವು ಬಂದಾಗ ಒಂದು ಹಿಡಿ ತುಂಬೆಹೂಗಳನ್ನು ಚೆನ್ನಾಗಿ ಜಜ್ಜಿ ಶುದ್ಧ ವಾದ ಬಟ್ಟೆಯನ್ನು ಬಳಸಿ ರಸವನ್ನು ಹಿಂಡಿಕೊಂಡು ಕಣ್ಣಿಗೆ ನಾಲ್ಕಾರು ಹನಿಗಳನ್ನು ದಿನಕ್ಕೆರಡು ಬಾರಿ ಬಿಡಬೇಕು. ಎರಡು ಮೂರು ದಿನಗಳಲ್ಲಿ ಕಣ್ಣುನೋವು ಕಡಿಮೆಯಾಗುತ್ತದೆ. ತುಂಬೆ ಬೇರನ್ನು ಸಹ ಔಷಧವಾಗಿ ಬಳಸುತ್ತಾರೆ.ಆಯುರ್ವೇದದಲ್ಲಿ ತುಂಬೆ ಗಿಡವನ್ನು ತುಂಬಾ ಬಳಕೆ ಮಾಡುತ್ತಾರೆ.

ಮಳೆಗಾಲದಲ್ಲಿ ಸಮೃದ್ಧವಾಗಿ ದೊರೆಯುವ ತುಂಬೆ ಗಿಡಗಳನ್ನು ಬೇರು ಸಹಿತ ಕಿತ್ತು ಅದನ್ನು ಚಿಕ್ಕ ಚಿಕ್ಕ ತುಂಡುಗಳನ್ನು ಮಾಡಿ ಒಣಗಿಸಿ ಚೂರ್ಣ ಮಾಡಿಟ್ಟುಕೊಂಡರೆ ಬೇಸಿಗೆಯಲ್ಲಿ ಗಿಡಗಳ ಲಭ್ಯತೆ ಕಡಿಮೆ ಇದ್ದಾಗ ಔಷಧವಾಗಿ ಬಳಸಿ ಕೊಳ್ಳಬಹುದು.

ತುಂಬೆ ಗಿಡ ಚರ್ಮದ ತುರಿಕೆಗೆ ಉತ್ತಮ ಔಷಧವಾಗಿದೆ. ಎಲೆಗಳ ರಸವನ್ನು ಪೇಸ್ಟ್ ಮಾಡಿ ಚರ್ಮಕ್ಕೆ ಲೇಪಿಸಿದರೆ ತಕ್ಷಣ ತುರಿಕೆ ಕಡಿಮೆಯಾಗುತ್ತದೆ. ತುಂಬೆಗಿಡದ ಬೇರಿನ ಪುಡಿಯೊಂದಿಗೆ 1-2 ಗ್ರಾಂ ಕಾಳು ಮೆಣಸಿನ ಪುಡಿಯನ್ನು ಸೇರಿಸಿ ಕುಡಿದರೆ ಸಂಧಿವಾತ ಕಡಿಮೆಯಾಗುತ್ತದೆ. ನಿದ್ರಾಹೀನತೆಯ ನಿವಾರಣೆಗೆ ತುಂಬೆ ಗಿಡದ ಕಷಾಯ ಸಹಕಾರಿ. ತುಂಬೆ ಗಿಡದ ಎಲೆಗಳ ಕಷಾಯ ಮಾಡಿ ಕುಡಿದರೆ ನರಗಳ ಸೆಳೆತ, ಗಂಟು ಕಟ್ಟುವುದು, ನೋವು ಇನ್ನಿತರ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ. ತುಂಬೆ ರಸಕ್ಕೆ ಕರಿಮೆಣಸಿನ ಪುಡಿಯನ್ನು ಮಿಶ್ರಣ ಮಾಡಿ ಸೇವಿಸಿದರೆ ಮಲೇರಿಯಾ ಜ್ವರ ಕಡಿಮೆಯಾಗುತ್ತದೆ.

ದ್ರೋಣಿ ಪುಷ್ಠಿ ಎಂಬ ಹೆಸರಿರುವ ತುಂಬೆ ಗಿಡದ ಪುಡಿಯನ್ನು ಯಕೃತ್ತಿನ ಅಸ್ವಸ್ಥತೆಯನ್ನು ದೂರ ಮಾಡುತ್ತದೆ. ತುಂಬೆ ಗಿಡದ ಕಷಾಯವು ಅಜೀರ್ಣಕ್ಕೆ ಉತ್ತಮ ಪ್ರಯೋಜನಕಾರಿ. ಇದರ ಸಸ್ಯ ಶಾಸ್ತ್ರೀಯ ಹೆಸರು (eucas spera) ಹೊಟ್ಟೆಯಲ್ಲಿ ಜಂತುಹುಳವಿನಿಂದಾಗಿ ಪ್ರಾರಂಭವಾದರೆ ತುಂಬೆಯ ಎಲೆಗಳನ್ನು ಜಜ್ಜಿ ರಸ ತೆಗೆದು ಜೇನುತುಪ್ಪದೊಂದಿಗೆ ಸೇವಿಸಿದರೆ ಸಮಸ್ಯೆ ನಿವಾರಣೆಯಾಗುತ್ತದೆ. ಕಷಾಯ ಮಾಡಿ ಚಿಟಿಕೆ ಅರಸಿನ ಬೆರೆಸಿ ಕುಡಿದರೆ ಶರೀರದಲ್ಲಿ ಹಸಿಗಾಯ ಮಾಯವಾಗುತ್ತದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಜಯಲಕ್ಷ್ಮಿ ದಾಮ್ಲೆ

ಜಯಲಕ್ಷ್ಮಿ ದಾಮ್ಲೆ ಅವರು ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಕೆಲಸ ಮಾಡುತ್ತಿದ್ದಾರೆ. ಪರಿಸರ ಸಂಬಂಧಿತ ಬರಹ, ಅಧ್ಯಯನದಲ್ಲಿ ಆಸಕ್ತಿ ಹೊಂದಿದ್ದಾರೆ.

Published by
ಜಯಲಕ್ಷ್ಮಿ ದಾಮ್ಲೆ

Recent Posts

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

3 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

9 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

21 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

21 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

1 day ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

1 day ago