ವಿಶ್ವ ಪರಿಸರ ದಿನ. ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಸೇರಿದಂತೆ ಹಲವು ಗಣ್ಯರು ಪರಿಸರ ದಿನದ ಶುಭಾಶಯ ಕೋರಿದ್ದಾರೆ. ಹಸಿರು ಪಥ ಕಾರ್ಯಕ್ರಮದಡಿ ದಾವಣಗೆರೆ ಜಿಲ್ಲೆಯ ಜಿಲ್ಲಾ ಮುಖ್ಯ ರಸ್ತೆ ಮತ್ತು ಗ್ರಾಮೀಣ ರಸ್ತೆಗಳ ಎರಡೂ ಬದುಗಳಲ್ಲಿ 113 ಕಿಲೋಮೀಟರ್ ದೂರದವರೆಗೆ ಸಸಿ ನೆಡಲಾಗುವುದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಸುರೇಶ್ ಇಟ್ನಾಳ್ ತಿಳಿಸಿದ್ದಾರೆ.
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ದಾವಣಗೆರೆಯಲ್ಲಿ ವಿವಿಧ ಕಡೆಗಳಲ್ಲಿ ನಡೆದ ಸಸಿ ನೆಡುವ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಪ್ರತಿ ಕಿಲೋಮೀಟರ್ಗೆ 300 ಗಿಡಗಳಂತೆ 30 ಸಾವಿರ ಗಿಡಗಳ ಅವಶ್ಯಕತೆ ಇದೆ ಎಂದು ತಿಳಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿದೆಡೆ ಪ್ಲಾಸ್ಟಿಕ್ ಮಾಲಿನ್ಯ ಹೊಡೆದೋಡಿಸೋಣ ಧ್ಯೇಯವಾಕ್ಯದೊಂದಿಗೆ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು. ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ವಿಶ್ವ ಪರಿಸರ ದಿನ ಆಚರಿಸಲಾಯಿತು. ಶಾಲಾ ವಿದ್ಯಾರ್ಥಿಗಳಿಂದ ಪರಿಸರ ಜಾಗೃತಿ ಜಾಥಾ ನಡೆಯಿತು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…