ಪ್ಲಾಸ್ಟಿಕ್‌ ಮಾಲಿನ್ಯದ ವಿರುದ್ಧ ಸಂದೇಶ | ಹರಿದ್ವಾರದ ಯುವಕನಿಂದ ಪ್ಲಾಸ್ಟಿಕ್‌ ವಸ್ತುಗಳಿಂದ ಕಲಾಕೃತಿ ರಚನೆ | ಸಿಂಗ್

January 17, 2022
8:00 AM

ಪ್ಲಾಸ್ಟಿಕ್ ಮಾಲಿನ್ಯದ ವಿರುದ್ಧ ಆಂದೋಲನ ರೂಪದಲ್ಲಿ  ಕಲೆಯನ್ನು ಬಳಸಿದ ಹರಿದ್ವಾರದ ಯುವಕ ಸುಮಾರು 350 ಕೆಜಿಯಷ್ಟು ಬಳಕೆ ಮಾಡಿದ ಪ್ಲಾಸ್ಟಿಕ್‌ ಬಳಸಿಕೊಂಡು ಕಲಾಕೃತಿಯನ್ನು ಮಾಡಿದ್ದಾರೆ. ಹರಿದ್ವಾರದ ಮನ್ವೀರ್ ಸಿಂಗ್ ಈ ಪ್ರಯತ್ನ ಮಾಡಿದ ಯುವಕ.

ಮನ್ವೀರ್ ಸಿಂಗ್ ಅವರು ವೃತ್ತಿಯಲ್ಲಿ ಕಲಾ ಶಿಕ್ಷಕರಾಗಿದ್ದಾರೆ. ದೆಹಲಿಯ ಕಾಲೇಜ್ ಆಫ್ ಆರ್ಟ್ ನಿಂದ ಲಲಿತಕಲೆಯಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದ ನಂತರ ಮನ್ವೀರ್ ಅವರು  ಮನೆಯಲ್ಲಿ ಮರುಬಳಕೆ ಮಾಡಲು ಕಷ್ಟಕರವಾದ ಪ್ಲಾಸ್ಟಿಕ್‌ನ ಬಳಕೆಯನ್ನು ಕಡಿಮೆ ಮಾಡುವ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.  ಹೀಗಾಗಿ  2018 ರಿಂದ ಪ್ಲಾಸ್ಟಿಕ್‌ ಬಗ್ಗೆ ಜಾಗೃತಿ ಅಭಿಯಾನ ಪ್ರಾರಂಭಿಸಿದ್ದಾರೆ. ಇವರು ಮಾಡಿರುವ ಕಲಾಕೃತಿಯನ್ನು ಜರ್ಮನಿ, ಯುಎಇ ಅಬುಧಾಬಿಯಲ್ಲಿ ಮಾರಾಟವನ್ನು ಮಾಡಿದ್ದಾರೆ.

ಇತ್ತಿಚಿಗೆ, ಒಡಿಶಾದ ಪುರಿ ಬೀಚ್‌ನಲ್ಲಿ ಸಂಪೂರ್ಣವಾಗಿ ಪ್ಲಾಸ್ಟಿಕ್ ತ್ಯಾಜ್ಯದಿಂದ ಮಾಡಿದ 15 ಅಡಿ ಆಲಿವ್ ರಿಡ್ಲಿ ಸಮುದ್ರ ಆಮೆ ಕಲಾಕೃತಿಯನ್ನು ಮಾಡಿದ ಸಿಂಗ್.ಇಲ್ಲಿಯವರೆಗೆ 12 ಕಲಾಕೃತಿಗಳನ್ನು ಬೋರ್ಡ್ ಗಳು, ಟೇಪ್‌ಸ್ಟ್ರಿ, ಲೋಹ, ಕನ್ನಡಿ ಮತ್ತು ಮುಂತಾದವುಗಳನ್ನು ಬಳಸಿಕೊಂಡು ರಚಿಸಿದ್ದೇನೆ ಎನ್ನುತ್ತಾರೆ. ಪ್ರತಿಯೊಂದು ಕಲಾಕೃತಿಗಳನ್ನು ರಚಿಸಲು ಸರಾಸರಿ ಎರಡರಿಂದ ಮೂರು ತಿಂಗಳುಗಳನ್ನು ತೆಗೆದುಕೊಂಡಿದ್ದೇನೆ ಎಂದು ಮನ್ವೀರ್ ಸಿಂಗ್ ಹೇಳಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ
March 27, 2026
6:50 AM
by: ದ ರೂರಲ್ ಮಿರರ್.ಕಾಂ
ವೈಜ್ಞಾನಿಕ ಬೆಂಬಲ ಬೆಲೆ ಮತ್ತು ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹ
March 27, 2026
6:45 AM
by: ದ ರೂರಲ್ ಮಿರರ್.ಕಾಂ
ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ
March 27, 2026
6:34 AM
by: ದ ರೂರಲ್ ಮಿರರ್.ಕಾಂ
ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror