Advertisement
ವೈರಲ್ ಸುದ್ದಿ

ಪ್ಲಾಸ್ಟಿಕ್‌ ಮಾಲಿನ್ಯದ ವಿರುದ್ಧ ಸಂದೇಶ | ಹರಿದ್ವಾರದ ಯುವಕನಿಂದ ಪ್ಲಾಸ್ಟಿಕ್‌ ವಸ್ತುಗಳಿಂದ ಕಲಾಕೃತಿ ರಚನೆ | ಸಿಂಗ್

Share

ಪ್ಲಾಸ್ಟಿಕ್ ಮಾಲಿನ್ಯದ ವಿರುದ್ಧ ಆಂದೋಲನ ರೂಪದಲ್ಲಿ  ಕಲೆಯನ್ನು ಬಳಸಿದ ಹರಿದ್ವಾರದ ಯುವಕ ಸುಮಾರು 350 ಕೆಜಿಯಷ್ಟು ಬಳಕೆ ಮಾಡಿದ ಪ್ಲಾಸ್ಟಿಕ್‌ ಬಳಸಿಕೊಂಡು ಕಲಾಕೃತಿಯನ್ನು ಮಾಡಿದ್ದಾರೆ. ಹರಿದ್ವಾರದ ಮನ್ವೀರ್ ಸಿಂಗ್ ಈ ಪ್ರಯತ್ನ ಮಾಡಿದ ಯುವಕ.

ಮನ್ವೀರ್ ಸಿಂಗ್ ಅವರು ವೃತ್ತಿಯಲ್ಲಿ ಕಲಾ ಶಿಕ್ಷಕರಾಗಿದ್ದಾರೆ. ದೆಹಲಿಯ ಕಾಲೇಜ್ ಆಫ್ ಆರ್ಟ್ ನಿಂದ ಲಲಿತಕಲೆಯಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದ ನಂತರ ಮನ್ವೀರ್ ಅವರು  ಮನೆಯಲ್ಲಿ ಮರುಬಳಕೆ ಮಾಡಲು ಕಷ್ಟಕರವಾದ ಪ್ಲಾಸ್ಟಿಕ್‌ನ ಬಳಕೆಯನ್ನು ಕಡಿಮೆ ಮಾಡುವ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.  ಹೀಗಾಗಿ  2018 ರಿಂದ ಪ್ಲಾಸ್ಟಿಕ್‌ ಬಗ್ಗೆ ಜಾಗೃತಿ ಅಭಿಯಾನ ಪ್ರಾರಂಭಿಸಿದ್ದಾರೆ. ಇವರು ಮಾಡಿರುವ ಕಲಾಕೃತಿಯನ್ನು ಜರ್ಮನಿ, ಯುಎಇ ಅಬುಧಾಬಿಯಲ್ಲಿ ಮಾರಾಟವನ್ನು ಮಾಡಿದ್ದಾರೆ.

ಇತ್ತಿಚಿಗೆ, ಒಡಿಶಾದ ಪುರಿ ಬೀಚ್‌ನಲ್ಲಿ ಸಂಪೂರ್ಣವಾಗಿ ಪ್ಲಾಸ್ಟಿಕ್ ತ್ಯಾಜ್ಯದಿಂದ ಮಾಡಿದ 15 ಅಡಿ ಆಲಿವ್ ರಿಡ್ಲಿ ಸಮುದ್ರ ಆಮೆ ಕಲಾಕೃತಿಯನ್ನು ಮಾಡಿದ ಸಿಂಗ್.ಇಲ್ಲಿಯವರೆಗೆ 12 ಕಲಾಕೃತಿಗಳನ್ನು ಬೋರ್ಡ್ ಗಳು, ಟೇಪ್‌ಸ್ಟ್ರಿ, ಲೋಹ, ಕನ್ನಡಿ ಮತ್ತು ಮುಂತಾದವುಗಳನ್ನು ಬಳಸಿಕೊಂಡು ರಚಿಸಿದ್ದೇನೆ ಎನ್ನುತ್ತಾರೆ. ಪ್ರತಿಯೊಂದು ಕಲಾಕೃತಿಗಳನ್ನು ರಚಿಸಲು ಸರಾಸರಿ ಎರಡರಿಂದ ಮೂರು ತಿಂಗಳುಗಳನ್ನು ತೆಗೆದುಕೊಂಡಿದ್ದೇನೆ ಎಂದು ಮನ್ವೀರ್ ಸಿಂಗ್ ಹೇಳಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

7 hours ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

7 hours ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

14 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

16 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

1 day ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

1 day ago