ಪ್ಲಾಸ್ಟಿಕ್ ಮಾಲಿನ್ಯದ ವಿರುದ್ಧ ಆಂದೋಲನ ರೂಪದಲ್ಲಿ ಕಲೆಯನ್ನು ಬಳಸಿದ ಹರಿದ್ವಾರದ ಯುವಕ ಸುಮಾರು 350 ಕೆಜಿಯಷ್ಟು ಬಳಕೆ ಮಾಡಿದ ಪ್ಲಾಸ್ಟಿಕ್ ಬಳಸಿಕೊಂಡು ಕಲಾಕೃತಿಯನ್ನು ಮಾಡಿದ್ದಾರೆ. ಹರಿದ್ವಾರದ ಮನ್ವೀರ್ ಸಿಂಗ್ ಈ ಪ್ರಯತ್ನ ಮಾಡಿದ ಯುವಕ.
ಮನ್ವೀರ್ ಸಿಂಗ್ ಅವರು ವೃತ್ತಿಯಲ್ಲಿ ಕಲಾ ಶಿಕ್ಷಕರಾಗಿದ್ದಾರೆ. ದೆಹಲಿಯ ಕಾಲೇಜ್ ಆಫ್ ಆರ್ಟ್ ನಿಂದ ಲಲಿತಕಲೆಯಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದ ನಂತರ ಮನ್ವೀರ್ ಅವರು ಮನೆಯಲ್ಲಿ ಮರುಬಳಕೆ ಮಾಡಲು ಕಷ್ಟಕರವಾದ ಪ್ಲಾಸ್ಟಿಕ್ನ ಬಳಕೆಯನ್ನು ಕಡಿಮೆ ಮಾಡುವ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಹೀಗಾಗಿ 2018 ರಿಂದ ಪ್ಲಾಸ್ಟಿಕ್ ಬಗ್ಗೆ ಜಾಗೃತಿ ಅಭಿಯಾನ ಪ್ರಾರಂಭಿಸಿದ್ದಾರೆ. ಇವರು ಮಾಡಿರುವ ಕಲಾಕೃತಿಯನ್ನು ಜರ್ಮನಿ, ಯುಎಇ ಅಬುಧಾಬಿಯಲ್ಲಿ ಮಾರಾಟವನ್ನು ಮಾಡಿದ್ದಾರೆ.
ಇತ್ತಿಚಿಗೆ, ಒಡಿಶಾದ ಪುರಿ ಬೀಚ್ನಲ್ಲಿ ಸಂಪೂರ್ಣವಾಗಿ ಪ್ಲಾಸ್ಟಿಕ್ ತ್ಯಾಜ್ಯದಿಂದ ಮಾಡಿದ 15 ಅಡಿ ಆಲಿವ್ ರಿಡ್ಲಿ ಸಮುದ್ರ ಆಮೆ ಕಲಾಕೃತಿಯನ್ನು ಮಾಡಿದ ಸಿಂಗ್.ಇಲ್ಲಿಯವರೆಗೆ 12 ಕಲಾಕೃತಿಗಳನ್ನು ಬೋರ್ಡ್ ಗಳು, ಟೇಪ್ಸ್ಟ್ರಿ, ಲೋಹ, ಕನ್ನಡಿ ಮತ್ತು ಮುಂತಾದವುಗಳನ್ನು ಬಳಸಿಕೊಂಡು ರಚಿಸಿದ್ದೇನೆ ಎನ್ನುತ್ತಾರೆ. ಪ್ರತಿಯೊಂದು ಕಲಾಕೃತಿಗಳನ್ನು ರಚಿಸಲು ಸರಾಸರಿ ಎರಡರಿಂದ ಮೂರು ತಿಂಗಳುಗಳನ್ನು ತೆಗೆದುಕೊಂಡಿದ್ದೇನೆ ಎಂದು ಮನ್ವೀರ್ ಸಿಂಗ್ ಹೇಳಿದ್ದಾರೆ.
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…