ಪ್ಲಾಸ್ಟಿಕ್ ಮಾಲಿನ್ಯದ ವಿರುದ್ಧ ಆಂದೋಲನ ರೂಪದಲ್ಲಿ ಕಲೆಯನ್ನು ಬಳಸಿದ ಹರಿದ್ವಾರದ ಯುವಕ ಸುಮಾರು 350 ಕೆಜಿಯಷ್ಟು ಬಳಕೆ ಮಾಡಿದ ಪ್ಲಾಸ್ಟಿಕ್ ಬಳಸಿಕೊಂಡು ಕಲಾಕೃತಿಯನ್ನು ಮಾಡಿದ್ದಾರೆ. ಹರಿದ್ವಾರದ ಮನ್ವೀರ್ ಸಿಂಗ್ ಈ ಪ್ರಯತ್ನ ಮಾಡಿದ ಯುವಕ.
ಮನ್ವೀರ್ ಸಿಂಗ್ ಅವರು ವೃತ್ತಿಯಲ್ಲಿ ಕಲಾ ಶಿಕ್ಷಕರಾಗಿದ್ದಾರೆ. ದೆಹಲಿಯ ಕಾಲೇಜ್ ಆಫ್ ಆರ್ಟ್ ನಿಂದ ಲಲಿತಕಲೆಯಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದ ನಂತರ ಮನ್ವೀರ್ ಅವರು ಮನೆಯಲ್ಲಿ ಮರುಬಳಕೆ ಮಾಡಲು ಕಷ್ಟಕರವಾದ ಪ್ಲಾಸ್ಟಿಕ್ನ ಬಳಕೆಯನ್ನು ಕಡಿಮೆ ಮಾಡುವ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಹೀಗಾಗಿ 2018 ರಿಂದ ಪ್ಲಾಸ್ಟಿಕ್ ಬಗ್ಗೆ ಜಾಗೃತಿ ಅಭಿಯಾನ ಪ್ರಾರಂಭಿಸಿದ್ದಾರೆ. ಇವರು ಮಾಡಿರುವ ಕಲಾಕೃತಿಯನ್ನು ಜರ್ಮನಿ, ಯುಎಇ ಅಬುಧಾಬಿಯಲ್ಲಿ ಮಾರಾಟವನ್ನು ಮಾಡಿದ್ದಾರೆ.
ಇತ್ತಿಚಿಗೆ, ಒಡಿಶಾದ ಪುರಿ ಬೀಚ್ನಲ್ಲಿ ಸಂಪೂರ್ಣವಾಗಿ ಪ್ಲಾಸ್ಟಿಕ್ ತ್ಯಾಜ್ಯದಿಂದ ಮಾಡಿದ 15 ಅಡಿ ಆಲಿವ್ ರಿಡ್ಲಿ ಸಮುದ್ರ ಆಮೆ ಕಲಾಕೃತಿಯನ್ನು ಮಾಡಿದ ಸಿಂಗ್.ಇಲ್ಲಿಯವರೆಗೆ 12 ಕಲಾಕೃತಿಗಳನ್ನು ಬೋರ್ಡ್ ಗಳು, ಟೇಪ್ಸ್ಟ್ರಿ, ಲೋಹ, ಕನ್ನಡಿ ಮತ್ತು ಮುಂತಾದವುಗಳನ್ನು ಬಳಸಿಕೊಂಡು ರಚಿಸಿದ್ದೇನೆ ಎನ್ನುತ್ತಾರೆ. ಪ್ರತಿಯೊಂದು ಕಲಾಕೃತಿಗಳನ್ನು ರಚಿಸಲು ಸರಾಸರಿ ಎರಡರಿಂದ ಮೂರು ತಿಂಗಳುಗಳನ್ನು ತೆಗೆದುಕೊಂಡಿದ್ದೇನೆ ಎಂದು ಮನ್ವೀರ್ ಸಿಂಗ್ ಹೇಳಿದ್ದಾರೆ.
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…