Advertisement
The Rural Mirror ವಾರದ ವಿಶೇಷ

ಮತ್ತದೇ ಬೇಸರ ಕಳೆಯಲು ಈ ಹಿತವಾದ ಮಳೆ | ಹಾಡಷ್ಟೇ ಅಲ್ಲ, ಈ ಅಭಿನಯ ನೋಡಲೇಬೇಕು…

Share

ಮುಂಗಾರು ಮಳೆ ಆರಂಭವಾಯಿತು. ಈ ಬಾರಿ ನಿರೀಕ್ಷೆಗೂ ಮುನ್ನವೇ ಮುಂಗಾರು ಬಂದಿದೆ. ಮುಂಗಾರು ಆರಂಭದ ಹೊತ್ತು ಎಲ್ಲರಿಗೂ ಸಂತಸ. ಹಿತವಾದ ಮಳೆಯು ಮನಸ್ಸಿಗೆ ನೀಡುವ ಮುದವೇ ಬೇರೆ. ಈ ಹಿತವಾದ ಮಳೆಗೆ ಪರಿಸರ ವೀಕ್ಷಣೆಯ ಖುಷಿಯೇ ಬೇರೆ. ಸುಮ್ಮನೆ ಕುಳಿತು ಹಾಡುಗಳನ್ನು ಕೇಳುತ್ತಿರುವುದೇ ಒಂದು “ಪರಿಸರ ಧ್ಯಾನ”.  ಈ ಹಿತವಾದ ಮಳೆಯ ಹಾಡುಗಳು ಎಷ್ಟೋ ಗೆದ್ದಿವೆ, ಅದಕ್ಕೆ ಕಾರಣವೂ ಅದೇ ಮಳೆ..!. ಅಂತಹ ಹಿತವಾದ ಮಳೆಯ ನಡುವೆ “ಮತ್ತದೇ ಬೇಸರ…” ಹಾಡಿಗೆ ಮಳೆಯ ಹಿನ್ನೆಲೆಯಲ್ಲಿ  ಬೆರಳುಗಳ ಚಲನೆಯಿಂದಲೇ ನೃತ್ಯ ಮಾಡಿದ್ದಾರೆ ಕಲಾವಿದೆ ವಿದುಷಿ ಮಂಜುಳಾ ಸುಬ್ರಹ್ಮಣ್ಯ.…..ಮುಂದೆ ಓದಿ….

ಮಂಜುಳಾ ಸುಬ್ರಹ್ಮಣ್ಯ

ಮಂಜುಳಾ ಸುಬ್ರಹ್ಮಣ್ಯ ಅವರು ಸಾಂಪ್ರದಾಯಿಕ ಶಾಸ್ತ್ರೀಯ ನೃತ್ಯ ಹಾಗೂ ರಂಗಭೂಮಿ ಕ್ಷೇತ್ರಗಳಲ್ಲಿ ಕೆಲಸ ಮಾಡಿದವರು. ಹಲವಾರು ವೇದಿಕೆಗಳಲ್ಲಿ ವೈಯುಕ್ತಿಕ ಹಾಗೂ ತಮ್ಮ ತಂಡದೊಂದಿಗೆ ನೃತ್ಯ, ನೃತ್ಯ ರೂಪಕ, ದೃಶ್ಯ ರೂಪಕ, ನಾಟಕ ಪ್ರದರ್ಶನಗಳನ್ನು ನೀಡುತ್ತಾ ತಮ್ಮ ಸೃಜನಶೀಲತೆಯಿಂದ ರಂಗಭೂಮಿ ಹಾಗೂ ನಾಟ್ಯ ಕ್ಷೇತ್ರಕ್ಕೆ ಕೊಡುಗೆಯನ್ನು ನೀಡಿದ್ದಾರೆ. ಕೇರಳದ ಸಮರ ಕಲೆ ಕಳರಿ ಪಯ್ಯಟ್ಟುವನ್ನು ಕಲಿತಿರುತ್ತಾರೆ. ಮಂಜುಳಾ ಅವರು ದೂರದರ್ಶನದಲ್ಲಿ ಭರತನಾಟ್ಯದ ‘ಬಿ’ ಗ್ರೇಡ್ ಕಲಾವಿದೆ ಹಾಗೂ ನಾಟಕದಲ್ಲಿ ಆಕಾಶವಾಣಿಯ ‘ಬಿ’ ಗ್ರೇಡ್ ಕಲಾವಿದೆಯಾಗಿದ್ದಾರೆ. ನಟಿಯಾಗಿ, ನಿರ್ದೇಶಕಿಯಾಗಿ, ನೃತ್ಯ ಸಂಯೋಜಕಿಯಾಗಿ, ಸಂಗೀತ ನಿರ್ದೇಶಕಿಯಾಗಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.  ಇವರ ಸಂಶೋಧನಾ ಪ್ರವೃತ್ತಿಯನ್ನು ಗುರುತಿಸಿ ಕೇಂದ್ರ ಸರಕಾರದ ಸಂಸ್ಕೃತಿ ಇಲಾಖೆಯ ಸಚಿವಾಲಯವು ಜೂನಿಯರ್ ಫೆಲೋಶಿಪ್ ನೀಡಿ ಪ್ರೋತ್ಸಾಹಿಸಿದೆ.

ಈ ಬಾರಿಯ ಮೊದಲ ಮಳೆಗೆ “ಮತ್ತದೇ ಬೇಸರ…”  ಹಾಡಿನ ಜೊತೆಗೆ ಮಳೆಯ ಹಿನ್ನೆಲೆಯಲ್ಲಿ ತನ್ನ ಹಸ್ತ ಹಾಗೂ ಬೆರಳುಗಳ ಚಲನೆಯಿಂದಲೇ ನೃತ್ಯ ಮಾಡಿದ್ದಾರೆ. ಬಹಳ ಸುಂದರವಾಗಿ ಮೂಡಿಬಂದಿದೆ. ಅದರ ವಿಡಿಯೋ ಇಲ್ಲಿದೆ…

ಹಿತವಾದ ಮಳೆಗೆ  ಸಾಕಷ್ಟು ಹಾಡುಗಳು ಕ್ಲಿಕ್‌ ಆಗಿವೆ. ಈ ಹಾಡಿಗೆ ಹಸ್ತ ಹಾಗೂ ಬೆರಳುಗಳ ಚಲನೆಯಿಂದಲೇ ನೃತ್ಯ ಮಾಡಿರುವುದು ಇನ್ನಷ್ಟು ಸೊಗಸಾಗಿದೆ.  ಕನ್ನಡದ ಅದೆಷ್ಟೋ ಹಾಡುಗಳಿ ಮಳೆಗೆ ಸಂಬಂಧಿಸಿದ್ದು ಇದೆ. ಅಂದರೆ ಮಳೆಯೇ ಸೊಗಸು ಕವಿಗೆ. ಸಿನಿಮಾದಲ್ಲೂ ಮಳೆ ಹಾಡು ಕ್ಲಿಕ್‌ ಆಗಿರುವುದು ಹೆಚ್ಚು. ಭಾವನೆಗಳನ್ನೂ ಮಳೆಯ ಹಾಡಿನ ಮೂಲಕ ದಾಟಿಸುವ ಕೆಲಸವೂ ಸುಲಭವಾಗಿದೆ. ಭುವಿಗೆ ಇಳಿಯುವ ಮೊದಲ ಮಳೆಯಲ್ಲಿ ಅದೇನೋ ಮಾಂತ್ರಿಕ ಶಕ್ತಿಯಿದೆ. ಪ್ರತಿಬಾರಿ ಮಳೆಗಾಲ ಬಂದಾಗ ಈ ಹಾಡುಗಳನ್ನು ನೆನಪಾಗುತ್ತದೆ.

ಸ್ವಾತಿ ಮುತ್ತಿನ ಮಳೆ ಹನಿಯೇ, ಮುಂಗಾರು ಮಳೆಯೇ, ಮುತ್ತು ಮುತ್ತು ನೀರಾ ಹನಿಯಾ, ಬಂದ ಬಂದ ಮೇಘರಾಜ, ಎಲ್ಲೋ ಮಳೆಯಾಗಿದೆ ಇಂದು, ಮಳೆ ಬರುವ ಹಾಗಿದೆ, ಮೊದಲ ಮಳೆಯಂತೆ, ಮಳೆಯಲಿ ಜೊತೆಯಲಿ… ಹೀಗೇ ಹಲವು ಹಾಡುಗಳು “ಮಳೆ ಹಾಡು”ಗಳು ಕ್ಲಿಕ್‌ ಆಗಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಮರನಾಥದ ಹಿಮ ಶಿವಲಿಂಗ 90% ಕರಗಿತು…! ಹವಾಮಾನ ಬದಲಾವಣೆಯೇ ಕಾರಣವೇ?

ಅಮರನಾಥ ಯಾತ್ರೆ ಆರಂಭವಾದ ಕೆಲವೇ ದಿನಗಳಲ್ಲಿ ಹಿಮ ಶಿವಲಿಂಗವು 90%ಕ್ಕೂ ಹೆಚ್ಚು ಕರಗಿರುವುದಾಗಿ…

5 hours ago

16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿರ್ಬಂಧ – ಆಸ್ಟ್ರೇಲಿಯಾದ ಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿರ್ಬಂಧ ವಿಧಿಸಿರುವ ಆಸ್ಟ್ರೇಲಿಯಾದ ಕ್ರಮವನ್ನು ಪ್ರಧಾನಿ…

15 hours ago

ಎಲ್‌ ನಿನೊ ಎಫೆಕ್ಟ್‌ – ಮುಂದಿನ ವರ್ಷ ಮತ್ಸ್ಯೋದ್ಯಮಕ್ಕೆ ಸಂಕಷ್ಟ?

ಎಲ್‌ ನಿನೊ ಪರಿಣಾಮದಿಂದ 2027ರಲ್ಲಿ ಎಣ್ಣೆ ಸಾರ್ಡಿನ್ ಮೀನುಗಳ ಉತ್ಪಾದನೆ ಕುಸಿಯುವ ಸಾಧ್ಯತೆ…

15 hours ago

ಮುಂಗಾರು ಇದ್ದಕ್ಕಿದ್ದಂತೆ ದುರ್ಬಲವಾಗಿದ್ದೇಕೆ..? ಇಲ್ಲಿದೆ ವೈಜ್ಞಾನಿಕ ಕಾರಣ

ದೇಶದ ಬಹುತೇಕ ಭಾಗಗಳಿಂದ ಮಳೆ ಮೋಡಗಳು ಕಡಿಮೆಯಾಗಲು ಪಶ್ಚಿಮ ಪೆಸಿಫಿಕ್‌ನ ಪ್ರಬಲ ಚಂಡಮಾರುತ…

20 hours ago

ಮತ್ತೆ ಹೆಚ್ಚಿದ ದೇಶದ ಮಳೆ ಕೊರತೆ – ಜುಲೈ ಆರಂಭದ ಚೇತರಿಕೆ ಕುಂಠಿತ, ಮುಂಗಾರು ಮತ್ತೆ ದುರ್ಬಲ

ಜುಲೈ ಮೊದಲ ವಾರದ ಚೇತರಿಕೆಯ ಬಳಿಕ ದೇಶದ ಮುಂಗಾರು ಮತ್ತೆ ದುರ್ಬಲಗೊಂಡಿದ್ದು, ಮಳೆ…

20 hours ago

ಆರೋಪದ ಆಚೆ ನಿಂತು ಒಮ್ಮೆ ಯೋಚಿಸಿದ್ದೀರಾ..?

ಯಾರನ್ನಾದರೂ ಆರೋಪಿಸುವ ಮೊದಲು ಅವರ ಪರಿಸ್ಥಿತಿ ಅರ್ಥಮಾಡಿಕೊಳ್ಳುವ ಪ್ರಯತ್ನ ಮಾಡಿದರೆ ಅನೇಕ ಸಂಬಂಧಗಳು…

24 hours ago