Advertisement
MIRROR FOCUS

ಪಿಎಂ ಫಸಲ್‌‌‌‌ಬಿಮಾ ಯೋಜನೆ ವಿಸ್ತರಣೆ | ಕೇಂದ್ರ ಸಚಿವ ಸಂಪುಟ ಒಪ್ಪಿಗೆ

Share

ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ.ರೈತರ ಬದುಕಿನಲ್ಲಿ ಮಹತ್ವದ ಬದಲಾವಣೆ ತರುತ್ತಿರುವ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಗೆ ನೀಡುವ ಅನುದಾನ ಮೊತ್ತವನ್ನು 69 ಸಾವಿರದ 515 ಕೋಟಿ ರೂಪಾಯಿಗೆ ಏರಿಸಲಾಗಿದೆ. …..ಮುಂದೆ ಓದಿ….

ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಸಂಪುಟ ಸಭೆಯ ವಿವರಗಳನ್ನು ನೀಡಿದರು. ಹೊಸ ವರ್ಷದ ಮೊದಲ ಸಚಿವ ಸಂಪುಟ ಸಭೆಯನ್ನು ಪ್ರಧಾನಿಯವರು ರೈತರಿಗೆ ಸಮರ್ಪಿಸಿದ್ದಾರೆ.  ಸಚಿವ ಸಂಪುಟ ಸಭೆಯಲ್ಲಿ ರೈತರಿಗೆ ಸಂಬಂಧಿಸಿದ ವಿವಿಧ ಆಯಾಮಗಳ ಬಗ್ಗೆ ಚರ್ಚಿಸಲಾಗಿದ್ದು, ರೈತರ ಕಲ್ಯಾಣಕ್ಕೆ ಸಂಪೂರ್ಣ ಕೇಂದ್ರೀಕರಿಸಲಾಗಿದೆ.  ರೈತರ ಬದುಕಿನಲ್ಲಿ ಮಹತ್ವದ ಬದಲಾವಣೆ ತರುತ್ತಿರುವ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಗೆ ನೀಡುವ ಅನುದಾನ ಮೊತ್ತವನ್ನು 69 ಸಾವಿರದ 515 ಕೋಟಿ ರೂಪಾಯಿಗೆ ಏರಿಸಲಾಗಿದೆ. ಈ ನಿರ್ಧಾರದಿಂದ ನಾಲ್ಕು ಕೋಟಿ ರೈತರಿಗೆ ಪ್ರಯೋಜನವಾಗಲಿದೆ.  ಫಸಲ್ ಬಿಮಾ ಯೋಜನೆ ಮೂರನೇ ಅತಿದೊಡ್ಡ ವಿಮಾ ಯೋಜನೆಯಾಗಿದೆ. ಯೋಜನೆಯಡಿ ಕಳೆದ 8 ವರ್ಷಗಳಲ್ಲಿ 70 ಸಾವಿರ ಕೋಟಿ ರೂಪಾಯಿ ವಿಮಾ ಮೊತ್ತ ಪಾವತಿಸಲಾಗಿದೆ ಎಂದರು.

ಫಸಲ್ ಬಿಮಾ ಯೋಜನೆಯಡಿ ಆವಿಷ್ಕಾರ ಮತ್ತು ತಂತ್ರಜ್ಞಾನಕ್ಕೆ 800 ಕೋಟಿ ರೂಪಾಯಿ ನಿಧಿ ಒದಗಿಸಲಾಗಿದೆ.  ಯೋಜನೆಯಡಿ ಸುಲಭವಾಗಿ ನೋಂದಣಿ ಮಾಡಿಕೊಳ್ಳಲು ಮತ್ತು ವಿಮಾದಾರರ ವ್ಯಾಪ್ತಿ ಹೆಚ್ಚಿಸಲು ಸರ್ಕಾರ ಈ ಪ್ರಕ್ರಿಯೆಯನ್ನು ಸಂಪೂರ್ಣ ಡಿಜಿಟಲೀಕರಣಗೊಳಿಸಲು ನಿರ್ಧರಿಸಿದೆ.  ಈಶಾನ್ಯ ಮತ್ತು ಹಿಮಾಲಯ ಪ್ರಾಂತ್ಯದ ರಾಜ್ಯಗಳಿಗೆ ನಿಧಿಯನ್ನು  90:10 ಅನುಪಾತದಲ್ಲಿ, ಇತರ ರಾಜ್ಯಗಳಿಗೆ 50:50 ಅನುಪಾತದಲ್ಲಿ ನೀಡಲಾಗುವುದು.  ಯೋಜನೆಯಡಿ ಶೇಕಡಾ 88ರಷ್ಟು ರೈತರು ಕಡಿಮೆ ಆದಾಯ ಹೊಂದಿದವರಾಗಿದ್ದು, ಶೇಕಡಾ 57ರಷ್ಟು ರೈತರು ಒಬಿಸಿ, ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಸೇರಿದವರಾಗಿದ್ದಾರೆ ಎಂದರು.

50 ಕೆ.ಜಿ. ಡಿಎಪಿ ರಸಗೊಬ್ಬರ ಚೀಲಕ್ಕೆ 1 ಸಾವಿರದ 350 ರೂಪಾಯಿ ಮುಂದುವರಿಸಲಾಗಿದೆ.  ಇತರ ದೇಶಗಳಲ್ಲಿ ಡಿಎಪಿ ದರ 3 ಸಾವಿರಕ್ಕೂ ಅಧಿಕವಾಗಿದೆ.  ಈ ಪ್ಯಾಕೇಜ್ ಗೆ 3 ಸಾವಿರದ 850 ಕೋಟಿ ರೂಪಾಯಿ ವೆಚ್ಚವಾಗಲಿದೆ.  ಪ್ರಧಾನಿ ನರೇಂದ್ರ ಮೋದಿಯವರು 2014ರಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ಮಾರುಕಟ್ಟೆ ಏರಿಳಿತಗಳಿಂದ ರೈತರಿಗೆ ಹೊರೆಯಾಗದಂತೆ ಹಲವು ಮಹತ್ವದ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.  2014ರಿಂದ 2024ರ ವರೆಗೆ 11 ಲಕ್ಷ 90 ಸಾವಿರ ಕೋಟಿ ರೂಪಾಯಿ ರಸಗೊಬ್ಬರ ಸಬ್ಸಿಡಿ ನೀಡಲಾಗಿದೆ.  ಇದು 2004ರಿಂದ 2014ರ ವರೆಗೆ ನೀಡಲಾದ ಸಬ್ಸಿಡಿಗಿಂತ ಎರಡುಪಟ್ಟು ಹೆಚ್ಚು ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

3 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

4 hours ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

22 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

1 day ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

1 day ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

2 days ago