Advertisement
MIRROR FOCUS

ಪಿಎಂ ಫಸಲ್‌‌‌‌ಬಿಮಾ ಯೋಜನೆ ವಿಸ್ತರಣೆ | ಕೇಂದ್ರ ಸಚಿವ ಸಂಪುಟ ಒಪ್ಪಿಗೆ

Share

ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ.ರೈತರ ಬದುಕಿನಲ್ಲಿ ಮಹತ್ವದ ಬದಲಾವಣೆ ತರುತ್ತಿರುವ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಗೆ ನೀಡುವ ಅನುದಾನ ಮೊತ್ತವನ್ನು 69 ಸಾವಿರದ 515 ಕೋಟಿ ರೂಪಾಯಿಗೆ ಏರಿಸಲಾಗಿದೆ. …..ಮುಂದೆ ಓದಿ….

ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಸಂಪುಟ ಸಭೆಯ ವಿವರಗಳನ್ನು ನೀಡಿದರು. ಹೊಸ ವರ್ಷದ ಮೊದಲ ಸಚಿವ ಸಂಪುಟ ಸಭೆಯನ್ನು ಪ್ರಧಾನಿಯವರು ರೈತರಿಗೆ ಸಮರ್ಪಿಸಿದ್ದಾರೆ.  ಸಚಿವ ಸಂಪುಟ ಸಭೆಯಲ್ಲಿ ರೈತರಿಗೆ ಸಂಬಂಧಿಸಿದ ವಿವಿಧ ಆಯಾಮಗಳ ಬಗ್ಗೆ ಚರ್ಚಿಸಲಾಗಿದ್ದು, ರೈತರ ಕಲ್ಯಾಣಕ್ಕೆ ಸಂಪೂರ್ಣ ಕೇಂದ್ರೀಕರಿಸಲಾಗಿದೆ.  ರೈತರ ಬದುಕಿನಲ್ಲಿ ಮಹತ್ವದ ಬದಲಾವಣೆ ತರುತ್ತಿರುವ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಗೆ ನೀಡುವ ಅನುದಾನ ಮೊತ್ತವನ್ನು 69 ಸಾವಿರದ 515 ಕೋಟಿ ರೂಪಾಯಿಗೆ ಏರಿಸಲಾಗಿದೆ. ಈ ನಿರ್ಧಾರದಿಂದ ನಾಲ್ಕು ಕೋಟಿ ರೈತರಿಗೆ ಪ್ರಯೋಜನವಾಗಲಿದೆ.  ಫಸಲ್ ಬಿಮಾ ಯೋಜನೆ ಮೂರನೇ ಅತಿದೊಡ್ಡ ವಿಮಾ ಯೋಜನೆಯಾಗಿದೆ. ಯೋಜನೆಯಡಿ ಕಳೆದ 8 ವರ್ಷಗಳಲ್ಲಿ 70 ಸಾವಿರ ಕೋಟಿ ರೂಪಾಯಿ ವಿಮಾ ಮೊತ್ತ ಪಾವತಿಸಲಾಗಿದೆ ಎಂದರು.

ಫಸಲ್ ಬಿಮಾ ಯೋಜನೆಯಡಿ ಆವಿಷ್ಕಾರ ಮತ್ತು ತಂತ್ರಜ್ಞಾನಕ್ಕೆ 800 ಕೋಟಿ ರೂಪಾಯಿ ನಿಧಿ ಒದಗಿಸಲಾಗಿದೆ.  ಯೋಜನೆಯಡಿ ಸುಲಭವಾಗಿ ನೋಂದಣಿ ಮಾಡಿಕೊಳ್ಳಲು ಮತ್ತು ವಿಮಾದಾರರ ವ್ಯಾಪ್ತಿ ಹೆಚ್ಚಿಸಲು ಸರ್ಕಾರ ಈ ಪ್ರಕ್ರಿಯೆಯನ್ನು ಸಂಪೂರ್ಣ ಡಿಜಿಟಲೀಕರಣಗೊಳಿಸಲು ನಿರ್ಧರಿಸಿದೆ.  ಈಶಾನ್ಯ ಮತ್ತು ಹಿಮಾಲಯ ಪ್ರಾಂತ್ಯದ ರಾಜ್ಯಗಳಿಗೆ ನಿಧಿಯನ್ನು  90:10 ಅನುಪಾತದಲ್ಲಿ, ಇತರ ರಾಜ್ಯಗಳಿಗೆ 50:50 ಅನುಪಾತದಲ್ಲಿ ನೀಡಲಾಗುವುದು.  ಯೋಜನೆಯಡಿ ಶೇಕಡಾ 88ರಷ್ಟು ರೈತರು ಕಡಿಮೆ ಆದಾಯ ಹೊಂದಿದವರಾಗಿದ್ದು, ಶೇಕಡಾ 57ರಷ್ಟು ರೈತರು ಒಬಿಸಿ, ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಸೇರಿದವರಾಗಿದ್ದಾರೆ ಎಂದರು.

50 ಕೆ.ಜಿ. ಡಿಎಪಿ ರಸಗೊಬ್ಬರ ಚೀಲಕ್ಕೆ 1 ಸಾವಿರದ 350 ರೂಪಾಯಿ ಮುಂದುವರಿಸಲಾಗಿದೆ.  ಇತರ ದೇಶಗಳಲ್ಲಿ ಡಿಎಪಿ ದರ 3 ಸಾವಿರಕ್ಕೂ ಅಧಿಕವಾಗಿದೆ.  ಈ ಪ್ಯಾಕೇಜ್ ಗೆ 3 ಸಾವಿರದ 850 ಕೋಟಿ ರೂಪಾಯಿ ವೆಚ್ಚವಾಗಲಿದೆ.  ಪ್ರಧಾನಿ ನರೇಂದ್ರ ಮೋದಿಯವರು 2014ರಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ಮಾರುಕಟ್ಟೆ ಏರಿಳಿತಗಳಿಂದ ರೈತರಿಗೆ ಹೊರೆಯಾಗದಂತೆ ಹಲವು ಮಹತ್ವದ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.  2014ರಿಂದ 2024ರ ವರೆಗೆ 11 ಲಕ್ಷ 90 ಸಾವಿರ ಕೋಟಿ ರೂಪಾಯಿ ರಸಗೊಬ್ಬರ ಸಬ್ಸಿಡಿ ನೀಡಲಾಗಿದೆ.  ಇದು 2004ರಿಂದ 2014ರ ವರೆಗೆ ನೀಡಲಾದ ಸಬ್ಸಿಡಿಗಿಂತ ಎರಡುಪಟ್ಟು ಹೆಚ್ಚು ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?

ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…

34 minutes ago

ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!

ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…

7 hours ago

ಅಡಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ಪರಿಹಾರ ತೀರಾ ಕಡಿಮೆ…! ಪ್ರಕೃತಿ ವಿಕೋಪದಲ್ಲಿ ರೈತರಿಗೆ ಅನ್ಯಾಯ?

ಪ್ರಕೃತಿ ವಿಕೋಪದಿಂದ ಅಡಿಕೆ ತೋಟಗಳಿಗೆ ಆಗುವ ನಷ್ಟಕ್ಕೆ ಸಿಗುತ್ತಿರುವ ಎನ್‌ಡಿಆರ್‌ಎಫ್ ಪರಿಹಾರ ಮೊತ್ತ…

7 hours ago

ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಲ್ಲಿದೆ ಗೊತ್ತಾ..?

ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…

9 hours ago

ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ; ರಾಸಾಯನಿಕ ಮಿಶ್ರಣವೇ ಅಪಾಯ – ಎಸ್.ಆರ್. ಸತೀಶ್ಚಂದ್ರ

ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ…

10 hours ago

ಹವಾಮಾನ ವರದಿ | 04-07-2026 | ಜುಲೈ 10ರ ಬಳಿಕ ಕರ್ನಾಟಕದಲ್ಲಿ ಮುಂಗಾರು ದುರ್ಬಲ..? ಕರಾವಳಿ-ಮಲೆನಾಡಿನಲ್ಲಿ ಮಳೆ ಇಳಿಕೆಗೆ ಮುನ್ಸೂಚನೆ

ಜುಲೈ 10ರ ಬಳಿಕ ರಾಜ್ಯದಲ್ಲಿ ಮುಂಗಾರು ದುರ್ಬಲಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

11 hours ago