Advertisement
MIRROR FOCUS

ಬಾಹ್ಯಾಕಾಶ ನಿಲ್ದಾಣದಲ್ಲಿರುವ ಶುಕ್ಲಾ ಜೊತೆ ಪ್ರಧಾನಿ ವಿಡಿಯೋ ಸಂವಾದ

Share

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿರುವ   ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್  ಶುಭಾಂಶು ಶುಕ್ಲಾ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಸಂವಾದದ  ನಡೆಸಿದರು.

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳಿರುವ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅವರೊಂದಿಗೆ  ಪ್ರಧಾನಿ ನರೇಂದ್ರ ಮೋದಿ  ಅವರು ಬಾಹ್ಯಾಕಾಶ ನಿಲ್ದಾಣದ ಪರಿಸ್ಥಿತಿಯ ಕುರಿತು ವಿಚಾರ ವಿನಿಮಯ ಮಾಡಿಕೊಂಡರು. ಈ ವೇಳೆ ಪ್ರಧಾನಿ, ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳಿ ಇತಿಹಾಸ ಸೃಷ್ಟಿಸಿರುವ  ಶುಭಾಂಶು ಶುಕ್ಲಾ ಅವರನ್ನು ಅಭಿನಂದಿಸಿದರು. ” ನಿಮ್ಮ ಪ್ರಯಾಣ ಭಾರತೀಯರೆಲ್ಲರಿಗೂ ಸ್ಫೂರ್ತಿದಾಯಕವಾಗಿದೆ.  ನೀವು ತಾಯ್ನಾಡಿನಿಂದ ತುಂಬಾ ದೂರವಿದ್ದು, ಭಾರತೀಯರ ಹೃದಯದಲ್ಲಿದ್ದೀರಿ.  140 ಕೋಟಿ ಭಾರತೀಯರ ಭಾವನೆಗಳು  ನಿಮ್ಮೊಂದಿಗಿವೆ.   ಜೊತೆಗೆ  ಭಾರತೀಯರ ಉತ್ಸಾಹವು ಅಡಗಿದೆ.  ಬಾಹ್ಯಾಕಾಶದಲ್ಲಿ  ಭಾರತದ ಧ್ವಜವನ್ನು ಹಾರಿಸಿದ್ದಕ್ಕಾಗಿ ಮತ್ತೊಮ್ಮೆ ಅಭಿನಂದನೆಗಳು” ಎಂದು ಹೇಳಿದರು.

ಪ್ರಧಾನಿ ಅವರ ಪ್ರತಿಕ್ರಿಯೆಗೆ ಶುಭಾಂಶು ಶುಕ್ಲಾ , ತಮ್ಮ ಹಾಗೂ 140 ಕೋಟಿ ಭಾರತೀಯರ ಹಾರೈಕೆಗಾಗಿ ಧನ್ಯವಾದಗಳು,  ತಾವು ಇಲ್ಲಿ ಸುರಕ್ಷಿತ ಮತ್ತು ಆರಾಮದಿಂದಿದ್ದೇನೆ.  ಇದೊಂದು ಹೊಸ ಅನುಭವ.  ಇದು ನನಗೆ ಮಾತ್ರವಲ್ಲದೆ, ಇಡೀ ದೇಶದ ಪಯಣವಾಗಿದೆ.  ತಮ್ಮ ನಾಯಕತ್ವದಲ್ಲಿ ನಮ್ಮ ಕನಸುಗಳನ್ನು ಈಡೇರಿಸಿಕೊಳ್ಳಲು ಇಂದಿನ ಭಾರತ ಅನೇಕ ಅವಕಾಶಗಳನ್ನು ಕಲ್ಪಿಸಿಕೊಟ್ಟಿದೆ ಎಂದರು. ಬಾಹ್ಯಾಕಾಶ ಯಾನದಲ್ಲಿ   ಭಾರತವನ್ನು ಪ್ರತಿನಿಧಿಸಿದ್ದಕ್ಕಾಗಿ ನನಗೆ ಹೆಮ್ಮೆಯಾಗುತ್ತಿದೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಿಂದ ಭಾರತ ಸುಂದರವಾಗಿ ಕಾಣುತ್ತಿದೆ.  ಅಂತಾರಾಷ್ಟ್ರೀಯ ಬಾಹ್ಯಾಕಾಶ ಯಾನ ಕೈಗೊಳ್ಳಲು ವರ್ಷಗಳ ಕಾಲ ತರಬೇತಿ ಪಡೆದಿದ್ದು, ಸಹಕಾರಿಯಾಗಿದೆ. ಬಾಹ್ಯಾಕಾಶದಲ್ಲಿ ಗುರುತ್ವಾಕರ್ಷಣೆ ಇಲ್ಲದ ಕಾರಣ ಸಣ್ಣ ವಿಷಯಗಳು ಸಹ ಭಿನ್ನವಾಗಿವೆ. ಇಲ್ಲಿ ಮಲಗುವುದು ದೊಡ್ಡ ಸವಾಲು. ಪರಿಸರಕ್ಕೆ ಒಗ್ಗಿಕೊಳ್ಳಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತಿದೆ ಎಂದು ತಿಳಿಸಿದರು.

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ  ಭೂಮಿಯನ್ನು  ನೋಡಿದರೆ ವಿಭಿನ್ನವಾಗಿ ಕಾಣಿಸುತ್ತದೆ. ಭೂಮಿಯನ್ನು ಹೊರಗಿನಿಂದ ಯಾವುದೇ ಗಡಿ ಗೋಚರಿಸುವುದಿಲ್ಲ. ಯಾವುದೇ ದೇಶಗಳು ಅಸ್ತಿತ್ವದಲ್ಲಿಲ್ಲ. ನಾವೆಲ್ಲರೂ ಮಾನವೀಯತೆಯ ಭಾಗವಾಗಿದ್ದೇವೆ. ಭೂಮಿ ನಮ್ಮ ಒಂದೇ ಮನೆ. ನಾವೆಲ್ಲರೂ  ಅದರಲ್ಲಿದ್ದೇವೆ ಎನ್ನುವುದು ಇಲ್ಲಿಂದ ಭಾಸವಾಗುತ್ತದೆ. ಜೊತೆಗೆ  ಮೊದಲ ಬಾರಿಗೆ ಅಂತರಿಕ್ಷ ನಿಲ್ದಾಣದಿಂದ ಭಾರತವನ್ನು ನೋಡಿದಾಗ  ಭಾರತ ಭವ್ಯವಾಗಿ ಹಾಗೂ ದೊಡ್ಡದಾಗಿ ಕಾಣುತ್ತಿದೆ ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

8 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

1 day ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

1 day ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

1 day ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

1 day ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago