Advertisement
MIRROR FOCUS

ಬಾಹ್ಯಾಕಾಶ ನಿಲ್ದಾಣದಲ್ಲಿರುವ ಶುಕ್ಲಾ ಜೊತೆ ಪ್ರಧಾನಿ ವಿಡಿಯೋ ಸಂವಾದ

Share

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿರುವ   ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್  ಶುಭಾಂಶು ಶುಕ್ಲಾ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಸಂವಾದದ  ನಡೆಸಿದರು.

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳಿರುವ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅವರೊಂದಿಗೆ  ಪ್ರಧಾನಿ ನರೇಂದ್ರ ಮೋದಿ  ಅವರು ಬಾಹ್ಯಾಕಾಶ ನಿಲ್ದಾಣದ ಪರಿಸ್ಥಿತಿಯ ಕುರಿತು ವಿಚಾರ ವಿನಿಮಯ ಮಾಡಿಕೊಂಡರು. ಈ ವೇಳೆ ಪ್ರಧಾನಿ, ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳಿ ಇತಿಹಾಸ ಸೃಷ್ಟಿಸಿರುವ  ಶುಭಾಂಶು ಶುಕ್ಲಾ ಅವರನ್ನು ಅಭಿನಂದಿಸಿದರು. ” ನಿಮ್ಮ ಪ್ರಯಾಣ ಭಾರತೀಯರೆಲ್ಲರಿಗೂ ಸ್ಫೂರ್ತಿದಾಯಕವಾಗಿದೆ.  ನೀವು ತಾಯ್ನಾಡಿನಿಂದ ತುಂಬಾ ದೂರವಿದ್ದು, ಭಾರತೀಯರ ಹೃದಯದಲ್ಲಿದ್ದೀರಿ.  140 ಕೋಟಿ ಭಾರತೀಯರ ಭಾವನೆಗಳು  ನಿಮ್ಮೊಂದಿಗಿವೆ.   ಜೊತೆಗೆ  ಭಾರತೀಯರ ಉತ್ಸಾಹವು ಅಡಗಿದೆ.  ಬಾಹ್ಯಾಕಾಶದಲ್ಲಿ  ಭಾರತದ ಧ್ವಜವನ್ನು ಹಾರಿಸಿದ್ದಕ್ಕಾಗಿ ಮತ್ತೊಮ್ಮೆ ಅಭಿನಂದನೆಗಳು” ಎಂದು ಹೇಳಿದರು.

ಪ್ರಧಾನಿ ಅವರ ಪ್ರತಿಕ್ರಿಯೆಗೆ ಶುಭಾಂಶು ಶುಕ್ಲಾ , ತಮ್ಮ ಹಾಗೂ 140 ಕೋಟಿ ಭಾರತೀಯರ ಹಾರೈಕೆಗಾಗಿ ಧನ್ಯವಾದಗಳು,  ತಾವು ಇಲ್ಲಿ ಸುರಕ್ಷಿತ ಮತ್ತು ಆರಾಮದಿಂದಿದ್ದೇನೆ.  ಇದೊಂದು ಹೊಸ ಅನುಭವ.  ಇದು ನನಗೆ ಮಾತ್ರವಲ್ಲದೆ, ಇಡೀ ದೇಶದ ಪಯಣವಾಗಿದೆ.  ತಮ್ಮ ನಾಯಕತ್ವದಲ್ಲಿ ನಮ್ಮ ಕನಸುಗಳನ್ನು ಈಡೇರಿಸಿಕೊಳ್ಳಲು ಇಂದಿನ ಭಾರತ ಅನೇಕ ಅವಕಾಶಗಳನ್ನು ಕಲ್ಪಿಸಿಕೊಟ್ಟಿದೆ ಎಂದರು. ಬಾಹ್ಯಾಕಾಶ ಯಾನದಲ್ಲಿ   ಭಾರತವನ್ನು ಪ್ರತಿನಿಧಿಸಿದ್ದಕ್ಕಾಗಿ ನನಗೆ ಹೆಮ್ಮೆಯಾಗುತ್ತಿದೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಿಂದ ಭಾರತ ಸುಂದರವಾಗಿ ಕಾಣುತ್ತಿದೆ.  ಅಂತಾರಾಷ್ಟ್ರೀಯ ಬಾಹ್ಯಾಕಾಶ ಯಾನ ಕೈಗೊಳ್ಳಲು ವರ್ಷಗಳ ಕಾಲ ತರಬೇತಿ ಪಡೆದಿದ್ದು, ಸಹಕಾರಿಯಾಗಿದೆ. ಬಾಹ್ಯಾಕಾಶದಲ್ಲಿ ಗುರುತ್ವಾಕರ್ಷಣೆ ಇಲ್ಲದ ಕಾರಣ ಸಣ್ಣ ವಿಷಯಗಳು ಸಹ ಭಿನ್ನವಾಗಿವೆ. ಇಲ್ಲಿ ಮಲಗುವುದು ದೊಡ್ಡ ಸವಾಲು. ಪರಿಸರಕ್ಕೆ ಒಗ್ಗಿಕೊಳ್ಳಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತಿದೆ ಎಂದು ತಿಳಿಸಿದರು.

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ  ಭೂಮಿಯನ್ನು  ನೋಡಿದರೆ ವಿಭಿನ್ನವಾಗಿ ಕಾಣಿಸುತ್ತದೆ. ಭೂಮಿಯನ್ನು ಹೊರಗಿನಿಂದ ಯಾವುದೇ ಗಡಿ ಗೋಚರಿಸುವುದಿಲ್ಲ. ಯಾವುದೇ ದೇಶಗಳು ಅಸ್ತಿತ್ವದಲ್ಲಿಲ್ಲ. ನಾವೆಲ್ಲರೂ ಮಾನವೀಯತೆಯ ಭಾಗವಾಗಿದ್ದೇವೆ. ಭೂಮಿ ನಮ್ಮ ಒಂದೇ ಮನೆ. ನಾವೆಲ್ಲರೂ  ಅದರಲ್ಲಿದ್ದೇವೆ ಎನ್ನುವುದು ಇಲ್ಲಿಂದ ಭಾಸವಾಗುತ್ತದೆ. ಜೊತೆಗೆ  ಮೊದಲ ಬಾರಿಗೆ ಅಂತರಿಕ್ಷ ನಿಲ್ದಾಣದಿಂದ ಭಾರತವನ್ನು ನೋಡಿದಾಗ  ಭಾರತ ಭವ್ಯವಾಗಿ ಹಾಗೂ ದೊಡ್ಡದಾಗಿ ಕಾಣುತ್ತಿದೆ ಎಂದು ಹೇಳಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

7 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

13 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

22 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

1 day ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

2 days ago