Advertisement
MIRROR FOCUS

ಬಾಹ್ಯಾಕಾಶ ನಿಲ್ದಾಣದಲ್ಲಿರುವ ಶುಕ್ಲಾ ಜೊತೆ ಪ್ರಧಾನಿ ವಿಡಿಯೋ ಸಂವಾದ

Share

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿರುವ   ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್  ಶುಭಾಂಶು ಶುಕ್ಲಾ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಸಂವಾದದ  ನಡೆಸಿದರು.

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳಿರುವ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅವರೊಂದಿಗೆ  ಪ್ರಧಾನಿ ನರೇಂದ್ರ ಮೋದಿ  ಅವರು ಬಾಹ್ಯಾಕಾಶ ನಿಲ್ದಾಣದ ಪರಿಸ್ಥಿತಿಯ ಕುರಿತು ವಿಚಾರ ವಿನಿಮಯ ಮಾಡಿಕೊಂಡರು. ಈ ವೇಳೆ ಪ್ರಧಾನಿ, ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳಿ ಇತಿಹಾಸ ಸೃಷ್ಟಿಸಿರುವ  ಶುಭಾಂಶು ಶುಕ್ಲಾ ಅವರನ್ನು ಅಭಿನಂದಿಸಿದರು. ” ನಿಮ್ಮ ಪ್ರಯಾಣ ಭಾರತೀಯರೆಲ್ಲರಿಗೂ ಸ್ಫೂರ್ತಿದಾಯಕವಾಗಿದೆ.  ನೀವು ತಾಯ್ನಾಡಿನಿಂದ ತುಂಬಾ ದೂರವಿದ್ದು, ಭಾರತೀಯರ ಹೃದಯದಲ್ಲಿದ್ದೀರಿ.  140 ಕೋಟಿ ಭಾರತೀಯರ ಭಾವನೆಗಳು  ನಿಮ್ಮೊಂದಿಗಿವೆ.   ಜೊತೆಗೆ  ಭಾರತೀಯರ ಉತ್ಸಾಹವು ಅಡಗಿದೆ.  ಬಾಹ್ಯಾಕಾಶದಲ್ಲಿ  ಭಾರತದ ಧ್ವಜವನ್ನು ಹಾರಿಸಿದ್ದಕ್ಕಾಗಿ ಮತ್ತೊಮ್ಮೆ ಅಭಿನಂದನೆಗಳು” ಎಂದು ಹೇಳಿದರು.

ಪ್ರಧಾನಿ ಅವರ ಪ್ರತಿಕ್ರಿಯೆಗೆ ಶುಭಾಂಶು ಶುಕ್ಲಾ , ತಮ್ಮ ಹಾಗೂ 140 ಕೋಟಿ ಭಾರತೀಯರ ಹಾರೈಕೆಗಾಗಿ ಧನ್ಯವಾದಗಳು,  ತಾವು ಇಲ್ಲಿ ಸುರಕ್ಷಿತ ಮತ್ತು ಆರಾಮದಿಂದಿದ್ದೇನೆ.  ಇದೊಂದು ಹೊಸ ಅನುಭವ.  ಇದು ನನಗೆ ಮಾತ್ರವಲ್ಲದೆ, ಇಡೀ ದೇಶದ ಪಯಣವಾಗಿದೆ.  ತಮ್ಮ ನಾಯಕತ್ವದಲ್ಲಿ ನಮ್ಮ ಕನಸುಗಳನ್ನು ಈಡೇರಿಸಿಕೊಳ್ಳಲು ಇಂದಿನ ಭಾರತ ಅನೇಕ ಅವಕಾಶಗಳನ್ನು ಕಲ್ಪಿಸಿಕೊಟ್ಟಿದೆ ಎಂದರು. ಬಾಹ್ಯಾಕಾಶ ಯಾನದಲ್ಲಿ   ಭಾರತವನ್ನು ಪ್ರತಿನಿಧಿಸಿದ್ದಕ್ಕಾಗಿ ನನಗೆ ಹೆಮ್ಮೆಯಾಗುತ್ತಿದೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಿಂದ ಭಾರತ ಸುಂದರವಾಗಿ ಕಾಣುತ್ತಿದೆ.  ಅಂತಾರಾಷ್ಟ್ರೀಯ ಬಾಹ್ಯಾಕಾಶ ಯಾನ ಕೈಗೊಳ್ಳಲು ವರ್ಷಗಳ ಕಾಲ ತರಬೇತಿ ಪಡೆದಿದ್ದು, ಸಹಕಾರಿಯಾಗಿದೆ. ಬಾಹ್ಯಾಕಾಶದಲ್ಲಿ ಗುರುತ್ವಾಕರ್ಷಣೆ ಇಲ್ಲದ ಕಾರಣ ಸಣ್ಣ ವಿಷಯಗಳು ಸಹ ಭಿನ್ನವಾಗಿವೆ. ಇಲ್ಲಿ ಮಲಗುವುದು ದೊಡ್ಡ ಸವಾಲು. ಪರಿಸರಕ್ಕೆ ಒಗ್ಗಿಕೊಳ್ಳಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತಿದೆ ಎಂದು ತಿಳಿಸಿದರು.

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ  ಭೂಮಿಯನ್ನು  ನೋಡಿದರೆ ವಿಭಿನ್ನವಾಗಿ ಕಾಣಿಸುತ್ತದೆ. ಭೂಮಿಯನ್ನು ಹೊರಗಿನಿಂದ ಯಾವುದೇ ಗಡಿ ಗೋಚರಿಸುವುದಿಲ್ಲ. ಯಾವುದೇ ದೇಶಗಳು ಅಸ್ತಿತ್ವದಲ್ಲಿಲ್ಲ. ನಾವೆಲ್ಲರೂ ಮಾನವೀಯತೆಯ ಭಾಗವಾಗಿದ್ದೇವೆ. ಭೂಮಿ ನಮ್ಮ ಒಂದೇ ಮನೆ. ನಾವೆಲ್ಲರೂ  ಅದರಲ್ಲಿದ್ದೇವೆ ಎನ್ನುವುದು ಇಲ್ಲಿಂದ ಭಾಸವಾಗುತ್ತದೆ. ಜೊತೆಗೆ  ಮೊದಲ ಬಾರಿಗೆ ಅಂತರಿಕ್ಷ ನಿಲ್ದಾಣದಿಂದ ಭಾರತವನ್ನು ನೋಡಿದಾಗ  ಭಾರತ ಭವ್ಯವಾಗಿ ಹಾಗೂ ದೊಡ್ಡದಾಗಿ ಕಾಣುತ್ತಿದೆ ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

2 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

10 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

11 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

15 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

16 hours ago