ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

March 13, 2026
6:58 AM
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ. ದೇಶದ 9.32 ಕೋಟಿ ರೈತರಿಗೆ ₹18,640 ಕೋಟಿ DBT ಮೂಲಕ ಜಮೆಯಾಗಲಿದೆ.

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 22ನೇ ಕಂತಿನ ಹಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅಸ್ಸಾಂನ ಗುವಾಹಟಿಯಲ್ಲಿ ನಡೆಯಲಿರುವ ವಿಶೇಷ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಲಿದ್ದಾರೆ.

ಈ ಕಂತಿನಡಿ ದೇಶಾದ್ಯಂತ ಸುಮಾರು 9 ಕೋಟಿ 32 ಲಕ್ಷ ರೈತರ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆ (DBT) ಮೂಲಕ ಒಟ್ಟು ₹18,640 ಕೋಟಿ ರೂಪಾಯಿಗಳನ್ನು ವರ್ಗಾಯಿಸಲಾಗುತ್ತದೆ.

ಈ ಕುರಿತು ಮಾಹಿತಿ ನೀಡಿರುವ ಕೇಂದ್ರ ಕೃಷಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಅವರು, ಈ ಮಹತ್ವಾಕಾಂಕ್ಷೆಯ ಯೋಜನೆಯಡಿ ಇದುವರೆಗೆ ರೈತರಿಗೆ ₹4 ಲಕ್ಷ 9 ಸಾವಿರ ಕೋಟಿ ರೂಪಾಯಿಗಳಿಗೂ ಹೆಚ್ಚು ಮೊತ್ತವನ್ನು ವಿತರಿಸಲಾಗಿದೆ ಎಂದು ತಿಳಿಸಿದ್ದಾರೆ.

ಬಿಡುಗಡೆಯಾಗಲಿರುವ ಮುಂದಿನ ಕಂತಿನೊಂದಿಗೆ ಈ ಒಟ್ಟು ಮೊತ್ತವು ₹4 ಲಕ್ಷ 27 ಸಾವಿರ ಕೋಟಿ ರೂಪಾಯಿಗಳ ಗಡಿಯನ್ನು ಮೀರಲಿದೆ ಎಂದು ಅವರು ಹೇಳಿದ್ದಾರೆ.

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯು ಸಣ್ಣ ಮತ್ತು ಅತಿಸಣ್ಣ ರೈತರಿಗೆ ಆದಾಯ ಬೆಂಬಲ ಒದಗಿಸುವ ಉದ್ದೇಶದಿಂದ ಜಾರಿಯಲ್ಲಿದ್ದು, ವರ್ಷಕ್ಕೆ ಮೂರು ಕಂತುಗಳಲ್ಲಿ ₹6,000 ಸಹಾಯಧನವನ್ನು DBT ಮೂಲಕ ನೇರವಾಗಿ ರೈತರ ಖಾತೆಗೆ ಜಮಾ ಮಾಡಲಾಗುತ್ತದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Prime Minister Narendra Modi will release the 22nd installment of the PM-Kisan Samman Nidhi scheme in Guwahati. About ₹18,640 crore will be directly transferred to the bank accounts of 9.32 crore farmers, taking the total disbursal under the scheme beyond ₹4.27 lakh crore.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ
August 5, 2026
10:30 AM
by: ದ ರೂರಲ್ ಮಿರರ್.ಕಾಂ
ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ
August 5, 2026
9:09 AM
by: ದ ರೂರಲ್ ಮಿರರ್.ಕಾಂ
ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ
August 5, 2026
8:41 AM
by: ದ ರೂರಲ್ ಮಿರರ್.ಕಾಂ
ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ
August 4, 2026
11:23 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror