ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯ 23ನೇ ಕಂತಿನ ಆರ್ಥಿಕ ನೆರವನ್ನು ಜೂನ್ 20ರಂದು ಬಿಡುಗಡೆ ಮಾಡಲಾಗುತ್ತಿದೆ.
ಪ್ರಧಾನಮಂತ್ರಿ ಅವರು ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ಸಂಜೆ 4 ಗಂಟೆಗೆ ನಡೆಯಲಿರುವ ವಿಶೇಷ ಕಾರ್ಯಕ್ರಮದಲ್ಲಿ ದೇಶದ ರೈತರ ಖಾತೆಗಳಿಗೆ ನೇರ ನಗದು ವರ್ಗಾವಣೆ (DBT) ಮೂಲಕ ಹಣ ಜಮೆ ಮಾಡಲಿದ್ದಾರೆ. ಈ ದಿನವನ್ನು “PM-KISAN ಉತ್ಸವ ದಿವಸ್” ಎಂದು ಆಚರಿಸಲಾಗುತ್ತಿದೆ.
ಕರ್ನಾಟಕದ ರೈತರಿಗೆ ₹830.832 ಕೋಟಿ : 23ನೇ ಕಂತಿನ ಹಣ ಬಿಡುಗಡೆ ವೇಳೆ ಕರ್ನಾಟಕ ರಾಜ್ಯದ 41,54,160 ಫಲಾನುಭವಿ ರೈತರಿಗೆ ಒಟ್ಟು ₹830.832 ಕೋಟಿ ಆರ್ಥಿಕ ನೆರವು ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ಜಮೆಯಾಗಲಿದೆ.
ಈ ಯೋಜನೆಯಡಿ ಪ್ರತಿ ಅರ್ಹ ರೈತ ಕುಟುಂಬಕ್ಕೆ ವಾರ್ಷಿಕ ₹6,000 ಆರ್ಥಿಕ ನೆರವು ನೀಡಲಾಗುತ್ತದೆ. ಈ ಮೊತ್ತವನ್ನು ತಲಾ ₹2,000ರಂತೆ ಮೂರು ಸಮಾನ ಕಂತುಗಳಲ್ಲಿ ಪ್ರತಿ ನಾಲ್ಕು ತಿಂಗಳಿಗೊಮ್ಮೆ ರೈತರ ಖಾತೆಗೆ ವರ್ಗಾಯಿಸಲಾಗುತ್ತದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
2019ರಿಂದ ಯೋಜನೆ ಜಾರಿ : ಕರ್ನಾಟಕದಲ್ಲಿ ಫೆಬ್ರವರಿ 2019ರಿಂದ PM-KISAN ಯೋಜನೆ ಜಾರಿಯಲ್ಲಿದೆ. 2019ರ ಫೆಬ್ರವರಿ 1ರ ಅನ್ವಯ ಸಾಗುವಳಿ ಭೂಮಿ ಹೊಂದಿರುವ ಅರ್ಹ ರೈತ ಕುಟುಂಬಗಳು (ಗಂಡ, ಹೆಂಡತಿ ಹಾಗೂ ಅಪ್ರಾಪ್ತ ಮಕ್ಕಳು) ಈ ಯೋಜನೆಯ ಪ್ರಯೋಜನ ಪಡೆಯುತ್ತಿದ್ದಾರೆ.
ಕೃಷಿ ಚಟುವಟಿಕೆಗಳ ನಿರ್ವಹಣೆ, ಬಿತ್ತನೆ, ಗೊಬ್ಬರ ಖರೀದಿ, ಕಾರ್ಮಿಕ ವೆಚ್ಚ ಸೇರಿದಂತೆ ವಿವಿಧ ಕೃಷಿ ಅವಶ್ಯಕತೆಗಳಿಗೆ ಈ ನೆರವು ರೈತರಿಗೆ ಆರ್ಥಿಕ ಬೆಂಬಲ ಒದಗಿಸುತ್ತಿದೆ.
ರೈತರಿಗೆ ಸಕಾಲಿಕ ನೆರವು : ಪ್ರಧಾನ ಮಂತ್ರಿಗಳ ನೇರ ನಗದು ವರ್ಗಾವಣೆ ವ್ಯವಸ್ಥೆಯಿಂದ ರಾಜ್ಯದ ಲಕ್ಷಾಂತರ ರೈತ ಕುಟುಂಬಗಳಿಗೆ ಕೃಷಿ ಚಟುವಟಿಕೆಗಳ ನಿರ್ವಹಣೆಗೆ ಅಗತ್ಯವಿರುವ ಹಣಕಾಸಿನ ನೆರವು ಸಕಾಲದಲ್ಲಿ ದೊರೆಯಲಿದ್ದು, ಕೃಷಿ ಉತ್ಪಾದಕತೆ ಹೆಚ್ಚಿಸಲು ಸಹಕಾರಿಯಾಗಲಿದೆ.
The 23rd installment of the PM-KISAN scheme will be released on June 20, with the Prime Minister transferring funds directly to farmers’ bank accounts through DBT. In Karnataka, 41.54 lakh beneficiary farmers will receive a total assistance of ₹830.832 crore under the scheme, which provides ₹6,000 annually in three installments.

