ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM Kisan Yojana ) ಯೋಜನೆಯಡಿ ಪರಿಹಾರ ಪಡೆಯಲು ರೈತರು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಲು ಇದೇ ಸೆಪ್ಟೆಂಬರ್ 22 ಕೊನೆಯ ದಿನವಾಗಿದೆ. ರೈತರು ಇ-ಕೆವೈಸಿ ಮಾಡಿಸದಿದ್ದಲ್ಲಿ ಆರ್ಥಿಕ ನೆರವು ಸ್ಥಗಿತಗೊಳ್ಳಲಿದೆ.
ಸ್ಮಾರ್ಟ್ ಫೋನ್ ಬಳಸುವ ರೈತರು http://pmkisan.gov.in ಪೋರ್ಟಲ್ನ ಫಾರ್ಮರ್ಸ್ ಕೋರ್ನರ್ ನಲ್ಲಿ ಇ-ಕೆವೈಸಿ ಅವಕಾಶದಡಿ ತಮ್ಮ ಆಧಾರ್ ಸಂಖ್ಯೆಯನ್ನು ಮತ್ತು ಮೊಬೈಲ್ ಸಂಖ್ಯೆಯನ್ನು ದಾಖಲಿಸಿ ಇ-ಕೆವೈಸಿ ಮಾಡಿಸಿಕೊಳ್ಳಬಹುದು. ರೈತರು ನಾಗರಿಕ ಸೇವಾ ಕೇಂದ್ರ (ಸಿಎಸ್ಸಿ)/ ಗ್ರಾಮಒನ್ ಸೇವಾ ಕೇಂದ್ರದಲ್ಲಿಯೂ ಬಯೋಮೆಟ್ರಿಕ್ ಆಧಾರಿತವಾಗಿ ಇ-ಕೆವೈಸಿಯನ್ನು ಮಾಡಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಹತ್ತಿರದ ಹೋಬಳಿಯ ರೈತ ಸಂಪರ್ಕ ಕೇಂದ್ರ ಮತ್ತು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಮಳೆ ಕೊರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೂರ್ಣಾವಧಿ ಕೃಷಿ ಸಚಿವರನ್ನು ತಕ್ಷಣ ನೇಮಿಸಬೇಕು…
ವಿಶ್ವ ಯೋಗ ದಿನದ ಅಂಗವಾಗಿ ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆ ಉದ್ಯೋಗಿಗಳ ರಿಕ್ರಿಯೇಷನ್ ಸೆಂಟರ್…
ದೇಶದಲ್ಲಿ ಮುಂಗಾರು ಮಳೆ ಕೊರತೆ 40%ಕ್ಕೆ ಏರಿಕೆಯಾಗಿದ್ದು, ಪ್ರಮುಖ ಕೃಷಿ ಪ್ರದೇಶಗಳಲ್ಲಿ ಮೋಡಗಳ…
ಕೇರಳ ಸರ್ಕಾರ ರಬ್ಬರ್ ಬೆಂಬಲ ಬೆಲೆಯನ್ನು ₹200ರಿಂದ ₹250ಕ್ಕೆ ಹೆಚ್ಚಿಸಿದೆ. ಮಾರುಕಟ್ಟೆ ಬೆಲೆ…
ಮೂರು ವರ್ಷಗಳಲ್ಲಿ ದೇಶದ ಅರಣ್ಯ ಪ್ರದೇಶಗಳಲ್ಲಿ 28 ಲಕ್ಷಕ್ಕೂ ಹೆಚ್ಚು ಮರಗಳನ್ನು ಕಡಿಯಲು…
ಜೂನ್ 30ರೊಳಗೆ LPG e-KYC ಪೂರ್ಣಗೊಳಿಸುವಂತೆ ಗ್ರಾಹಕರಿಗೆ ಸೂಚನೆ ನೀಡಲಾಗಿದೆ. e-KYC ಬಾಕಿ…